ಔರಾದ್‌ | ರಸ್ತೆ ಬದಿ ಮುಳ್ಳು ಕಂಟಿ : ಸಂಚಾರಕ್ಕೆ ಗೋಳು

Date:

ಔರಾದ್‌ ತಾಲೂಕಿನ ಖಾನಾಪುರ ಗ್ರಾಮದಿಂದ ಗಡಿಕುಶನೂರ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಜಾಲಿ ಮುಳ್ಳಿನ ಕಂಟಿಗಳು ಅಪಘಾತಕ್ಕೆ ಆಹ್ವಾನಿಸುವಂತೆ ತಲೆಯೆತ್ತರಕ್ಕೆ ಬೆಳೆದು ನಿಂತಿವೆ.

ರಸ್ತೆ ಬದಿಯ ಎರಡು ಕಡೆಗಳಲ್ಲಿ ಜಾಲಿ ಮುಳ್ಳಿನ ಟೊಂಗೆಗಳು ರಸ್ತೆಗೆ ಚಾಚಿಕೊಂಡಿವೆ. ಇದರಿಂದ ವಾಹನ ಸವಾರರು, ಕೂಲಿಕಾರ್ಮಿಕರು ಹಾಗೂ ಸಾರ್ವಜನಿಕರು ನಿತ್ಯ ಸಂಚರಿಸಲು ತೊಂದರೆಯಾಗುತ್ತಿದೆ. ಅದರಲ್ಲೂ ರಾತ್ರಿ ವೇಳೆ ಸಂಚರಿಸಲು ಭಯವಾಗುತ್ತಿದೆ. ಎದುರಿಗೆ ಬರುವ ವಾಹನಗಳಿಗೆ ಬೈಕ್ ಸವಾರರು ಬೈಪಾಸ್ ಆಗಬೇಕಾದರೆ ಜಾಲಿ ಮುಳ್ಳು ಮೈಗೆ ಚುಚ್ಚುತ್ತಿವೆʼ ಎಂದು ಸ್ಥಳೀಯರು ದೂರಿದ್ದಾರೆ.

ʼಈ ರಸ್ತೆ ಮಧ್ಯ ಅಲ್ಲಲ್ಲಿ ಗುಂಡಿಗಳು ತೇಲಿದ್ದು ಮಳೆಗಾಲದಲ್ಲಿ ಓಡಾಡಲು ಸಮಸ್ಯೆಯಾಗುತ್ತಿದೆ. ರಸ್ತೆಯುದ್ದಕ್ಕೂ ಯಾವುದೇ ನಾಮ ಫಲಕ ಹಾಕದ ಕಾರಣ ಅಪರಿಚಿತ ವಾಹನ ಸವಾರರಿಗೆ ದಿಕ್ಕುದೋಚದಂತಾಗಿದೆ. ಖಾನಾಪೂರ ಕ್ರಾಸ್ ಬಳಿ ಎರಡು ಕಡೆ ನಾಮಪಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕು ಖಾನಾಪೂರ-ಗಡಿಕುಶನೂರ ಗ್ರಾಮಗಳ ನಡುವೆ ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆ ಶಿಥಿಲಗೊಂಡು ಕಬ್ಬಿಣದ ಸರಳು ತೇಲಿವೆ. ಇದರಿಂದ ಪ್ರಯಾಣಿಕರು ಆತಂಕದಲ್ಲೇ ಸಂಚಾರ ಮಾಡುವಂತಾಗಿದೆʼ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು ರಸ್ತೆ ಬದಿ ಬೆಳೆದ ಅನಗತ್ಯ ಜಾಲಿ ಮುಳ್ಳು ಕಂಟಿಗಳನ್ನು ತೆರವುಗೊಳಿಸಿ ರಸ್ತೆ ಗುಂಡಿ ಮುಚ್ಚಬೇಕು. ರಸ್ತೆಯಲ್ಲಿ ಸಂಚಾರಿ ನಿಯಮದ ನಾಮಫಲಕ ಅಳಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕುʼ ಎಂದು ಖಾನಾಪುರ ನಿವಾಸಿ ಸಿದ್ದು ಸ್ವಾಮಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...