ಮುಂಡಗೋಡ | ತಾಲ್ಲೂಕಿನ ಸಾಲಗಾಂವದಲ್ಲಿ ₹1.76 ಲಕ್ಷ ಮೌಲ್ಯದ ಭತ್ತ–ಭತ್ತದ ಹುಲ್ಲು ಕಳವು ಪ್ರಕರಣ ದಾಖಲು

Date:

ಮುಂಡಗೋಡ: ತಾಲ್ಲೂಕಿನ ಸಾಲಗಾಂವ ಗ್ರಾಮದಲ್ಲಿ ರೈತನ ಜಮೀನಿನಿಂದ ಭತ್ತ ಹಾಗೂ ಭತ್ತದ ಹುಲ್ಲನ್ನು ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಬೆಳೆದ ಬೆಳೆಯನ್ನು ಕತ್ತರಿಸಿ ಕಳುವು ಮಾಡಿಕೊಂಡ ಹೋದ ಘಟನೆ ಬೆಳಕಿಗೆ ಬಂದಿದೆ. ರೈತ ಮಹಿಳೆ ನೀಡಿದ ದೂರಿನನ್ವಯ ಮೂವರು ಮಹಿಳೆಯರು ಹಾಗೂ ಅವರ ಮಕ್ಕಳು ಈ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಿ ಅವರು ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಫಿರ್ಯಾದಿಯವರ ದೂರಿನ ಪ್ರಕಾರ, ಆರೋಪಿತರಾದ ನೀಲವ್ವ ಕೋಂ. ಫಕ್ಕೀರಸ್ವಾಮಿ ಹರಿಜನ, ಕುಸಮಾ ಕೋಂ. ಫಕ್ಕೀರಸ್ವಾಮಿ ಹರಿಜನ ಹಾಗೂ ರೇಣುಕಾ ಕೋಂ. ನಾಗಪ್ಪ ಹರಿಜನ, ಸಾಲಗಾಂವ ನಿವಾಸಿಗಳು—ಇವರು ತಮ್ಮ ಮಕ್ಕಳೊಂದಿಗೆ ಸೇರಿಕೊಂಡು, ನವೆಂಬರ್ 15ರ ರಾತ್ರಿ 8 ಗಂಟೆಯಿಂದ ನವೆಂಬರ್ 16ರ ಬೆಳಿಗ್ಗೆ 10 ಗಂಟೆ ಸಮಯದೊಳಗೆ ಸರ್ವೆ ನಂ.217ರ, ಜಾಗ 4–38 ಎಕರೆ ಭತ್ತದ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ, ಜಮೀನಿನಲ್ಲಿ ಬೆಳೆದಿದ್ದ ಸುಮಾರು 120 ಚೀಲ ಭತ್ತ (ಅದರ ಮೌಲ್ಯ ರೂ. 1,60,000) ಹಾಗೂ 160 ಪೆಂಡಿ ಭತ್ತದ ಹುಲ್ಲು (ಅದರ ಮೌಲ್ಯ ರೂ. 16,000)ಗಳನ್ನು ಕತ್ತರಿಸಿ ಕಳವು ಮಾಡಿಕೊಂಡು ಹೋಗಿದ್ದಾರೆ, ಹಾಗೂ ಕಳ್ಳತನ ಮಾಡಿದ ಭತ್ತವನ್ನು ಮಾಲತೇಶ ತೊಂಡರು (ಅಜ್ಜಿಹಳ್ಳಿ) ಇವರ ಟ್ರಾಕ್ಟರ್ ಮೂಲಕ ಸಾಗಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಘಟನೆಯ ಬಗ್ಗೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಕಳುವಾದ ಬೆಳೆಸಾಮಾನುಗಳ ಬಗ್ಗೆ ಪರಿಶೀಲನೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...