ಮೈಸೂರು | ನಂದಿನಿ ಉತ್ಪನ್ನಕ್ಕೆ ಶೇ.10ರಷ್ಟು ರಿಯಾಯಿತಿ: ಮೈಮುಲ್ ಅಧ್ಯಕ್ಷ ಆರ್ ಚೆಲುವರಾಜು

Date:

ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರಾದಲ್ಲಿ‌ ನಂದಿನಿ ಉತ್ಪನ್ನಗಳನ್ನು ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಮೈಮುಲ್‌ ಅಧ್ಯಕ್ಷ ಆರ್ ಚೆಲುವರಾಜ್‌ ಹೇಳಿದರು.

ಮೈಸೂರು ನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಮಳಿಗೆ ಉದ್ಘಾಟಿಸಿ ಮಾತನಾಡಿದರು.

“ಮೈಮುಲ್ ಉತ್ಪನ್ನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಚಾಕೊಲೆಟ್‌ ಹಾಗೂ ಪನ್ನೀರ್ ತಯಾರು ಮಾಡುವ ಯೋಜನೆ ಬಗ್ಗೆ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಡಿಪಿಆರ್ ಸಲ್ಲಿಸಲಾಗುವುದು. ಇನ್ನೂ ಪ್ರಸ್ತುತ ಮೈಮುಲ್ ಡೇರಿಯಲ್ಲಿ ಬರೋಬ್ಬರಿ 9 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 4 ಲಕ್ಷ ಲೀಟರ್ ಹಾಲನ್ನು ಜನತೆ ಬಳಸುತ್ತಿದ್ದಾರೆ. ಉಳಿದ ಹಾಲನ್ನು ಪುಡಿ ಮಾಡಿ ಶೇಖರಿಸಿ ಉಪ ಉತ್ಪನ್ನಗಳನ್ನು ತಯಾರು ಮಾಡಲಾಗುತ್ತಿದೆ. ಹೀಗಾಗಿ ರೈತರ ಹಿತರ ದೃಷ್ಟಿಯಿಂದ ಚಾಕೊಲೆಟ್‌, ಪನ್ನೀರ್, ಚೀಸ್ ಸೇರಿದಂತೆ ಹಲವು ಉಪ ಉತ್ಪನ್ನಗಳ ತಯಾರಿಕೆಗೆ ಯೋಜನೆ ರೂಪಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇರಳದಲ್ಲಿ 20 ಸಾವಿರ ಲೀಟರ್ ಹಾಲು ಮಾರಾಟ ಮಾಡುತ್ತಿದ್ದೇವೆ. ತಮಿಳುನಾಡಿನ ಚೆನೈನಲ್ಲಿ 50 ಸಾವಿರ ಲೀಟರ್ ಹಾಲು ಮಾರಾಟ ಮಾಡುತ್ತಿದ್ದು, ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಐದು ದಶಕದ ಹಿಂದೆ ಪ್ರಾರಂಭಗೊಂಡ ಮೈಮುಲ್‌ನಲ್ಲಿ ಈಗ 1,205 ಸಂಘಗಳಾಗಿವೆ. 398 ಮಹಿಳಾ ಸಂಘಗಳಿವೆ. ರೈತರು ಇನ್ನೂ ಶೇ.25 ರಷ್ಟು ಪಾಲಿಸಿಯ ಮೊತ್ತ ಹಾಗೂ ಜಿಎಸ್‌ಟಿ ಕಟ್ಟಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ಮೊತ್ತ ಕಟ್ಟಬೇಡಿ” ಎಂದು ತಿಳಿಸಿದರು.

“ನಮ್ಮೆಲ್ಲ ರೈತರು ಮೈಸೂರಿನ ನಂದಿನಿ ಉತ್ಪನ್ನಗಳಾದ ಪೇಡಾ, ಮೈಸೂರು ಪಾಕ, ಕೇಸರಿ ಪೇಡಾ, ಬರ್ಫಿ, ಗೋದಿ ಲಾಡು ಹಾಗೂ ಕ್ಯಾಷೋ ಬರ್ಫಿ, ಮ್ಯಾಂಗೋ ಲಸ್ಸಿ ಸೇರಿದಂತೆ ಇತರೆ ತಂಪು ಪಾನೀಯಗಳನ್ನು ಹೆಚ್ಚೆಚ್ಚು ಬಳಸಬೇಕು” ಎಂದು ಕರೆ ನೀಡಿದರು.

ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ, “ನಂದಿನಿ ಉತ್ಪನ್ನ ನಮ್ಮೆಲ್ಲರ ಹೆಮ್ಮೆಯಾಗಿದೆ.‌ ಇದರ ಬಳಕೆ ಬಗ್ಗೆ ಜಾಗೃತಿ ಮೂಡಿಸಲು ಮಳಿಗೆ ತೆರೆಯಲಾಗಿದೆ. ದೇಶದ ದುಬೈ ಸೇರಿ ಅನೇಕ ಕಡೆಗಳಲ್ಲಿ ಮಾರಾಟ ಮಾಡುತ್ತಿರುವುದು ಸಂತಸದ ವಿಚಾರ ಮತ್ತಷ್ಟು ಮಂದಿ‌ ಇದರ ಬಳಕೆ ಮಾಡುವ ಮೂಲಕ ನಮ್ಮ ರೈತರ ಜೀವನಕ್ಕೆ ನೆರವಾಗೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪೌರಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಸುರೇಶ್ ನಾಯ್ಕ್, ಒಕ್ಕೂಟ ನಿರ್ದೇಶಕ ಎ ಟಿ ಸೋಮಶೇಖರ್, ಕೆ ಜಿ ಮಹೇಶ್, ಕೆ ಉಮಾಶಂಕರ್, ಕೆ ಈರೇಗೌಡ, ಸಿ ಓಂಪ್ರಕಾಶ್, ಕೆ ಎಸ್ ಕುಮಾರ್, ಪಿ ಎಂ ಪ್ರಸನ್ನ, ದಾಕ್ಷಾಯಿಣಿ ಬಸವರಾಜಪ್ಪ, ಲೀಲಾ ಬಿ ಕೆ ನಾಗರಾಜು, ಬಿ ನೀಲಾಂಬಿಕೆ ಮಹೇಶ್ ಕುರಹಟ್ಟಿ, ಎ ಶಿವಗಾಮಿ ಷಣ್ಮುಗಂ, ಬಿ ಎನ್ ಸದಾನಂದ, ಬಿ ಗುರುಸ್ವಾಮಿ, ಬಿ ಎ ಪ್ರಕಾಶ್, ಎ ಬಿ ಮಲ್ಲಿಕಾ ರವಿಕುಮಾರ್, ಸಿ ಪ್ರಸಾದ್ ರೆಡ್ಡಿ, ಪಶುಸಂಗೋಪನ ಇಲಾಖೆ ಪ್ರತಿನಿಧಿ ಡಾ ನಾಗರಾಜು, ಎಚ್ ಎಸ್ ಮಂಜುನಾಥ್, ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರತಿನಿಧಿ ರಜನಿ ತ್ರಿಪಾಠಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...