ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

Date:

ಮುಂಡಗೋಡ: ತಾಲೂಕಿನಾದ್ಯಂತ ಅಕ್ರಮ ಇಟ್ಟಿಗೆ ಭಟ್ಟಿಗಳು ಪರಿಸರ ಮತ್ತು ಅರಣ್ಯ ಸಂಪತ್ತನ್ನು ನುಂಗಿ ಹಾಕುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಕುರಿತು ಮಾಧ್ಯಮಗಳಲ್ಲಿ ಸವಿಸ್ತಾರವಾದ ವರದಿಗಳು ಪ್ರಕಟವಾಗಿ, ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದರೂ ಸಹ, ಇಲ್ಲಿಯವರೆಗೆ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳದಿರುವುದು ಆಡಳಿತ ಯಂತ್ರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಇತ್ತೀಚೆಗೆ ನಡೆದ ಸ್ಥಳೀಯ ‘ರಿಯಾಲಿಟಿ ಚೆಕ್’ ವೇಳೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಭಟ್ಟಿಗಳು ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ನಡೆಯುತ್ತಿರುವುದು ಕಂಡುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಲುಪಿಸಿದ್ದರೂ, ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000411022

ಅನೇಕ ಇಟ್ಟಿಗೆ ಭಟ್ಟಿ ಮಾಲೀಕರು “ನಾವು ನಮ್ಮ ಸ್ವಂತ ಜಮೀನಿನಲ್ಲೇ ಇಟ್ಟಿಗೆ ತಯಾರಿಸುತ್ತಿದ್ದೇವೆ, ಇದಕ್ಕೆ ಅನುಮತಿ ಬೇಕಿಲ್ಲ” ಎಂದು ಅಧಿಕಾರಿಗಳ ಮುಂದೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ಕರ್ನಾಟಕ ಭೂ ಕಂದಾಯ ಕಾಯ್ದೆಯ ಪ್ರಕಾರ, ಯಾವುದೇ ಕೃಷಿ ಭೂಮಿಯಲ್ಲಿ ವಾಣಿಜ್ಯ ಉದ್ದೇಶದ ಇಟ್ಟಿಗೆ ಭಟ್ಟಿ ನಡೆಸುವಂತಿಲ್ಲ; ಅದಕ್ಕೆ ಕಡ್ಡಾಯವಾಗಿ ಭೂ ಪರಿವರ್ತನೆ (NA) ಮಾಡಿಸಿರಬೇಕು. ಭೂಮಿ ಯಾರದ್ದೇ ಆಗಿರಲಿ, ಮಣ್ಣು ಎನ್ನುವುದು ಸರ್ಕಾರದ ನೈಸರ್ಗಿಕ ಸಂಪತ್ತು.

‘ಕರ್ನಾಟಕ ಸಣ್ಣ ಖನಿಜ ರಿಯಾಯಿತಿ ನಿಯಮಾವಳಿ’ ಅಡಿಯಲ್ಲಿ ಮಣ್ಣು ತೆಗೆಯಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದು ಸರ್ಕಾರಕ್ಕೆ ರಾಯಧನ (Royalty) ಪಾವತಿಸುವುದು ಕಡ್ಡಾಯವಾಗಿದೆ. ಈ ರಾಯಧನ ಪಾವತಿಸದೆ ಮಣ್ಣು ಎತ್ತುವುದು ನೇರವಾಗಿ ‘ಅಕ್ರಮ ಗಣಿಗಾರಿಕೆ’ ವ್ಯಾಪ್ತಿಗೆ ಬರುತ್ತದೆ. ಅಧಿಕಾರಿಗಳಿಗೆ ಈ ಕಾನೂನು ತಿಳಿದಿದ್ದರೂ, ಮಾಲೀಕರ ಮಾತು ಕೇಳಿ ಸುಮ್ಮನಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಪರವಾನಗಿ ಇಲ್ಲದ ಭಟ್ಟಿಗಳು ಅರಣ್ಯದ ಮಣ್ಣು ಮತ್ತು ಕಟ್ಟಿಗೆಯನ್ನು ಲೂಟಿ ಮಾಡುತ್ತಿದ್ದರೂ ಅರಣ್ಯ ಇಲಾಖೆ ಮೌನಕ್ಕೆ ಶರಣಾಗಿದೆ. ಹೆಸ್ಕಾಂನ ವಿದ್ಯುತ್ ಕಂಬಗಳಿಂದ ನೇರವಾಗಿ ಅಕ್ರಮ ಸಂಪರ್ಕ ಪಡೆದು ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡುತ್ತಿದ್ದರೂ ಇಲಾಖೆಯು ಅತ್ತ ತಿರುಗಿ ನೋಡುತ್ತಿಲ್ಲ. ಇದು ಅಧಿಕಾರಿಗಳು ಮತ್ತು ಅಕ್ರಮ ಭಟ್ಟಿ ಮಾಲೀಕರ ನಡುವೆ ಇರುವ ಸಂಬಂಧದ ಫಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ವರದಿಗಳು ಪ್ರಕಟವಾದಾಗಲೆಲ್ಲಾ ‘ಪರಿಶೀಲಿಸುತ್ತೇವೆ’ ಎಂಬ ಹಾರಿಕೆಯ ಉತ್ತರ ನೀಡುವ ಅಧಿಕಾರಿಗಳು, ವಾಸ್ತವದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ರಾಯಧನ ಮತ್ತು ತೆರಿಗೆ ವಂಚನೆಯಾಗುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಮೌನ ವಹಿಸಿರುವುದು ಆಶ್ಚರ್ಯಕರವಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಮಣ್ಣಿನ ಲೂಟಿ ಮತ್ತು ಗಾಳಿಯ ಮಾಲಿನ್ಯದಿಂದ ಸ್ಥಳೀಯ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದರೂ, ಮಾಲಿನ್ಯ ನಿಯಂತ್ರಣ ಮಂಡಳಿಯು ಯಾವುದೇ ನೋಟಿಸ್ ನೀಡಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಯಿಂದಾಗಿ ಅಕ್ರಮ ನಡೆಸುವವರಿಗೆ ಭಯವೇ ಇಲ್ಲದಂತಾಗಿದ್ದು, ಅವರು ಬಹಿರಂಗವಾಗಿಯೇ ಕಾನೂನು ಉಲ್ಲಂಘಿಸುತ್ತಿದ್ದಾರೆ.

ಇನ್ನಾದರೂ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಕೇವಲ ಕಾಗದದ ಮೇಲೆ ಆದೇಶ ಹೊರಡಿಸದೆ, ಸ್ಥಳಕ್ಕೆ ಭೇಟಿ ನೀಡಿ ಅನಧಿಕೃತ ಭಟ್ಟಿಗಳಿಗೆ ಬೀಗ ಜಡಿಯುವ ಕೆಲಸವಾಗಬೇಕು. ಪರಿಸರ ನಾಶ ಮಾಡುವ ಮತ್ತು ಸರ್ಕಾರದ ಆದಾಯಕ್ಕೆ ಕನ್ನ ಹಾಕುವ ಇಂತಹ ಮಾಫಿಯಾಗಳಿಗೆ ಕಡಿವಾಣ ಹಾಕದಿದ್ದರೆ, ಮುಂಡಗೋಡಿನ ನೈಸರ್ಗಿಕ ಸಂಪತ್ತು ಸಂಪೂರ್ಣವಾಗಿ ಬರಿದಾಗುವುದರಲ್ಲಿ ಸಂಶಯವಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...