ಚಿಕ್ಕಬಳ್ಳಾಪುರ | ಅಲಿಪುರ ಗ್ರಾಮದಲ್ಲಿ ಅದ್ದೂರಿ ಮೊಹರಂ ಆಚರಣೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಮೊಹರಂ ಆಚರಿಸಲಾಯಿತು.
ಗ್ರಾಮದ ಆಸ್ತಾನಾ ಹುಸೈನಿ ಬಳಿ ಸುಮಾರು ಹತ್ತು ಸಾವಿರ ಜನ ಜಮಾವಣೆಗೊಂಡು ಧರ್ಮ ಗುರುಗಳ ಭಾಷಣ ಮುಕ್ತಾಯವಾದ ನಂತರ ಮುಸ್ತಫಾ ಸರ್ಕಲ್ ವರವಿಗೂ ಮೆರವಣಿಗೆ ನಡೆಸಿದರು.

ಮೊಹರಂ ಹಬ್ಬ ಮುಸ್ಲಿಮರಿಗೆ ದುಃಖವನ್ನು ಸೂಚಿಸುವ ಹಾಗೂ ಶೋಕಾಚರಣೆಯ ಹಬ್ಬ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಮೊದಲ ತಿಂಗಳಾದ ಹಾಗೂ ಹೊಸ ಇಸ್ಲಾಮಿಕ್‌ ವರ್ಷದ ಆರಂಭವನ್ನು ಸೂಚಿಸುವ ಮೊಹರಂ ತಿಂಗಳಲ್ಲಿ ಆಚರಿಸುವ ಪವಿತ್ರ ಮೊಹರಂ ಹಬ್ಬವನ್ನು ದುಃಖದ ಹಬ್ಬ, ಕಣ್ಣೀರಿನ ಹಬ್ಬವಾಗಿ ಮುಸ್ಲಿಮರು ಆಚರಿಸುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಧಾರ್ಮಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳುತ್ತಾರೆ. ಮೊಹರಂ ಹಿಂದೂ-ಮುಸ್ಲಿಂರ ಭಾವೈಕ್ಯತೆ ಸಾರುವ ಹಬ್ಬ. ಈ ಹಬ್ಬದಲ್ಲಿ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ. ಹತ್ತು ದಿನಗಳವರೆಗೆ ಮೊಹರಂ ಆಚರಣೆ ಮಾಡಲಾಗುತ್ತದೆ.

ಮೆರವಣಿಗೆಯಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವೃದ್ಧರು ಭಾಗವಹಿಸಿ ಎದೆ ಬರೆದುಕೊಂಡು ರಕ್ತ ಸುರಿಸಿ ಶೋಕಾಚರಣೆ ಮಾಡಿದರು. ಗ್ರಾಮದಲ್ಲಿ ಸುಮಾರು 300 ವರ್ಷ ಗಳಿಂದ ಶೋಕಾಚರಣೆಯ ಮೊಹರಂ ಆಚರಣೆ ಮಾಡಲಾಗುತ್ತಿದ್ದು,ಈ ಪದ್ಧತಿ ಈಗಲೂ ಸಹ ಜಾರಿಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 04 at 9.07.18 AM

ಸುಮಾರು ನಾಲ್ಕು ತಾಸು ನಡೆದ ಮೆರವಣಿಗೆಯಲ್ಲಿ ಮಕ್ಕಳು, ಯುವಕರು ಮತ್ತು ವೃದ್ಧರು ದೇಹದಂಡನೆ ಮಾಡಿಕೊಂಡರು. ‘ಆಲಿ ದೂಲಾ’ ಎಂದು ಕೂಗುತ್ತಾ ದಾರಕ್ಕೆ ಕಟ್ಟಿದ್ದ ಬ್ಲೇಡ್‌ಗಳ ಗೊಂಚಲನ್ನು ಜನರು ತಮ್ಮ ಎದೆಗೆ ಹಾಗೂ ಬೆನ್ನಿಗೆ ಬಡಿದುಕೊಂಡರು. ಆಗ ಅವರ ದೇಹದಿಂದ ರಕ್ತ ಚಿಮ್ಮುತ್ತಿತ್ತು. ಬಹುತೇಕರು ಎದೆಗೆ ಕೈಗಳಿಂದ ಬಡಿದುಕೊಂಡು ಶೋಕ ಗೀತೆಗಳನ್ನು ಹಾಡಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಈ ಸಂದರ್ಭದಲ್ಲಿ ಅಂಜುಮನ್ ಜಾಫರಿಯ್ ಅಧ್ಯಕ್ಷ ಅಲಿ ಅಬ್ಬಾಸ್, ಕಾರ್ಯದರ್ಶಿ ಫಾಝಿಲ್ ರಜಾ, ಗ್ರಾಮ ಪಂಚಾಯತಿ ಬಕರ್ ರಜಾ, ಸೈಯದ್ ನಾಥಿಕ್ ಅಲಿ, ಸೈಯದ್ ನಸೀಹ್ ರಜಾ, ಪ್ರಧಾನ ಮಂತ್ರಿ 14 ನೇ ಸಮಿತಿಯ ಸದಸ್ಯ ಸಾಖಿ ಅಹ್ಮದ್, ಅಲಬಾಲ್ಗ್ ಫೌಂಡೇಶನ್ ಹಾಗೂ ಮೊಹರಂ ಕಮಿಟಿಯ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...