ಉಡುಪಿ | ಸಂಗೀತಗಾರ ಶ್ರೀ ಡಾ. ವಿದ್ಯಾಭೂಷಣ್‌ಗೆ ʼಕಾರಂತ್ ಹುಟ್ಟೂರು ಪ್ರಶಸ್ತಿʼ

Date:

ಶಿವರಾಮ ಕಾರಂತರು ಕನ್ನಡದ ಶ್ರೇಷ್ಠ ಲೇಖಕ, ಸಾಮಾಜಿಕ ಕಾರ್ಯಕರ್ತ, ಪರಿಸರವಾದಿ, ಯಕ್ಷಗಾನ ಕಲಾವಿದ, ಚಲನಚಿತ್ರ ನಿರ್ಮಾಪಕ ಹಾಗೂ ಚಿಂತಕರಾಗಿದ್ದು, ಸಾಹಿತ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

40 ವರ್ಷಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ವಿಶೇಷ ಕೊಡುಗೆ ನೀಡಿದ ಅತ್ಯುತ್ತಮ ಗಾಯಕ ಮತ್ತು ಸಂಗೀತಗಾರ ಶ್ರೀ ಡಾ. ವಿದ್ಯಾಭೂಷಣ್ ಅವರಿಗೆ ಈ ವರ್ಷ ʼಕಾರಂತ್‌ ಹುಟ್ಟೂರು ಪ್ರಶಸ್ತಿʼ ನೀಡಿ ಗೌರವಿಸಿದೆ. ಶಿವರಾಮ ಕಾರಂತರ ಸ್ಮರಣಾರ್ಥ ಸ್ಥಾಪಿಸಿರುವ ʼಶಿವರಾಮ ಕಾರಂತ ಥೀಮ್ ಪಾರ್ಕ್ʼ ನಲ್ಲಿ ಕಾರ್ಯಕ್ರಮ ನಡೆಯಿತು.

ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಹಯೋಗದಲ್ಲಿ, ಶಿವರಾಮ ಕಾರಂತರ 121ನೇ ಜನ್ಮದಿನೋತ್ಸವ ಹಾಗೂ ಹುಟ್ಟೂರ 19ನೇ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಟತಟ್ಟು ಗ್ರಾಮ ಪಂಚಾಯತ್, ಕಳೆದ 18 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿರುವವರನ್ನು ಗುರುತಿಸಿ, ಹುಟ್ಟೂರು ಪ್ರಶಸ್ತಿ ನೀಡಿ ಗೌರವಿಸುವ ಕೆಲಸ ಮಾಡುತ್ತಿದೆ. ಸಂಗೀತ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಕೊಡುಗೆ ನಿರಂತರವಾಗಿರಲಿ ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಆಶಿಸುತ್ತೇನೆ ಎಂದು ರಾಜ್ಯಪಾಲರು ಹರಸಿದರು.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸ ಮಾಡುತ್ತಿದೆ ಸಂತಸ ತಂದಿದೆ ಎಂದು ಪ್ರಶಂಸಿದರು.

ಕರ್ನಾಟಕದ ಕರಾವಳಿ ಉಡುಪಿ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಮತ್ತು ಕಲೆ ಸಾಹಿತ್ಯ, ಸಮನ್ವಯ ಮತ್ತು ಸಾಮರಸ್ಯಕ್ಕೆ ಹೆಸರುವಾಸಿ. 13ನೇ ಶತಮಾನದಲ್ಲಿ, ಜಗದ್ಗುರು ಮಧ್ವಾಚಾರ್ಯರು ಇಲ್ಲಿ ಶ್ರೀಕೃಷ್ಣ ದೇವಾಲಯ ಮತ್ತು ಅಷ್ಟ ಮಠಗಳನ್ನು ಸ್ಥಾಪಿಸಿದ್ದಾರೆ. ಕಲೆ, ಸಂಸ್ಕೃತಿ ಮತ್ತು ತುಳುನಾಡಿನ ಶ್ರೀಮಂತ ಪರಂಪರೆ, ದಕ್ಷತೆ, ನಿಷ್ಠೆ ಮತ್ತು ವೀರರ ಗುಣಗಳನ್ನು ಇಲ್ಲಿನ ಜನರಲ್ಲಿ ಕಾಣಬಹುದು. ಇಂತಹ ಪುಣ್ಯಕ್ಷೇತ್ರದಲ್ಲಿ ಜನಿಸಿದ ಪರಮ ಗೌರವಾನ್ವಿತ ಡಾ.ಶಿವರಾಮ ಕಾರಂತರ 121ನೇ ಜಯಂತಿಯನ್ನು ಇಂದು ಆಚರಿಸುತ್ತಿರುವುದು ಸಂತಸದ ವಿಚಾರ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಶಿವರಾಮ ಕಾರಂತ ಟ್ರಸ್ಟ್ ಮತ್ತು ಗ್ರಾಮ ಪಂಚಾಯತಿಗೆ ನನ್ನ ಕೃತಜ್ಞತೆಗಳು ಎಂದರು.

ಕೋಟ ಶಿವರಾಮ ಕಾರಂತರು 400ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅವರ ಅಭೂತಪೂರ್ವ ಕೊಡುಗೆಯಿಂದಾಗಿ, ರಾಮಚಂದ್ರ ಗುಹಾ ಅವರು, “ಆಧುನಿಕ ಭಾರತದ ರವೀಂದ್ರನಾಥ ಟ್ಯಾಗೋರ್,” ಎಂದು ಕರೆದರು. ಶಿವರಾಮ್ ಕಾರಂತ್ ಅವರನ್ನು “ಕಡಲ ತೀರದ ಭಾರ್ಗವ” ಮತ್ತು “ವಾಕಿಂಗ್ ಎನ್ಸೈಕ್ಲೋಪೀಡಿಯಾ” ಎಂದೂ ಕರೆಯುತ್ತಾರೆ.

ಶಿವರಾಮ ಕಾರಂತರು ಗಾಂಧೀಜಿಯವರ ತತ್ವಗಳಿಂದ ಪ್ರಭಾವಿತರಾಗಿದ್ದರು. ಕಾರ್ನಾಡ್ ಸದಾಶಿವ ರಾವ್ ಅವರ ನೇತೃತ್ವದಲ್ಲಿ, ಕರ್ನಾಟಕದಲ್ಲಿ ಖಾದಿ ಮತ್ತು ಸ್ವದೇಶಿ ಪ್ರಚಾರ ಮಾಡಿದರು. ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಕಾರಂತರು ತಮ್ಮ ಕಾದಂಬರಿಗಳಲ್ಲಿ ಪರಿಸರ ಜಾಗೃತಿಯನ್ನು ಪ್ರಸ್ತಾಪಿಸಿದ್ದಾರೆ. ಅವರ ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವೂ ಅವರಿಗೆ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಪ್ರಶಂಸಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಶಾಸಕ ಗುರುರಾಜ್ ಗಂಟಿಹೊಳೆ, ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಯಶಪಾಲ್, ಎ.ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕೋಟತಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಕುಂದರ್ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...