ಗದಗ | ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು: ಸುರೇಶ ಚಲವಾದಿ

Date:

ಎಲ್ಲ ಜಾತಿ ವರ್ಗದ ಜನರೂ ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು. ಆಗ ಮಾತ್ರ ಅಸ್ಪೃಷ್ಯತೆ ತೊಲಗಲು ಸಾಧ್ಯ ಎಂದು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸುರೇಶ್ ಚಲವಾದಿ ಹೇಳಿದ್ದಾರೆ.

ಗದಗ ಜಿಲ್ಲೆಯ ಕದಡಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭಾರತದ ಪ್ರತಿಯೊಬ್ಬ ಪ್ರಜೆಗೂ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಬದುಕಲು ಸಮಾನ ಅವಕಾಶವನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿದ್ದಾರೆ. ಅದರ ಭಾಗವಾಗಿ ಪ್ರಜ್ಞಾವಂತ ನಾಗರಿಕ ಬಂಧುಗಳು ಸಂವಿಧಾನದ ಆಶಯಗಳಿಗೆ ಬದ್ದರಾಗಿ ಸಾಮರಸ್ಯದ ಬದುಕನ್ನು ಕಟ್ಟಿಕೊಳ್ಳಬೇಕು ಅಂದಾಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ” ಎಂದರು.

“ಬುದ್ದ ಬಸವ ಅಂಬೇಡ್ಕರ್ ಕಾಲದಿಂದ ಹಿಡಿದು ಪ್ರಸ್ತುತ ದಿನಮಾನದಲ್ಲಿಯೂ ಅಸ್ಪೃಷ್ಯತೆ ಆಚರಣೆಯಲ್ಲಿರುವುದು ನೋವಿನ ಸಂಗತಿ. ಅಸ್ಪೃಷ್ಯತೆ ನಿರ್ಮೂಲನೆ ಮಾಡಲು ಇಂತಹ ತಿಳುವಳಿಕೆ ಕಾರ್ಯಕ್ರಮವನ್ನು ನೀಡುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಾರ್ಯ ಶ್ಲಾಘನೀಯ. ಇಷ್ಟೆಲ್ಲಾ ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಾಗ್ಯೂ ಸಹಿತ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಅಸ್ಪೃಷ್ಯತೆ ಇನ್ನೂ ಜೀವಂತ ಇರುವದು ದುರಂತವೇ ಸರಿ. ಅಂತಹ ಗ್ರಾಮಗಳನ್ನು ಗುರ್ತಿಸಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಇನ್ನೂ ಹೆಚ್ಚು ಕಾನೂನು ತಿಳುವಳಿಕೆ ನೀಡಿ ಜಿಲ್ಲೆಯಲ್ಲಿ ಸಾಮರಸ್ಯದ ಬದುಕು ನಿರ್ಮಿಸಲು ಶ್ರಮವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕ ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮೀ ಇಂಗಳಳ್ಳಿ ಮಾತನಾಡಿ, “ಗ್ರಾಮೀಣ ಪ್ರದೇಶದ ಕೆಲವು ಗ್ರಾಮಗಳಲ್ಲಿ ಅಸ್ಪ್ರಷ್ಯತೆ ಇನ್ನೂ ಜೀವಂತವಿರುವದು ತುಂಬಾ ನೋವಿನ ಸಂಗತಿ ಇಂತಹ ಪ್ರಕರಣಗಳನ್ನು ಹೋಗಲಾಡಿಸಲು ಇಲಾಖೆ ಶ್ರಮಿಸುತ್ತಿದೆ. ಶೋಷಿತರ ಪರವಾಗಿ ನಮ್ಮ ಇಲಾಖೆ ಹಾಗೂ ನಮ್ಮ ಮೇಲಾಧಿಕಾರಿಗಳು ಸದಾಕಾಲ ಶ್ರಮಿಸುತ್ತೇವೆ” ಎಂದು ಹೇಳಿದರು.

ಜೇನುಗೂಡು ಕಲಾ ತಂಡ ಹಾಗೂ ಪ್ರಥ್ವಿಪ್ರಿಯಾ ಸಾರ್ವತ್ರಿಕ ಸೇವಾ ಸಂಸ್ಥೆಯವರು ಅಸ್ಪ್ರಷ್ಯತೆಯ ಕುರಿತು ಕ್ರಾಂತಿಗೀತೆ ಹಾಗೂ ಬೀದಿ ನಾಟಕ ಪ್ರದರ್ಶನ ಮಾಡಿ ಜನರಲ್ಲಿ ಜಾಗ್ರತಿ ಮೂಡಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸಂಶಿಯವರು ಅಸ್ಪ್ರಷ್ಯತೆಯ ಆಚರಣೆಯಿಂದಾಗುವ ಮಾನದಂಡಗಳ ಕುರಿತು ಕಾನೂನು ತಿಳುವಳಿಕೆ ನೀಡಿದರು.ಈ ಸಂದರ್ಭದಲ್ಲಿ ಡಿ.ವೈ ಎಸ್ಪಿ ಗದಗ.ತಹಶಿಲ್ದಾರ್ ಗದಗ.ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕರಾದ ಶ್ರೀಮತಿ ಮಂಜುಳಾ ಅವರು.ತಾಲೂಕಾ ಪಂಚಾಯ್ತಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ಪಂಚಾಯ್ತಿ ಆಢಳಿತ ಮಂಡಳಿ ಹಾಗೂ ಗ್ರಾಮದ ಸಮಸ್ತ. ಗುರು ಹಿರಿಯರು ಯುವಕ ಮಿತ್ರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...