ಮುಂಡಗೋಡ | ರಾಮಾಪುರ ಗ್ರಾಮದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ

Date:

ಮುಂಡಗೋಡ ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗ್ರಾಮ ಅಭಿವೃದ್ಧಿ ಸಮಿತಿ, ಲೊಯೋಲ ವಿಕಾಸ ಕೇಂದ್ರ–ಮುಂಡಗೋಡ ಹಾಗೂ ಯುವರತ್ನ ಯುವ ಒಕ್ಕೂಟ–ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಲೊಯೋಲ ವಿಕಾಸ ಕೇಂದ್ರದ ಕಾರ್ಯಕರ್ತ ಭರಮಣ್ಣ ಚಕ್ರಸಾಲಿ ಮಾತಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಸಂವಿಧಾನ ರಚನೆಗೆ ಅವರ ಕೊಡುಗೆ ಹಾಗೂ ಅವರು ನೀಡಿದ “ಶಿಕ್ಷಣ–ಸಂಘಟನೆ–ಹೋರಾಟ” ತತ್ವಗಳ ಬಗ್ಗೆ ಗ್ರಾಮಸ್ಥರಿಗೆ ವಿವರಿಸಿದರು. ಗ್ರಾಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ಶ್ರೀಕಾಂತ ಪೂಜಾರ್ ಮಾತನಾಡಿ,“ನಾವು ಎಲ್ಲರೂ ಅಂಬೇಡ್ಕರ್ ರಚಿಸಿದ ಸಂವಿಧಾನದಡಿ ಬದುಕುತ್ತಿದ್ದೇವೆ. ಅದರ ನಿಯಮಗಳನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಅಂಬೇಡ್ಕರ್ ಅವರ ಕನಸು ನಿಜವಾಗುತ್ತದೆ,” ಎಂದರು.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ರಾತ್ರಿ ಪೂರ್ತಿ ಅಕ್ರಮವಾಗಿ ಮರಳು ಸಾಗಾಟ; ಅರಣ್ಯ ಇಲಾಖೆಯ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಕೋಡಂಬಿ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಅರಳೇಶ್ವರ, ಜನವೇದಿಕೆ ನಾಯಕಿ ಸಾವಿತ್ರಿ ಪೂಜಾರ್, ಸಮಿತಿ ಸದಸ್ಯ ಸಿದ್ರಾಮಯ್ಯ ಬಡಿಗೇರ್, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮ ಅಭಿವೃದ್ಧಿ ಸಮಿತಿಯ ಮಹಿಳೆಯರು ಪಾಲ್ಗೊಂಡಿದ್ದರು. ಶ್ರೀಮತಿ ಮಂಗಳಾ ಮೋರೆ ಸ್ವಾಗತಿಸಿ, ಶ್ರೀ ಪ್ರವೀಣ ಶೇದಿಯಣ್ಣನವರ ವಂದನೆ ಸಲ್ಲಿಸಿದರು.ಶ್ರೀ ಹಜರತ್ ಮುಲ್ಲಾನವರ ಅವರು “ಸಂವಿಧಾನ ಅರಿಯೋ–ಸಂವಿಧಾನ ತಿಳಿಯೋ” ಎಂಬ ಜಾಗೃತಿ ಹಾಡನ್ನು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...