ಮುಳಬಾಗಿಲು | ರೈತರ ಬೆಳೆಗಳಿಗೆ ಲಾಭದಾಯಕ ಪರಿಹಾರ ನೀಡಲು ಕಿಸಾನ್‌ ಸಂಘ ಮನವಿ

Date:

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಪರಿಹಾರ ಘೋಷಿಸಬೇಕು ಎಂದು ಭಾರತೀಯ ಕಿಸಾನ್‌ ಸಂಘ ಒತ್ತಾಯಿಸಿದೆ.

ಮಾವಿನ ಹಣ್ಣು ಮತ್ತು ಟೊಮೆಟೊಗೆ ಲಾಭದಾಯಕ ಬೆಲೆ ನೀಡಬೇಕು. ಮಾವಿಗೆ ಪ್ರತಿ ಎಕರೆಗೆ 50 ಸಾವಿರ ರೂಗಳ ಪರಿಹಾರವನ್ನು ರೈತರ ಖಾತೆಗೆ ಸರ್ಕಾರ ತುಂಬಿಕೊಡಬೇಕು ಎಂದು ಆಗ್ರಹಿಸಿ ಮುಳಬಾಗಿಲು ತಾಲೂಕು ಕಚೇರಿ ಮುಂದೆ ಧರಣಿ ನಡೆಸಿ ಮುಖ್ಯಮಂತ್ರಿಗಳಿಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಕೋಲಾರ ಜಿಲ್ಲಾಧಿಕಾರಿಗಳಿಗೆ ಉಪ ತಹಶೀಲ್ದಾರ್ ಜಯಶ್ರೀ ಮೂಲಕ ಮನವಿ ಸಲ್ಲಿಸಲಾಯಿತು.

ಕೋಲಾರ ಜಿಲ್ಲೆಯ ರೈತರು ಕೊಳವೆ ಬಾವಿಗಳ ಸಹಾಯದಿಂದ ಕೃಷಿ ಮಾಡಿ ವಿಶೇಷವಾಗಿ ತೋಟಗಾರಿಕೆ ಬೆಳೆಗಳಾದ ಮಾವು, ಜಮ್ಮುನೇರಳೆ, ಸೀಬೆ ಬೆಳೆಗಳನ್ನು ಬೆಳೆದಿದ್ದರೂ ಫಸಲು ಬಂದಾಗ ಮಾರುಕಟ್ಟೆ ಸಿಗದೆ ಫಸಲನ್ನು ಗಿಡದಿಂದ ಬಿಡಿಸುವ ಕೂಲಿ ಸಹ ಸಿಗುತ್ತಿಲ್ಲ. ಆದುದರಿಂದ ಗಿಡ-ಮರಗಳಲ್ಲೇ ಫಸಲು ನಾಶವಾಗಿದ್ದು ಸರ್ಕಾರ ಈ ಬಗ್ಗೆ ಗಮನವಹಿಸಿ ಬೆಳೆಗಾರರ ರಕ್ಷಣೆಗೆ ಧಾವಿಸಬೇಕು ಎಂದು ಬಿಕೆಎಸ್ ಕೋಲಾರ ಜಿಲ್ಲಾ ಮಹಿಳಾ ಪ್ರಮುಖರು ಹಾಗೂ ಹನುಮನಹಳ್ಳಿ ಗ್ರಾ. ಪಂ. ಅಧ್ಯಕ್ಷೆ ಭೀಮಾಪುರ ಬಿ. ಎಸ್. ಶಶಿಕಲಾ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಒಂದು ವರ್ಷದಿಂದ ರೈತರು ಬೆಳೆದ ಫಸಲು ಉತ್ತಮವಾಗಿ ಬಂದರೂ ಉತ್ತಮ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಿಲ್ಲೆಯ ರೈತರ ನೆರವಿಗೆ ಮುಂದಾಗಬೇಕು. ಮಾವಿಗೆ ಘೋಷಣೆ ಮಾಡಿರುವ ಬೆಂಬಲ ಬೆಲೆ ಫಸಲು ಬಿಡಿಸುವ ಕೂಲಿಗೂ ಸಾಕಾಗುತ್ತಿಲ್ಲ. ಎಪಿಎಂಸಿ ಮಾರುಕಟ್ಟೆಗೆ ತೆಗೆದುಕೊಂಡು ಬರುವ ವಾಹನ ಬಾಡಿಗೆ, ತೂಕ ಮಾಡಿಸುವ ಶುಲ್ಕ ಸೇರಿದಂತೆ ರೈತರು ತಂದ ಮಾವಿನ ಹಣ್ಣಿಗೆ ರೈತನ ಕೈಯಿಂದಲೇ ಹೆಚ್ಚುವರಿಯಾಗಿ ವೆಚ್ಚವಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಮಾವಿನ ಗಿಡಮರಗಳು ಇರುವ ತೋಟಗಳಿಗೆ ಜಿಪಿಎಸ್ ಮೂಲಕ ಫೋಟೋಗ್ರಫಿ ಮಾಡಿ ತೋಟಗಾರಿಕೆ ಇಲಾಖೆಯಲ್ಲಿ ಒಂದು ಎಕರೆಗೆ ನಿರ್ವಹಣಾ ವೆಚ್ಚ ಸೇರಿ 50 ಸಾವಿರ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಬೆಳೆಗಾರರೊಂದಿಗೆ ಧರಣಿ ಹಮ್ಮಿಕೊಳ್ಳುವುದಾಗಿ” ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಮನ್ನೇನಹಳ್ಳಿ ಕೆ ರಘುನಾಥ್ ರೆಡ್ಡಿ ಎಚ್ಚರಿಸಿದರು.

