ಮಂಗಳೂರು | ಮುನೀರ್ ಕಾಟಿಪಳ್ಳ ಮೇಲೆ ಮತ್ತೊಂದು FIR ಹಾಕಿದ ಮಂಗಳೂರು ನಗರ ಪೊಲೀಸ್ ಕಮಿಷನರ್

Date:

ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್, ಮಂಗಳೂರು, ಸುರತ್ಕಲ್ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಶಾಂತಿಯುತ ಧರಣಿ ನಡೆಸಿದ್ದು ಅಪರಾಧ ಎಂದು ಹೇಳಿ ಮೊಕದ್ದಮೆ ಹೂಡಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ “ಮುನೀರ್ ಕಾಟಿಪಳ್ಳ” ಎಂದು ಒಂದು ಹೆಸರನ್ನು ಮಾತ್ರ ಉಲ್ಲೇಖಿಸಿ ಸ್ವಯಂಪ್ರೇರಿತ FIR ಹಾಕಿದ್ದಾರೆ. ಇದರ ಉದ್ದೇಶ ಸ್ಪಷ್ಟ, ಮುನೀರ್ ಕಾಟಿಪಳ್ಳ ಈಗ ಮಂಗಳೂರು ಕಮೀಷನರ್ ಅವರಿಗೆ ಟಾರ್ಗೆಟ್, ಆ ಮೂಲಕ ಮಂಗಳೂರಿನ ಜನಪರ ಚಳವಳಿಗಳನ್ನು ಬೆದರಿಸುವ, ಬಾಯಿ ಮುಚ್ಚಿಸುವ ಯತ್ನ ನಡೆಸುತ್ತಿದ್ದಾರೆ‌. ಇದು ಬಿಜೆಪಿ ಶಾಸಕರುಗಳ ನಿರ್ದೇಶನದಂತೆ ನಡೆಯುತ್ತಿದೆ ಎಂಬುದರಲ್ಲಿ ಅನುಮಾನ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರು ಪೊಲೀಸ್ ಕಮೀಷನರ್ ಹೆದ್ದಾರಿ ಸಮಸ್ಯೆಗಳ ಕುರಿತು ಸಾಮೂಹಿಕ ಧರಣಿಯಲ್ಲಿ ಧ್ಚನಿವರ್ಧಕ ಬಳಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದರು. ಈ ರೀತಿ ತಿರಸ್ಕರಿಸಲು ಪೊಲೀಸರಿಗೆ ಯಾವುದೇ ಅಧಿಕಾರ ಇಲ್ಲ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸುವುದು ನಾಗರಿಕರ ಸಂವಿಧಾನ ಬದ್ದ ಹಕ್ಕು. ಅದನ್ನು ನಿರಾಕರಿಸುವುದು ಅಪರಾಧವೇ ಹೊರತು, ಧರಣಿ ನಡೆಸುವುದಲ್ಲ‌. ವಿನಾ ಕಾರಣ ಅನುಮತಿ ನಿರಾಕರಿಸುವ ಮೂಲಕ ಕಮೀಷನರ್ ತಪ್ಪೆಸಗಿದ್ದಾರೆ ಎಂದಿದ್ದಾರೆ.

