ಬೀದರ್‌ | ಮಳೆಗೆ ಮೈಲೂರ ಸರ್ಕಾರಿ ಶಾಲೆ ಗೋಡೆ ಕುಸಿತ; ಸಚಿವ ರಹೀಂ ಖಾನ್‌ ಭೇಟಿ

Date:

ಭಾರಿ ಮಳೆಯಿಂದ ಬೀದರ್ ನಗರದ ಮೈಲೂರು ಸರ್ಕಾರಿ ಶಾಲೆಯ ತರಗತಿ ಕೋಣೆಯ ಗೋಡೆ ಕುಸಿದಿದ್ದು, ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ನೀಡಿ ಪರಿಶೀಲಿಸಿದರು.

ಶಾಲಾ ಕಟ್ಟಡದ ಫಿಟ್‌ನೆಸ್ ಕುರಿತು ತಕ್ಷಣವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಉಪವಿಭಾಗಾಧಿಕಾರಿ ಲವೀಶ ಓರ್ಡಿಯಾ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ‘ಎಲ್ಲ ಸರ್ಕಾರಿ ಶಾಲೆಗಳು ಅಗತ್ಯ ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ ಸುರಕ್ಷಿತವಾಗಿರಿಸುವುದಕ್ಕೆ ಸರ್ಕಾರ ಬದ್ಧವಾಗಿದೆ. ಇಲ್ಲಿಯ ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು, ಮೈಲೂರು ಶಾಲೆಯ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಾನು ಈಗಾಗಲೇ ಹಲವು ಹೊಸ ಶಾಲಾ ಕಟ್ಟಡ, ಹಾಸ್ಟೆಲ್‌ಗಳನ್ನು ನಿರ್ಮಿಸಿರುವೆ, ಮಹಿಳಾ ಪದವಿ ಕಾಲೇಜಿಗೆ ಕಲ್ಯಾಣ ಕರ್ನಾಟಕ ಪ್ರದೇಶಾವೃದ್ಧಿ ಮಂಡಳಿಯಿಂದ 10 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಶೀಘ್ರದಲ್ಲೇ ಕೆಲಸ ಆರಂಭವಾಗಲಿದೆ. ಎಲ್ಲ ಶೈಕ್ಷಣಿಕ ಕೇಂದ್ರಗಳ ಬಗ್ಗೆ ಕಾಳಜಿವಹಿಸಲಾಗುತ್ತಿದೆʼ ಎಂದರು.

ಮೈಲೂರು ಬಡಾವಣೆಯಲ್ಲಿ ಶಿಕ್ಷಣ ಸೇರಿದಂತೆ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಹೊಸ ರಸ್ತೆ, ಚರಂಡಿ, ಬೀದಿ ದೀಪಗಳನ್ನು ಅಳವಡಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ವಿಭಾಗ ತೆರೆಯಲು ಕರವೇ ಆಗ್ರಹ

ಈ ಸಂದರ್ಭದಲ್ಲಿ ಡಿಯುಡಿಸಿ ಯೋಜನಾ ನಿರ್ದೇಶಕ ಮೋತಿಲಾಲ್ ಲಮಾಣಿ, ನಗರಸಭೆ ಪೌರಾಯುಕ್ತ ಶಿವರಾಜ್ ರಾಠೋಡ್, ಗ್ರೇಡ್-2 ತಹಸೀಲ್ದಾರ್ ಜಿಯಾವುಲ್ಲಾ, ಬಿಇಒ ಅಖಿಲಾಂಡೇಶ್ವರಿ, ಕಾಂಗ್ರೆಸ್ ಮುಖಂಡ ಶೌಕತ್ ಅಲಿ, ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸ್ಥಳೀಯ ನಿವಾಸಿಗಳು ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...