ಮೈಸೂರು | ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಉಡುಗೊರೆ; ನಟ ಡಾಲಿ ಧನಂಜಯ ಸಂತಸ

Date:

ಮದುವೆಗೂ ಮುನ್ನ ಮೈಸೂರಿನ ಭಾರತೀಯ ಅಂಚೆ ಇಲಾಖೆ ಅಧಿಕಾರಿಗಳು ವಿಶೇಷ ವಿನ್ಯಾಸದ ನಟ ಡಾಲಿ ಧನಂಜಯ್ ಹಾಗೂ ಡಾ ಧನ್ಯತಾ ಭಾವಚಿತ್ರವಿರುವ 12 ಅಂಚೆ ಚೀಟಿಗಳ ಪಟವಿರುವ ವಿಶೇಷ ಉಡುಗೊರೆಯೊಂದನ್ನು ನೀಡಿದ್ದು, ನಟ ಡಾಲಿ ಧನಂಜಯ ಸಂತಸ ವ್ಯಕ್ತಪಡಿಸಿದ್ದಾರೆ.

ಧನಂಜಯ ತಮ್ಮ ಮದುವೆ ಆಹ್ವಾನ ಪತ್ರಿಕೆಯನ್ನು ಭಾರತೀಯ ಅಂಚೆ ಇಲಾಖೆ ಇನ್ ಲ್ಯಾಂಡ್ ಲೆಟರ್ ಮಾದರಿಯಲ್ಲಿ ಹಂಚಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿತ್ತು. ಬಹು ಜನರ ಮೆಚ್ಚಿಗೆಗೆ ಪಾತ್ರವಾಗಿತ್ತು.

ಇದೀಗ ʼಶುಭ ವಿವಾಹ’ ಎಂಬ ಶೀರ್ಷಿಕೆ ಒಳಗೊಂಡ 12 ಸ್ಟ್ಯಾಂಪ್ ಗಳನ್ನು ಮೈಸೂರಿನ ಅಂಚೆ ಅಧಿಕಾರಿಗಳು ಧನಂಜಯ ಅವರನ್ನು ಭೇಟಿ ಮಾಡಿ ಉಡುಗೊರೆಯಾಗಿ ನೀಡಿರುವುದು ನವ ಜೋಡಿಗಳ ಸಂತಸವನ್ನು ದುಪ್ಪಟ್ಟು ಮಾಡಿದೆ. ಧನಂಜಯ್ ಅವರ ಮೂಲಕ ಇನ್ ಲ್ಯಾಂಡ್ ಕವರ್ ಬಳಕೆ ಹೆಚ್ಚಿದ್ದು, ಬೇಡಿಕೆಯೂ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ರೈತ ಸಾಲಗಾರನಲ್ಲ; ಸರ್ಕಾರವೇ ರೈತನಿಗೆ ಬಾಕಿದಾರ: ವಿಶ್ವ ರೈತಚೇತನ ಪ್ರೊ. ಎಂಡಿಎನ್ ನೆನಪು

ಇದೇ ತಿಂಗಳ 15 ಮತ್ತು16 ರಂದು ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಧನಂಜಯ ಮತ್ತು ಧನ್ಯತಾ ಮದುವೆ ನಡೆಯಲಿದೆ. ಈಗಾಗಲೇ ಮದುವೆ ಶಾಸ್ತ್ರ, ಸಂಪ್ರದಾಯಗಳ ಕಾರ್ಯಕ್ರಮಗಳು ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ಅಭಿಮಾನಿಗಳು ಮದುವೆಯ ದಿನ ಭಾಗಿಯಾಗಲು ಕಾತುರದಿಂದ ಕಾಯುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...