ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್‌ಗೆ ಕಠಿಣ ಶಿಕ್ಷೆ ವಿಧಿಸಲು ಮುಸ್ಲಿಂ ಮುಖಂಡರ ಆಗ್ರಹ

Date:

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಘಟನೆಯ ಮಾನವ ಸಮುದಾಯದ ಮೇಲೆ ನಡೆದಂತಹ ಅತ್ಯಾಚಾರ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು ಖಂಡನೀಯ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಶರೀಫ್ ಹೇಳಿದರು.

ಕಾರ್ಕಳದ ಮುಸ್ಲಿಂ ಸಮುದಾಯದ ಪರವಾಗಿ ಕಾರ್ಕಳದ ಪ್ರಕಾಶ್ ಹೊಟೇಲ್‌ನಲ್ಲಿ ಶನಿವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪಿ ಅಲ್ತಾಫ್ ಬಂಧನವಾಗಿದೆ. ಇಂತಹ ಅಮಾನವೀಯ ಕೃತ್ಯಕ್ಕೆ ನಾಗರಿಕ ಸಮುದಾಯ ಹೊಣೆಗಾರರಲ್ಲ. ಅಲ್ತಾಫ್ ಓರ್ವ ನಾಮಧಾರಿ ಮುಸ್ಲಿಂ, ಜೀವನದಲ್ಲಿ ಯಾವತ್ತೂ ಮಸೀದಿ ಬಾಗಿಲು ನೋಡಿದವನಲ್ಲ. ಆರೋಪಿ ಅಲ್ತಾಫ್‌ನಿಗೆ ಸೂಕ್ತ ಕಾನೂನಿನ ಕಠಿಣ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಕಳದಲ್ಲಿ ಹಿಂದೂ-ಮುಸ್ಲಿಂ ಭೇದ-ಭಾವವಿಲ್ಲದೆ ಸೌಹಾರ್ದತೆಯ ಜೀವನ ನಡೆಸುತ್ತಿದ್ದೇವೆ. ನಾಮಧಾರಿ ಮುಸ್ಲಿಮನಿಂದ ಇಡೀ ಮುಸ್ಲಿಂ ಸಮುದಾಯಕ್ಕೆ ಕಳಂಕವಾಗಿದೆ. ಮುಸ್ಲಿಂ ಸಮುದಾಯ ಎಂದಿಗೂ ಆತನಿಗೆ ಬೆಂಬಲಿಸುವುದಿಲ್ಲ. ಆತನನ್ನು ಬಹಿಷ್ಕರಿಸುವ ಬಗ್ಗೆ ಅಭಿಪ್ರಾಯವಾಗಿದೆ ಎಂದರು.

WhatsApp Image 2024 08 24 at 11.18.18 AM
ಆರೋಪಿ ಅಲ್ತಾಫ್

ಆರೋಪಿ ಈ ಹಿಂದೆ ಹಲವಾರು ಇಂಥದೇ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕರಿಂದ ಗೂಸಾ ತಿಂದರೂ ಬುದ್ಧಿ ಕಲಿತಿಲ್ಲ. ಮಾತ್ರವಲ್ಲದೆ ಈ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ ಮಾಫಿಯಾಗಳ ಪಾತ್ರ ಎದ್ದು ಕಾಣುತ್ತಿದೆ. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕಾರ್ಯಾಚರಿಸುತ್ತಿರುವ ಡ್ರಗ್ ಮಾಫಿಯಾವನ್ನು ಹತ್ತಿಕ್ಕುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಬೇಕಿದೆ. ಇದಕ್ಕೆ ಪೂರ್ಣ ಪ್ರಮಾಣದ ಸಹಕಾರವನ್ನು ಮುಸ್ಲಿಂ ಸಮುದಾಯದಿಂದ ಸಿಗಲಿದೆ ಎಂದರು.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರ ಕಾರ್ಯ ಶ್ಲಾಘನೀಯ. ಕೇವಲ ಒಂದೇ ಗಂಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದು, ಆರೋಪಿಗಳ ಪರವಾಗಿ ಯಾವುದೇ ನ್ಯಾಯವಾದಿಗಳು ವಾದಿಸದಂತೆ ಅವರು ವಿನಂತಿಸುವುದರ ಜೊತೆಗೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ: ಇಬ್ಬರ ಬಂಧನ

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾರ್ಕಳ ಅಧ್ಯಕ್ಷ ಮೊಹಮ್ಮದ್ ಗೌಸ್, ಕಾರ್ಕಳ ಮುಸ್ಲಿಂ ಜಮಾತ್ ಅಧ್ಯಕ್ಷ ಅಶ್ಫಾಕ್ ಅಹಮದ್, ಕರ್ನಾಟಕ ಮುಸ್ಲಿಂ ಜಮಾತ್ ಕಾರ್ಕಳ ಅಧ್ಯಕ್ಷ ನಾಸಿರ್ ಶೇಖ್, ಕಾರ್ಕಳ ಮುಸ್ಲಿಂ ಫೆಡರೇಷನ್ ಅಧ್ಯಕ್ಷ ಶಬ್ಬೀರ್ ಅಹಮದ್ , ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಇಕ್ಬಾಲ್ ಅಹಮದ್, ಜೆಸಿಸ್ ವಲಯ ಚೇರ್ಮನ್ ಸಮದ್ ಖಾನ್, ಸೇವಾದಳ ಕಾರ್ಕಳ ಅಧ್ಯಕ್ಷ ಅಬ್ದುಲ್ಲಾ ಶೇಖ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...