ಪೆಹಲ್ಗಾಮ್ ಹತ್ಯಾಕಾಂಡ- ಮುಸ್ಲಿಂ ಬಾಂಧವ್ಯ ವೇದಿಕೆ ಖಂಡನೆ

Date:

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅತ್ಯಂತ ಹೇಯ ಮತ್ತು ಹೀನ ಕೃತ್ಯವಾಗಿದ್ದು ಇದು ಸಮಸ್ತ ನಾಗರಿಕ ಸಮಾಜದ ಮೇಲೆ ನಡೆದ ದಾಳಿಯಾಗಿದೆ. ಈ ಕೃತ್ಯದ ಹಿಂದೆ ಯಾವುದೇ ಶಕ್ತಿ ಅಥವಾ ಅದೆಷ್ಟೇ ದೊಡ್ಡ ವ್ಯವಸ್ಥೆಗಳೇ ಇರಲಿ ಅವುಗಳ ವಿರುದ್ಧ ಕೇಂದ್ರ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಧರ್ಮದ ಹೆಸರಿನಲ್ಲಿ ನಡೆಯುವ ಭಯೋತ್ಪಾದನಾ ಚಟುವಟಿಕೆಗಳಿಗೆ ಸುದೀರ್ಘ ಇತಿಹಾಸವಿದ್ದು ಜಾತಿ, ಧರ್ಮ, ದೇಶ, ಭಾಷೆಗಳ ಭೇದವಿಲ್ಲದೆ ಸಮಾಜದ ಎಲ್ಲರೂ ಇದಕ್ಕೆ ಬಲಿಪಶುಗಳಾಗಿದ್ದಾರೆ. ಹಾಗೆಯೇ, ಯಾವುದೇ ಭೇದವಿಲ್ಲದೆ ಇದರ ವಿರುದ್ಧ ಹೋರಾಡಿದ್ದಾರೆ. ಇಂಥ ಭಯೋತ್ಪಾದನಾ ಕೃತ್ಯಗಳಿಂದಾಗಿ ಸಮುದಾಯಗಳ ನಡುವೆ ಮತ್ತಷ್ಟು ಅಂತರ ಮೂಡಿ ಭಯೋತ್ಪಾದಕರ ಉದ್ದೇಶ ಈಡೇರದಂತೆ ರಾಜಕೀಯ ಧಾರ್ಮಿಕ ಮತ್ತು ಸಾಮಾಜಿಕ ವಲಯದಲ್ಲಿರುವ ಪ್ರಜ್ಞಾವಂತರು ಎಚ್ಚರಿಕೆ ವಹಿಸಬೇಕಿದೆ.

ಸಮಾಜ ವಿರೋಧಿ ಶಕ್ತಿಗಳು ವಿಜೃಂಭಿಸದಂತೆ ನೋಡಿಕೊಳ್ಳುವಲ್ಲಿ ಸಮುದಾಯಗಳು ಸಂಘಟಿತವಾದ ಕಾರ್ಯತಂತ್ರಗಳನ್ನು ಭವಿಷ್ಯದ ದೃಷ್ಟಿಯಿಂದ ರೂಪಿಸಿಕೊಳ್ಳಬೇಕಿದೆ. ಉಗ್ರವಾದಿಗಳಿಗೆ ಧರ್ಮ, ದೇಶ, ಭಾಷೆಗಳ ಹಂಗಿಲ್ಲ ಎನ್ನುವುದು ಈ ಪ್ರಕರಣ ಮತ್ತು ಹಿಂದಿನ ಹಲವು ಪ್ರಕರಣಗಳಲ್ಲಿ ಕಂಡುಬಂದಿದೆ. ಈ ಭೀಕರ ಹತ್ಯಾಕಾಂಡವನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಖಂಡಿಸುತ್ತದೆ ಮಾತ್ರವಲ್ಲ, ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ವಕ್ತಾರ ಮುಷ್ತಾಕ್ ಹೆನ್ನಾಬೈಲ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...