ಕೊಪ್ಪಳ | ಮಳೆಯಿಂದ ರಸ್ತೆಗೆ ಬಿದ್ದ ಮರ: ಮುನಿರಾಬಾದ್ ಡ್ಯಾಂ ಗ್ರಾಮದಲ್ಲಿ ಅಪಾಯದಿಂದ ಪಾರಾದ ಗ್ರಾಮಸ್ಥ!

Date:

ಕೊಪ್ಪಳ ತಾಲೂಕಿನ ಮುನಿರಾಬಾದ್ ಡ್ಯಾಂ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಈ ಪ್ರದೇಶ ಸಂಪೂರ್ಣ ಹಸಿರಿನಿಂದ ಆವೃತವಾಗಿದೆ. ಆದರೆ ಈ ಮಳೆ ಕೆಲವು ಅಪಾಯಗಳಿಗೂ ಕಾರಣವಾಗುತ್ತಿದೆ. ಹಳೆಯ ಮತ್ತು ಒಣಗಿದ ಮರಗಳು ರಸ್ತೆಗಳ ಪಕ್ಕದಲ್ಲಿ ನಿಂತು ಅಪಾಯವನ್ನು ಆಹ್ವಾನಿಸುತ್ತಿವೆ.

ಜುಲೈ 19ರಂದು ರಾತ್ರಿ 11 ಗಂಟೆ ಸುಮಾರಿಗೆ, ಪಿಳ್ಳೆ ಹೋಟೆಲ್ ಸರ್ಕಲ್ ಹತ್ತಿರ ಬಸ್ ನಿಲ್ದಾಣದ ಎದುರುಗಡೆ ನಿಂತಿದ್ದ ಒಂದು ಒಣಗಿದ ದೊಡ್ಡ ಮರ ಅಲ್ಪಕಾಲದಲ್ಲಿ ಬಿದ್ದು ಬಿಟ್ಟಿದೆ. ಈ ವೇಳೆ ಕೇವಲ ಕ್ಷಣಗಳ ವ್ಯತ್ಯಾಸದಲ್ಲಿ ಅಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಸಾಗುತ್ತಿದ್ದ. ಆದರೆ ಅದೃಷ್ಟವಶಾತ್ ಮರ ಬೀಳುವ ಮೊದಲು ಆತ ಅಲ್ಲಿಂದ ದೂರ ಸರಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

1001436759

ಘಟನೆಯ ಮಾಹಿತಿ ಸಿಕ್ಕ ಕೂಡಲೆ ಮುನಿರಾಬಾದ್ ಡ್ಯಾಂ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯೂಬ್ ಖಾನ್ ಅವರು ಸ್ಥಳಕ್ಕೆ ತುರ್ತು ಧಾವಿಸಿ, ಗ್ರಾಮಸ್ಥರ ಸಹಾಯದಿಂದ ಬಿದ್ದ ಮರವನ್ನು ತೆರವುಗೊಳಿಸಿ ರಸ್ತೆಯನ್ನು ಸ್ವಚ್ಛಗೊಳಿಸುವ ವ್ಯವಸ್ಥೆ ಮಾಡಿದರು. ತಡರಾತ್ರಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಮುಂಜಾಗ್ರತೆಯ ಕ್ರಮ ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭ ಮಾತನಾಡಿದ ಅಧ್ಯಕ್ಷರು, “ಇಂತಹ ಅಪಾಯಕಾರಿಯ ಮರಗಳನ್ನು ಕೂಡಲೇ ಗುರುತಿಸಿ ರಸ್ತೆಯ ಪಕ್ಕದಿಂದ ತೆರವುಗೊಳಿಸುವುದು ಅತ್ಯಂತ ಅಗತ್ಯ. ಕೆಲವು ತಿಂಗಳ ಹಿಂದೆ ಇಂತಹ ಘಟನೆ ಒಂದರಲ್ಲಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ಆಸ್ಪತ್ರೆಗೆ ದಾಖಲಾಗಿ ಸುಮಾರು 4-5 ಲಕ್ಷ ರೂ. ವೆಚ್ಚವಾಗಿ, ಆ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಯಿತು. ಬಡ ಜನರ ಪರಿಸ್ಥಿತಿಯನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಸಾರ್ವಜನಿಕರ ಸುರಕ್ಷತೆ ನಮ್ಮ ಮೊತ್ತ ಮೊದಲ ಆದ್ಯತೆ ಆಗಬೇಕು,” ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮಸ್ಥರು ಗ್ರಾಮ ಪಂಚಾಯಿತಿ ತ್ವರಿತ ಪ್ರತಿಕ್ರಿಯೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...