ಬಿಜೆಪಿ ಬಿಟ್ಟು ಹೋಗಲ್ಲ, ಬೇಕಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಮುನಿರತ್ನ

Date:

  • 17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ
  • ‘ನನ್ನನ್ನು ಜೈಲಿನಲ್ಲಿಟ್ಟು ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲಿ’

17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಬೇಕಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಮುನಿರತ್ನ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್​ಗೆ ಹೋಗುವ ಅವಶ್ಯಕತೆ ನನಗೆ ಇಲ್ಲ. ಅಧಿಕಾರಕ್ಕಾಗಿ ನಾನು ಪಕ್ಷ ಬಿಟ್ಟು ಹೋಗಲ್ಲ. ನನ್ನ ಮುಂದಿನ ಜೀವನದ ಆಧಾರ ಬಿಜೆಪಿ ಚಿಹ್ನೆ. ಬಿಜೆಪಿ ಬಗ್ಗೆ ನಂಬಿಕೆ, ಗೌರವ ಇದೆ” ಎಂದರು.

“ಬಿಜೆಪಿಯಲ್ಲಿ ನನ್ನನ್ನು ಬಹಳ ಗೌರವಯುತವಾಗಿ ನೋಡಿಕೊಳ್ಳುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಗೌರವದಿಂದ ಮಾತಾಡಿಸುತ್ತಾರೆ. ಹೀಗಿದ್ದ ಮೇಲೆ ನಾನು ಯಾಕೆ ಬೇರೆ ಪಕ್ಷದ ಕಡೆ ಮುಖ ಮಾಡಲಿ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನನ್ನ ಜೀವನದ ಗುರು ಬಿ ಕೆ ಹರಿಪ್ರಸಾದ್ ಮತ್ತು ಡಿ ಕೆ ಶಿವಕುಮಾರ್​ ನನ್ನ ರಾಜಕೀಯ ಗುರು’ ಎಂಬ ಎಸ್ ​ಟಿ ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿ, “ಅದು ಅವರ ವೈಯಕ್ತಿಕ ಅಭಿಪ್ರಾಯ. ನಾನು ಡಿ ಕೆ ಸುರೇಶ್​ 40 ವರ್ಷದಿಂದ ಸ್ನೇಹಿತರು. ವೈಯಕ್ತಿಕವಾಗಿ ಡಿ ಕೆ ಸುರೇಶ್, ಡಿ ಕೆ ಶಿವಕುಮಾರ್​ ಹಾಗೂ ಸಿದ್ದರಾಮಯ್ಯ ಅವರ ಜತೆ ದ್ವೇಷವಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿಗೆ ಕೆಲಸ ಇಲ್ಲ, ಪ್ರಚಾರಕ್ಕಾಗಿ ಆರೋಪ ಮಾಡುತ್ತಾರೆ: ಡಿ ಕೆ ಸುರೇಶ್ ಲೇವಡಿ

ರಾಜಕೀಯ ಸಂಬಂಧ ಉಳಿಸಿಕೊಂಡಿಲ್ಲ

“ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಸಚಿವರು. ಅವರು ಯಾವುದೇ ರಾಜಕೀಯ ಸಂಬಂಧ ಉಳಿಸಿಕೊಂಡಿಲ್ಲ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಉತ್ತರ ಕೊಡುತ್ತಾರಾ ಅಥವಾ ಬೆಂಗಳೂರಿನ ಸಚಿವರಾಗಿ ಉತ್ತರ ಕೊಡುತ್ತಾರಾ ನನಗೆ ಗೊಂದಲ ಆಗುತ್ತಿದೆ. ಮೊದಲು ಅವರು ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಎಲ್ಲರನ್ನೂ ಕರೆದು ಸಭೆ ಮಾಡಲಿ” ಎಂದು ಸಲಹೆ ನೀಡಿದರು.

ನಾನು ಜೈಲಿಗೆ ಹೋಗಲು ಸಿದ್ಧ

“ಆರ್. ಆರ್. ನಗರದಲ್ಲಿ ತನಿಖೆ ಅಂತಾದರೆ ಅದು 28 ಕ್ಷೇತ್ರಗಳಿಗೂ ಅನ್ವಯಿಸಬೇಕು. ಅಧಿಕಾರಿಗಳು ತಿರುಚಿ ಬರೆದರೆ ಆ ದಾಖಲೆಗಳು ಮೇಲೆ ದೊಡ್ಡ ತನಿಖಾ ಸಂಸ್ಥೆಗಳಿಗೆ ಹೋಗುತ್ತವೆ. ಅಧಿಕಾರಿಗಳು ಎಚ್ಚರಿಕೆಯಿಂದ ತನಿಖೆ ಮಾಡಬೇಕು. ಅವರು ಸ್ಥಳಕ್ಕೆ ಹೋಗಿ ಸಮಗ್ರ ತನಿಖೆ ಮಾಡಿದರೆ ಅವರಿಗೆ ಒಳ್ಳೆಯದು. ಇಲ್ಲದಿದ್ದರೆ ಅದೇ ಅವರಿಗೆ ಮುಳುವಾಗುತ್ತದೆ. ನನ್ನ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಅಂದರೆ ನಾನು ಜೈಲಿಗೆ ಹೋಗಲು ಸಿದ್ಧ. ನನಗೆ ಆರ್​.ಆರ್​.ನಗರ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಡಿ.ಕೆ.ಶಿವಕುಮಾರ್​ ನನ್ನನ್ನು ಬೇಕಾದರೆ ಜೈಲಿಗೆ ಕಳಿಸಲಿ. ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ” ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...