ಮುಂಡಗೋಡ | ಯುವಶಕ್ತಿಯಿಂದ ಮಾತ್ರ ದೇಶದ ಬದಲಾವಣೆ ಸಾಧ್ಯ – ಫಾ. ಅಲ್ವಿನ್ ಡಿ’ಸೋಜಾ

Date:

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿರುವ ಲೋಯೋಲ ವಿಕಾಸ ಕೇಂದ್ರ ಹಾಗೂ ಯುವರತ್ನ ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಯುವಕ-ಯುವತಿಯರಿಗಾಗಿ ‘ಯುವಸಂಗಮ – 2026’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಎರಡು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ನಾಯಕತ್ವ ತರಬೇತಿ, ವ್ಯಕ್ತಿತ್ವ ವಿಕಸನ, ಕ್ರೀಡೆ ಹಾಗೂ ಮನರಂಜನಾ ಚಟುವಟಿಕೆಗಳ ಮೂಲಕ ಯುವಜನರಲ್ಲಿ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜ್ಯೋತಿ ಸಮಾಜ ಸೇವಾ ಸಂಸ್ಥೆಯ ವಂದನೀಯ ಸಿ|| ಸೋನಿಯಾ ಡಿ’ಸೋಜಾ ಅವರು, ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಿ ಸಮುದಾಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಫಾ. ಅಲ್ವಿನ್ ಡಿ’ಸೋಜಾ ಅವರು ಮಾತನಾಡಿ, ಯುವಶಕ್ತಿ ದೇಶದ ದೊಡ್ಡ ಆಸ್ತಿ. ಯುವಜನರು ಇಂತಹ ತರಬೇತಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜ್ಞಾನ ವೃದ್ಧಿಸಿಕೊಳ್ಳಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಮೂಲಕ ಸಮಾಜದಲ್ಲಿ ಧ್ವನಿ ಎತ್ತುವಂತಾಗಬೇಕು ಮತ್ತು ದೇಶದ ಕೀರ್ತಿ ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಲೋಯೋಲ ವಸತಿ ನಿಲಯಗಳ ಮೇಲ್ವಿಚಾರಕ ಬ್ರದರ್ ಕಿರಣ್ ಬ್ರಾಂಕೋ ಅವರು ಮಾತನಾಡಿ, ಕೆರೆಯಲ್ಲಿ ಎಸೆದ ಕಲ್ಲು ಹೇಗೆ ಅಲೆಗಳನ್ನು ಸೃಷ್ಟಿಸಿ ದಡ ಸೇರುತ್ತದೆಯೋ, ಹಾಗೆಯೇ ಯುವಕರು ಇಲ್ಲಿ ಕಲಿತ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಗುರಿ ತಲುಪಬೇಕು ಎಂದರು.

ಧಾರವಾಡದ ವಿದ್ಯಾನಿಕೇತನದ ಫಾ. ಧೀರಜ್ ಡಿ’ಸೋಜಾ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು, ರಸಪ್ರಶ್ನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ ನಾಯಕತ್ವದ ಗುಣಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಏಕತೆ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಸೌಹಾರ್ದತೆಯ ಬಗ್ಗೆ ಚರ್ಚೆ ನಡೆಸಿದ ಅವರು, ಜಾತಿ-ಧರ್ಮದ ಭೇದವಿಲ್ಲದೆ ಒಗ್ಗಟ್ಟಿನಿಂದ ಮುನ್ನಡೆಯುವಂತೆ ಕಿವಿಮಾತು ಹೇಳಿದರು.

ಶಿಬಿರದ ಎರಡನೇ ದಿನದಂದು ಶಿಬಿರಾರ್ಥಿಗಳು ಶಿರಸಿ ಮಾರಿಕಾಂಬಾ ದೇವಸ್ಥಾನ ಹಾಗೂ ಯಾಣಕ್ಕೆ ಶೈಕ್ಷಣಿಕ ಪ್ರವಾಸ ಕೈಗೊಂಡು ಸಂಭ್ರಮಿಸಿದರು. ಈ ಎರಡು ದಿನಗಳ ಕಾರ್ಯಾಗಾರದಲ್ಲಿ ಒಟ್ಟು 52 ಯುವಕ-ಯುವತಿಯರು ಹಾಗೂ ಲೋಯೋಲ ವಿಕಾಸ ಕೇಂದ್ರದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಕಸ ವಿಲೇವಾರಿ ಘಟಕದಲ್ಲಿ ಅಗ್ನಿ ಅವಘಡ; ಪಟ್ಟಣ ಪಂಚಾಯತ ವಿರುದ್ಧ ಜಾತಿ ತಾರತಮ್ಯದ ಗಂಭೀರ ಆರೋಪ

ಕಾರ್ಯಕ್ರಮದ ಆರಂಭದಲ್ಲಿ ಸಿಬ್ಬಂದಿ ವರ್ಗದವರು ಅಂಬೇಡ್ಕರ್ ಜಾಗೃತಿ ಗೀತೆಯನ್ನು ಹಾಡಿದರು. ಭೂಮಿಕಾ ಲಚ್ಚಿ ಸ್ವಾಗತಿಸಿದರೆ, ಪುನೀತ್ ಸವಪಳ್ಳ ಸಂವಿಧಾನದ ಪೀಠಿಕೆ ವಾಚಿಸಿದರು. ಭರಮಣ್ಣ ಚಕ್ರಸಾಲಿ ವಂದನಾರ್ಪಣೆ ಮಾಡಿದರು ಹಾಗೂ ಮಂಗಳಾ ಮೋರೆ ಕಾರ್ಯಕ್ರಮ ನಿರೂಪಿಸಿದರು. ತನ್ವೀರ್ ಅಹ್ಮದ್ ಮಿರ್ಜಾನಕರ್ ಅವರು ಯುವಕ ಯುವತಿಯರಿಗೆ ಮನೋರಂಜನೆ ಚಟುವಟಿಕೆ ಆಯೋಜನೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...