ಮುಂಡಗೋಡ | ತಾಲ್ಲೂಕು ಕೇಂದ್ರದ ಅಂಚಿನಲ್ಲೇ ಮೂಲಸೌಕರ್ಯಗಳಿಲ್ಲದ ಹಳ್ಳಿಗಳು; ಅಭಿವೃದ್ಧಿಗಾಗಿ ಡಿಸಿಗೆ ಮನವಿ

Date:

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೊಗೇಶ್ವರಹಳ್ಳ ಹಾಗೂ ನಂದಿಗಟ್ಟಾ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಎಂಬೆರಡು ಹಳ್ಳಿಗಳು ಇಂದಿಗೂ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿವೆ. ತಾಲೂಕು ಕೇಂದ್ರದಿಂದ ಕೇವಲ ಐದು ಕಿ.ಮೀ. ದೂರದಲ್ಲಿದ್ದರೂ ಈ ಹಳ್ಳಿಗಳಲ್ಲಿ ಇಂದಿಗೂ ಸಿಸಿ ರಸ್ತೆ ಇರಲಿ ಡಾಂಬರು ರಸ್ತೆಯೂ ಇಲ್ಲ, ಚರಂಡಿ ವ್ಯವಸ್ಥೆ, ಶಾಲೆಗೊಂದು ಕಾಂಪೌಂಡ್‌.. ಯಾವುದೂ ಇಲ್ಲ. ಈ ಹಳ್ಳಿಗಳಲ್ಲಿ ಜೀವನ ದೂಡುತ್ತಿರುವ ಬಡ ಗ್ರಾಮಸ್ಥರು ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಜೋಗೇಶ್ವರಹಳ್ಳದಲ್ಲಿ ಗೌಳಿ ಸಮುದಾಯದ ಸುಮಾರು 28 ಕುಟುಂಬಗಳು ವಾಸವಾಗಿದ್ದು, ಬಹುತೇಕರು ಅನಕ್ಷರಸ್ಥರು ಹಾಗೂ ಬುಡಕಟ್ಟು ಜನಾಂಗಕ್ಕೆ ಸೇರಿದವರೇ ಆಗಿದ್ದಾರೆ. ಇವರ ಮೂಲ ಜೀವನೋಪಾಯ ಹೈನುಗಾರಿಕೆ. ಕಾಡಂಚಿನಲ್ಲಿ ವಾಸಿಸುವ ಕಾರಣದಿಂದ ದಿನನಿತ್ಯ ಕಾಡು ಪ್ರಾಣಿಗಳ ಹಾವಳಿಯೂ ಕಡಿಮೆಯಿಲ್ಲ. ಒಬ್ಬ ವ್ಯಕ್ತಿಗೆ ವಾಸಿಸಲು ಅಗತ್ಯವಿರುವ ಶಿಕ್ಷಣ, ಆರೋಗ್ಯ, ರಸ್ತೆ ಸೇರಿದಂತೆ ಬದುಕಿಗೆ ತೀರಾ ಅಗತ್ಯವಾದ ವ್ಯವಸ್ಥೆಗಳಿಲ್ಲದೆ ಈ ಗ್ರಾಮಗಳ ಜನರು ನರಳುತ್ತಿದ್ದಾರೆ.

ಈ ಹಳ್ಳಿಗಳ ಅಭಿವೃದ್ಧಿಗೆ ಗ್ರಾಮಸ್ಥರು ಸ್ವತಃ ಮುಂದೆ ಬಂದು ತಾವೇ ಗ್ರಾಮಾಭಿವೃದ್ಧಿ ಸಮಿತಿಯೊಂದನ್ನು ರಚಿಸಿಕೊಂಡು, ಸಂಘಟಸಿ, ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಎಲ್.ವಿ.ಕೆ. ಸೇರಿದಂತೆ ಹಲವಾರು ಸಮಾನ ಮನಸ್ಕ ಸಂಘಟನೆಗಳು ಇವರ ಹೋರಾಟಕ್ಕೆ ಬೆಂಬಲ ನೀಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೂ ಇದೇ ಸಂದರ್ಭದಲ್ಲಿ ಈ ಭಾಗದ ನರೇಗಾ ಕೂಲಿ ಕಾರ್ಮಿಕರ ಅನುಭವಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಎರಡು ಊರಿನ ಗ್ರಾಮಸ್ಥರು ಮನವಿ ಪತ್ರದಲ್ಲಿ ತಿಳಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

“ನಾವು ಬದುಕಲು ಅಗತ್ಯವಿರುವ ಕನಿಷ್ಠ ಸೌಲಭ್ಯಗಳಿಂದಲೂ ವಂಚಿತರಾಗಿದ್ದೇವೆ. ದಶಕಗಳಿಂದ ನಿರ್ಲಕ್ಷ್ಯಗೊಂಡಿರುವ ನಮ್ಮ ಹಳ್ಳಿಗಳ ಕಡೆ ಅಧಿಕಾರಿಗಳು ತಿರುಗಿ ನೋಡಬೇಕು. ಸಿಸಿ ರಸ್ತೆ, ಗಟಾರ, ಸಮುದಾಯ ಭವನ, ಶಾಲಾ ಕಾಂಪೌಂಡ್, ವಸತಿ ಮತ್ತು ಭೂಮಿ ಹಕ್ಕು ನಿರ್ವಹಣೆ, ಕಾಡು ಪ್ರಾಣಿಗಳ ಹಾವಳಿಗೆ ಪರಿಹಾರ ಇತ್ಯಾದಿಗಳನ್ನು ಶೀಘ್ರ ಒದಗಿಸಬೇಕು” ಎಂದು ಗ್ರಾಮಸ್ಥರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜೋಗೇಶ್ವರಹಳ್ಳ ಹಾಗೂ ರಾಮಾಪುರ ಹಳ್ಳಿಯ ಗ್ರಾಮ ಅಭಿವೃದ್ಧಿ ಸಮಿತಿ ಸದಸ್ಯರು, ಜನ ವೇದಿಕೆ ನಾಯಕರು, ಯುವಕರು, ಸ್ವಸಹಾಯ ಸಂಘದ ಮಹಿಳೆಯರು, ಕಾಯಕ ಬಂಧುಗಳು ಹಾಗೂ ಎಲ್.ವಿ.ಕೆ. ಸಿಬ್ಬಂದಿಗಳಾದ ಮಂಗಲಾ ಮೊರೆ, ಶ್ರೀದೇವಿ ಭದ್ರಾಪುರ ಹಾಗೂ ಡಿಮ್ನಾ ಥೋಮಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...