ಅನುಮತಿ ನಿರಾಕರಿಸಿದ ಕಾರಣ ನಾವು ಧ್ವನಿ ವರ್ಧಕ ಬಳಸಲಿಲ್ಲ, ಶಾಮಿಯಾನ ಹಾಕಲಿಲ್ಲ. ಪೊಲೀಸರಿಗೆ ತಿಳಿಸಿಯೇ ಹೆದ್ದಾರಿ ಬದಿಯ ವಿಶಾಲವಾದ ಖಾಲಿ ಜಾಗದಲ್ಲಿ ಉರಿ ಬಿಸಿಲಿನಲ್ಲಿ ಕೂತು ಧರಣಿ ನಡೆಸಿದ್ದೇವೆ. ಅದು ಹೇಗೆ ಅಪರಾಧ ಆಗುತ್ತದೆ ? ಸ್ಥಳದಲ್ಲಿ ನಿಷೇಧಾಜ್ಞೆ ಇರಲಿಲ್ಲ, ಪ್ರತಿಭಟನೆಗಳಿಗೆ ನಿಷೇಧಿಸಲ್ಪಟ್ಟ ಸ್ಥಳಗಳ ಪಟ್ಟಿಯಲ್ಲೂ ಧರಣಿ ನಡೆಸಿದ ಪ್ರದೇಶ ಇರಲಿಲ್ಲ. ಧರಣಿಯಿಂದ ತೊಂದರೆ ಆಗಿದೆ ಅಂತ ಯಾರೂ ಪೊಲೀಸರಲ್ಲಿ ದೂರು ನೀಡಿಲ್ಲ. ಹಾಗಿರುತ್ತಾ FIR ಹಾಕಿರುವುವುದು ಹೇಗೆ ? ನಮ್ಮ ಘೋಷಣೆ, ಬೇಡಿಕೆಗಳನ್ನು ಪೊಲೀಸರು FIR ಹಾಳೆಯಲ್ಲಿ ಹಾಕಿದ್ದಾರೆ. ಅದರಲ್ಲಿ ಅಪರಾಧದ ಅಂಶಗಳು ಯಾವುದಿದೆ ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನ ಸಾಮಾನ್ಯರ ಬದುಕಿನ ಪ್ರಶ್ನೆಗಳ ಮೇಲೆ ಹೋರಾಟ, ಪ್ರತಿಭಟನೆಗಳು ನಡೆಯಲು ಅವಕಾಶ ಕೊಡುವುದಿಲ್ಲ, ಬಿಜೆಪಿ ಶಾಸಕ, ಸಂಸದರ ವಿರುದ್ಧ ಧ್ವನಿ ಎತ್ತಲು ಅವಕಾಶ ಕೊಡುವುದಿಲ್ಲ ಎಂದು ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ನಿರ್ಧರಿಸಿದಂತಿದೆ. ಅದಕ್ಕಾಗಿ ಹೋರಾಟ ಸಮಿತಿಯ ಸಂಚಾಲಕನಾದ ನನ್ನೊಬ್ಬನನ್ನು (ಮುನೀರ್ ಕಾಟಿಪಳ್ಳ) ಆರೋಪಿಯಾಗಿಸಿ FIR ಹಾಕಿದ್ದಾರೆ. FIR ಗಳಿಗೆ ಹೆದರುವ ಪ್ರಶ್ನೆ ಇಲ್ಲ. ಜನರ ಪರವಾದ ಹೋರಾಟಗಳು ಮುಂದುವರಿಯುತ್ತದೆ. ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕಾಗಿಯೂ ಹೋರಾಟ ಮುಂದುವರಿಯಲಿದೆ. ಹರಿಯುವ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಡ.

ಮಂಗಳೂರಿನ ಜನ ಚಳವಳಿಗಳ ಇತಿಹಾಸ ಗೊತ್ತಿಲ್ಲದವರು, ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳ ಕುರಿತು ಕುರುಡಾಗಿರುವವರು ಮಾತ್ರ ಕಮೀಷನರ್ ಅಗರ್ ವಾಲ್ ತರ ನಡೆದುಕೊಳ್ಳಲು ಸಾಧ್ಯ‌. ಅಗರ್ ವಾಲ್ ಅವರಿಗೆ ಕಾನೂನು, ಸಂವಿಧಾನದ ಕುರಿತು ಅರಿವಿನ ಕೊರತೆ ಇದೆ. ಅಥವಾ ನಾನು ಅದನ್ನು ಮೀರಿದವನು ಎಂಬ ಅಹಂ ಇದೆ. ಪೊಲೀಸ್ ಕಮೀಷನರ್ ಅವರ ಈ ಅತಿರೇಕದ ನಡವಳಿಕೆಯ ವಿರುಧ್ಧವೂ ಹೋರಾಟ ನಡೆಯಲಿದೆ‌. ತಡೆಯುವುದಾದರೆ ತಡೆಯಲಿ. ಸರಕಾರ ಇಂತಹ ಜನವಿರೋಧಿ ಅಧಿಕಾರಿಯನ್ನು ತಕ್ಷಣ ವರ್ಗಾಯಿಸಬೇಕು ಎಂದೂ ನಾವು ಆಗ್ರಹಿಸುತ್ತೇವೆ.

ಕಮೀಷನರ್ ಅಗರವಾಲ್ ಅವರೆ, ಹದಿನೈದು ದಿನದಲ್ಲಿ ಎರಡು FIR ಹಾಕಿದ್ದೀರಿ. ಯಾವಾಗ ಬಂಧಿಸುತ್ತೀರಿ ಹೇಳಿ, ನಿಮ್ಮ ಮುಂದೆ ಹಾಜರಾಗುತ್ತೇವೆ ಸಮಾಜಿಕ ತಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಬೆನ್ನಲ್ಲೆ ನಾಳೆ ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಪೊಲೀಸ್ ಕಮೀಷನರ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಾಳೆ ಸಂಜೆ ಮಂಗಳೂರು ನಗರದ ರಾವ್ ಆಂಡ್ ರಾವ್ ಸರ್ಕಲ್ ಬಳಿ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ‌.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...