ಬೆಳ್ಳಂಬೆಳಿಗ್ಗೆ ಧಾರವಾಡ ಶಹರ ಸಂಚಾರ ಮಾಡಿದ ಪಾಲಿಕೆ ಆಯುಕ್ತರು

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವ್ಯಾಪ್ತಿಯಲ್ಲಿ ಬರುವ ವಾರ್ಡ್‌ವಾರು ಪ್ರದೇಶಗಳಲ್ಲಿ ಮಾರ್ಚ್ 30 ರಂದು ಬೆಳಿಗ್ಗೆ ಸ್ವಚ್ಛತೆ ಹಾಗೂ ಚಾಲ್ತಿಯಲ್ಲಿರುವ, ಕಾಮಗಾರಿಗಳ ಕುರಿತು ಧಾರವಾಡ ಶಹರದಲ್ಲಿ ಸಂಚರಿಸಿ ಹು-ಧಾ ಮಹಾನಗರ ಪಾಲಿಕೆಯ ಆಯುಕ್ತರು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ವಾರ್ಡ ಸಂಖ್ಯೆ 18 ಮತ್ತು 19ರಲ್ಲಿ ಸ್ವಚ್ಛತೆ ಪರಿಶೀಲಿಸಿ ರಸ್ತೆಯ ಎರಡೂ ಕಡೆ ರಾಶಿ ಕಸವನ್ನು ಕಂಡು ಸಂಬಂಧಪಟ್ಟ ಅಧಿಕಾರಿ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಯಿಸಿ ತಕ್ಷಣ ಕಸವನ್ನು ವಿಲೇವಾರಿ ಮಾಡುವಂತೆ ಹೇಳಿ ಮುಂದೆ ಈ ರೀತಿ ಅವ್ಯವಸ್ಥೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ತಾಖೀತು ಮಾಡಿದರು.

ವಾರ್ಡ್‌ ಸಂಖ್ಯೆ 3, 13, 6, 14, 7, 9ರಲ್ಲಿ ಸಂಚರಿಸಿ ಸ್ವಚ್ಛತೆ ಕುರಿತು ಪರಿಶೀಲಿಸಿ ಸ್ಥಳದಲ್ಲಿ ಹಾಜರಿದ್ದ ವಲಯ ಸಹಾಯಕ ಆಯುಕ್ತರನ್ನು ಹಾಗೂ ಆರೋಗ್ಯ ನಿರೀಕ್ಷಕರಿಗೆ ಸ್ವಚ್ಛತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನಿತರ ಪ್ರದೇಶಗಳಲ್ಲಿ ಸಂಚರಿಸಿದ ಆಯುಕ್ತರು ಅನಧಿಕೃತವಾಗಿ ಫುಟ್‌ಪಾತ್‌ನಲ್ಲಿ ಹಾಕಿಕೊಂಡಿರುವ ಅಂಗಡಿ ಮುಂಗಟ್ಟುಗಳನ್ನು ತಕ್ಷಣ ತೆರವುಗೊಳಿಸಿ ತೆರವುಗೊಳಿಸಿದ ಕುರಿತು ಮಾಹಿತಿಯನ್ನು ನೀಡುವಂತೆ ವಲಯ ಸಹಾಯಕ ಆಯುಕ್ತ ಆನಂದ್ ಕಾಂಬ್ಳಿಯವರಿಗೆ ನಿರ್ದೇಶನ ನೀಡಿದರು. ಸೂಪರ್ ಮಾರುಕಟ್ಟೆಯಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ವಿವಿಧ ಸರಕುಗಳನ್ನಿಟ್ಟು ವ್ಯವಹಾರ ನಡೆಸುತ್ತಿದ್ದವರನ್ನು ಖಾಲಿ ಮಾಡಿಸಿ ಮಾಹಿತಿ ನೀಡುವಂತೆ ಆರೋಗ್ಯ ನಿರೀಕ್ಷಕ ಶಾಂತಗೌಡ ಬಿರಾದಾರಗೆ ನಿರ್ದೇಶನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣನಗರ ರೇಲ್ವೆ ಸೇತುವೆ ಕೆಳಗೆ ರಾಶಿ ಹಾಕಿರುವ ಕಸವನ್ನು ಸ್ವತಃ ಆಯುಕ್ತರೇ ನಿಂತು ಸ್ವಚ್ಛತಾ ಸಿಬ್ಬಂದಿಗಳಿಂದ ಸ್ವಚ್ಚತೆ ಮಾಡಿಸಿ ಕಸ ಹಾಕುವವರನ್ನು ಗುರುತಿಸಿ ನೋಟಿಸ್ ಕೊಡುವಂತೆ ಸ್ಥಳದಲ್ಲಿ ಹಾಜರಿದ್ದ ಆರೋಗ್ಯ ನಿರೀಕ್ಷಕಿ ಜ್ಯೋತಿ ಚಳಕಿಮಠ ಇವರಿಗೆ ನಿರ್ದೇಶನ ತಿಳಿಸಿದರು. ಎಸ್‌ಡಬ್ಲ್ಯೂಎಂ ಕಾರ್ಯನಿರ್ವಾಹಕ ಅಭಿಯಂತರ ಮಲ್ಲಿಕಾರ್ಜುನ ಅವರಿಗೆ ಇಂದು ಪೂರ್ತಿ ದಿನ ಧಾರವಾಡದಲ್ಲೇ ಕಾರ್ಯನಿರ್ವಹಿಸುವಂತೆ ತಾಕೀತು ಮಾಡಿದರು. ಪರಿಸರ ಅಭಿಯಂತರರಾದ ಫರೀದಾ ನದಾಫ ರವರನ್ನು ಸ್ಥಳಕ್ಕೆ ಕರೆಯಿಸಿ ಪ್ರತಿದಿನ ವಾರ್ಡ್‌ಗಳಲ್ಲಿ ಸಂಚರಿಸಿ ಸ್ವಚ್ಛತೆಯನ್ನು ಪರಿಶೀಲಿಸಿ ಮಾಹಿತಿ ನೀಡುವಂತೆ ಆದೇಶಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಿಜೆಪಿಯ ಸಿದ್ದೇಶ್ವರ್ ಕುಟುಂಬವನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ; ಪ್ರಭಾ ಮಲ್ಲಿಕಾರ್ಜುನ್ ಕರೆ

ವಲಯ ಸಹಾಯಕ ಆಯುಕ್ತ ಸಂತೋಷ್, ಆನಂದ ಕಾಂಬ್ಳಿ, ಶಂಕರ ಪಾಟೀಲ ಹಾಗೂ ಆರೋಗ್ಯ ನಿರೀಕ್ಷಕ ಶಾಂತಗೌಡ ಬಿರಾದಾರ, ಮಧುಕೇಶ್ವರ ರಾಯ್ಕರ್, ವಿದ್ಯಾಶ್ರೀ ಬಡಿಗೇರ, ಜ್ಯೋತಿ ಚಳಕಿಮಠ, ಪ್ರತಿಭಾ, ಹನುಮಂತ ಗಡ್ಡಿ ಹಾಗೂ ಸುಧಾಕರ ಸಾಥ್ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...