ಮುಂಡಗೋಡ | ರಕ್ಷಾಬಂಧನ ಆಚರಿಸಿದ ನರೇಗಾ ಕೂಲಿ ಕಾರ್ಮಿಕರು

Date:

ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡುವ ರಕ್ಷಾಬಂಧನ ಹಬ್ಬವನ್ನು ಮುಂಡಗೋಡ ತಾಲೂಕಿನ ನರೇಗಾ ಕೂಲಿ ಕಾರ್ಮಿಕರು ಆಚರಿಸಿದ್ದಾರೆ.

ಮುಂಡಗೋಡು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಅವರ ನೇತೃತ್ವದಲ್ಲಿ ಶುಕ್ರವಾರದಂದು ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಎಲ್.ವಿ.ಕೆ ಸಂಸ್ಥೆಯ ಸಹಯೋಗದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉದ್ಯೋಗ ಖಾತರಿಯಡಿ ಹೆಚ್ಚಿನ ಶ್ರಮ ಬೇಡುವ ಮತ್ತು ಗ್ರಾಮದಿಂದ ಸಾಕಷ್ಟು ದೂರದಲ್ಲಿರುವ ಕೆರೆ ಪುನಶ್ಚೇತನ, ಅರಣ್ಯದಲ್ಲಿ ಟ್ರೆಂಚ್ ನಿರ್ಮಾಣದಂತಹ ಮುಂತಾದ ಕಾಮಗಾರಿಗಳಲ್ಲಿ ಮಹಿಳೆಯರು ಕೆಲಸ ಮಾಡುವುದು ಕಷ್ಟ. ಅಂತಹ ಸಂದರ್ಭಗಳಲ್ಲಿ ಪುರುಷರು ಕೆಲಸದಲ್ಲಿ ನೆರವಾಗುವುದು ಮಾತ್ರವಲ್ಲದೇ, ಅವರು ಮನೆಯಿಂದ ಹೊರಟು ಮತ್ತೆ ಸುರಕ್ಷಿತವಾಗಿ ಮನೆ ಸೇರುವವರೆಗೂ ವಿಶೇಷ ಕಾಳಜಿ ವಹಿಸುತ್ತಾರೆ. ಕೂಡು ಕುಟುಂಬದಂತೆ ಆಸರ-ಬೇಸರಕ್ಕೆ ಜೊತೆಯಾಗಿರುತ್ತಾರೆ. ಹೀಗಾಗಿ ಇಂತಹ ವಿಶಿಷ್ಟ್ಟ ಬಾಂಧವ್ಯವನ್ನು ಇನ್ನೂ ಗಟ್ಟಿಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ಹಲವು ಕಾಮಗಾರಿ ಸ್ಥಳಗಳಲ್ಲಿ ಮುಂಡಗೋಡ ತಾಲೂಕು ಪಂಚಾಯತಿಯ ವತಿಯಿಂದ ರಕ್ಷಾ ಬಂಧನ ಹಬ್ಬ ಆಚರಿಸಲಾಗುತ್ತಿದೆ ದಾಸನಕೊಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾ.ಉ) ಸೋಮಲಿಂಗಪ್ಪ ಛಬ್ಬಿ ಅವರು ಮಾತನಾಡಿ, “ಯೋಜನೆಯಡಿ ಗಂಡು ಮತ್ತು ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ವೇತನವಿದೆ. ಕಾಮಗಾರಿ ಸ್ಥಳದಲ್ಲಿ ಪರಸ್ಪರ ಸೌಹಾರ್ದತೆಯಿಂದ, ಸಹೋದರಿಯರಿಗೆ ಸಹೋದರರಂತೆ ಆಸರೆಯಾಗಿ, ಅವರನ್ನು ಸಮಾಜದ ಸರಿಸಮಾನವಾಗಿ ಬೆಳೆಸಲು ಕೈಜೋಡಿಸೋಣ. ಮಹಿಳಾ ಸ್ನೇಹಿ ಕಾಮಗಾರಿ ಸ್ಥಳವನ್ನಾಗಿಸೋಣ” ಎಂದರು.

WhatsApp Image 2025 08 08 at 6.10.29 PM

ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಕೂಲಿಕಾರರಿಗೆ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಇರುವ ಉದ್ಯೋಗ ಅವಕಾಶ, ಕೂಲಿ ಮೊತ್ತ, ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ ಸೌಲಭ್ಯಗಳು, ಅರ್ಜಿ ಸಲ್ಲಿಸುವ ವಿಧಾನ, ಗರ್ಭಿಣಿ ಮಹಿಳೆಯರು, ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಕೆಲಸದಲ್ಲಿನ ರಿಯಾಯಿತಿ, ಕೂಸಿನ ಮನೆ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ತಿಳಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಪುರುಷ ಕೂಲಿಕಾರರಿಗೆ ಸಹೋದರಿ ಸಮಾನರಾದ ಮಹಿಳಾ ಕೂಲಿಕಾರರು ಪವಿತ್ರ ರಾಖಿಯನ್ನು ಕಟ್ಟಿ, ಸಿಹಿ ತಿನಿಸಿ, ಆರತಿ ಬೆಳಗಿ ಮನಸಾರೆ ಹಾರೈಸಿದರು. ಮತ್ತು ಎಲ್ಲ ಪುರುಷರು ಅವರ ರಕ್ಷಣೆಗೆ ಸದಾ ನಿಲ್ಲುವುದಾಗಿ ಸಂಕಲ್ಪ ತೊಟ್ಟರು.

ಈ ಸಂದರ್ಭದಲ್ಲಿ ಮಳಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಜಯಶ್ರೀ ಹಜಾರೆ, ಊರ ಪ್ರಮುಖರಾದ ನಾಗೇಂದ್ರ ಕರಗಸಕರ, ಬಿಎಫ್‌ಟಿ ಹನುಮಂತ ಇಡಗೋಡ, ಮಂಜು ಪೂಜಾರ, ಸಂತೋಷ ಹಿರೇಮಠ, ಎಲ್‌ವಿಕೆ ಸಿಬ್ಬಂದಿ ಶ್ರೀದೇವಿ ಭದ್ರಾಪುರ, ಕಾಯಕ ಬಂಧು ರೇಣುಕಾ ಚಲವಾದಿ, ಮನರೇಗಾ ಕೂಲಿಕಾರರು ಹಾಗೂ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...