ಮುಂಡಗೋಡ | ರಸ್ತೆ ಅಪಘಾತ: ಗ್ರಾಮ ಲೆಕ್ಕಾಧಿಕಾರಿ ಗೋಪಾಲ್ ಎಂ. ಸ್ಥಳದಲ್ಲೇ ಮೃತ್ಯು

Date:

ಮುಂಡಗೋಡ: ದರ್ಶನ್ ಅಭಿನಯದ ‘ಡೆವಿಲ್’ ಚಲನಚಿತ್ರವನ್ನು ವೀಕ್ಷಿಸಿ ಹುಬ್ಬಳ್ಳಿಯಿಂದ ಮುಂಡಗೋಡಿಗೆ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಂಡಗೋಡ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿ ಗೋಪಾಲ್ ಎಂ. (38) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ದುರ್ಘಟನೆಯು ತಡರಾತ್ರಿ, ತಡಸ ಸಮೀಪದ ತಾಯವ್ವ ದೇವಸ್ಥಾನದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಗೋಪಾಲ್ ಎಂ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮುಂಡಗೋಡ ತಹಶೀಲ್ದಾರ್ ಕಚೇರಿಯ ಇಬ್ಬರು ಸಿಬ್ಬಂದಿಗಳು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಸಿಬ್ಬಂದಿಗಳೊಂದಿಗೆ ಗೋಪಾಲ್ ಎಂ. ಅವರು ರಾತ್ರಿ ಹುಬ್ಬಳ್ಳಿಯಿಂದ ಮುಂಡಗೋಡಿಗೆ ಹಿಂತಿರುಗುತ್ತಿದ್ದರು. ತಾಯವ್ವ ದೇವಸ್ಥಾನದ ಬಳಿ ಅವರ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕದ ಕಂದಕಕ್ಕೆ (ಹಳ್ಳಕ್ಕೆ) ಇಳಿದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಯಿಂದಾಗಿ ಗೋಪಾಲ್ ಎಂ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಡರಾತ್ರಿಯಾದರೂ ಗೋಪಾಲ್ ಎಂ. ಅವರು ಮನೆಗೆ ತಲುಪದಿರುವ ಕಾರಣ ಆತಂಕಗೊಂಡ ಅವರ ಕುಟುಂಬದ ಸದಸ್ಯರು ಮತ್ತು ಸಹೋದ್ಯೋಗಿಗಳು ಅವರನ್ನು ಹುಡುಕಲು ಪ್ರಾರಂಭಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಲೋಕ ಅದಾಲತ್ ಮೂಲಕ 47,179 ಪ್ರಕರಣ ಇತ್ಯರ್ಥ; ₹ 82.62 ಕೋಟಿ ಹಣ ಸಂಗ್ರಹ

ಮೂಲತಃ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನವರಾದ ಗೋಪಾಲ್ ಎಂ. ಅವರು ಮುಂಡಗೋಡ ತಾಲ್ಲೂಕಿನಲ್ಲಿ ತಮ್ಮ ಕರ್ತವ್ಯ ನಿಷ್ಠೆ ಮತ್ತು ಉತ್ತಮ ಜನ ಸಂಪರ್ಕದಿಂದಾಗಿ ಕಂದಾಯ ಇಲಾಖೆಯ ಅತ್ಯಂತ ಜನಪ್ರಿಯ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು. ಈ ಮೊದಲು ಅವರು ಇಂದೂರ ಗ್ರಾಮ ಲೆಕ್ಕಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದರು. ನಂತರ ಮುಂಡಗೋಡ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ ಆಗಿದ್ದರು.

ಅವರ ನಿಧನ ಸುದ್ದಿ ಕೇಳಿ ಮುಂಡಗೋಡ ತಾಲ್ಲೂಕಿನಾದ್ಯಂತ ಸಾರ್ವಜನಿಕರು ಮತ್ತು ಸಹೋದ್ಯೋಗಿಗಳಲ್ಲಿ ತೀವ್ರ ಶೋಕ ಆವರಿಸಿದೆ. ಅಪಘಾತದ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...