“ಪಿ ನಂಬರ್ ಸಮಸ್ಯೆಯನ್ನು ತಾಲೂಕಿನಲ್ಲಿ ಕನಿಷ್ಠ 3 ತಿಂಗಳ ಒಳಗೆ ಬಗೆಹರಿಸಬೇಕು. ಕೃಷಿ ಚಟುವಟಿಕೆಗಳಿಗೆ ಸಹಕಾರಿ ಬ್ಯಾಂಕುಗಳು ಸೇರಿದಂತೆ ವಾಣಿಜ್ಯ ಬ್ಯಾಂಕುಗಳಲ್ಲಿ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಬೇಕು. ಟೊಮೆಟೊ ಸೇರಿದಂತೆ ಹಣ್ಣು ತರಕಾರಿಗಳನ್ನು ಬೆಳೆದಿರುವ ರೈತರಿಗೆ ಬೆಲೆ ಕುಸಿತ ಉಂಟಾದ ತಕ್ಷಣ ನಷ್ಟವಾಗದ ರೀತಿಯಲ್ಲಿ ಸರ್ಕಾರ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ ಪರಿಹಾರ ನೀಡಬೇಕು” ಎಂದು ಜಿಲ್ಲಾ ಉಪಾಧ್ಯಕ್ಷ ಅರಹಳ್ಳಿ ಶ್ರೀನಿವಾಸ ಗೌಡ ಆಗ್ರಹಿಸಿದರು.

ಇದನ್ನೂ ಓದಿ: ಕೋಲಾರ | ರೈತರ ಕೃಷಿ ಭೂಮಿ ತಂಟೆಗೆ ಸರ್ಕಾರ ಬರೋದು ಸರಿಯಲ್ಲ: ನಳಿನಿ ಗೌಡ

“ಕುರಿ, ಮೇಕೆ, ಹಸು, ಎಮ್ಮೆ ಸೇರಿದಂತೆ ಜಾನುವಾರುಗಳ ಮೇವಿಗೆ ಪ್ರತಿ ಗ್ರಾಮದಲ್ಲೂ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಸರ್ಕಾರಿ ಜಮೀನುಗಳಲ್ಲಿ ಹುಲ್ಲು ಬೆಳೆಸಿ ಜಾನುವಾರಗಳಿಗೆ ಮೇವು, ನೀರು ಸಿಗುವಂತೆ ಮಾಡಬೇಕು. ಕೆರೆಕುಂಟೆಗಳ ಹೂಳು ತೆಗೆದು ಅಭಿವೃದ್ಧಿಪಡಿಸಿ ರೈತರು ಮತ್ತು ಕೃಷಿಗೆ ಉತ್ತೇಜನ ನೀಡಬೇಕು” ಎಂದು ಜಿಲ್ಲಾ ಕೋಶಾಧ್ಯಕ್ಷ ವಕೀಲ ವಿ. ಜಯಪ್ಪ ಮನವಿ ಮಾಡಿದರು.

ಬಿಕೆಎಸ್ ತಾಲೂಕು ಅಧ್ಯಕ್ಷ ಉಗಣಿ ಆರ್. ನಾರಾಯಣಗೌಡ, ಉಪಾಧ್ಯಕ್ಷ ವಿ. ಮುನಿ ರಾಮಯ್ಯ, ತಿರುಮನಹಳ್ಳಿ ಚಂದ್ರಶೇಖರ್, ಕಾರ್ಯದರ್ಶಿ ಏತ್ತೂರಹಳ್ಳಿ ಸತೀಶ್ ಕುಮಾರ್, ಸಂಚಾಲಕ ನಿವೃತ್ತ ಮುಖ್ಯೋಪಾಧ್ಯಾಯ ಹಳೇಕುಪ್ಪ ಚಂಗಲರಾಯಪ್ಪ, ಜಿಲ್ಲಾ ಮಾಜಿ ಅಧ್ಯಕ್ಷ ಕೆ. ರೋಹನ್ ಕುಮಾರ್, ತಾಲೂಕು ಮಹಿಳಾ ಪ್ರಮುಖರಾದ ಮುಡಿಯನೂರು ಜಯಲಕ್ಷ್ಮಮ್ಮ, ಬಜಾರು ರಸ್ತೆಯ ವಿಘ್ನೇಶ್ವರ ದೇವಾಲಯದ ಧರ್ಮದರ್ಶಿ ಪಿ. ಎಂ. ರಘುನಾಥ್, ಮುಖಂಡ ನಂಗಲಿ ಕೆ. ಸತೀಶ್ ಕುಮಾರ್, ಮಿಟ್ಟೂರು ಶಂಕರಪ್ಪ, ಶ್ರೀನಿವಾಸ್ ಬಾಬು, ಉದಯ್ ಕುಮಾರ್, ಆರ್. ಕೃಷ್ಣಪ್ಪ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...