ಮೈಸೂರು | ಸರ್ಕಾರಿ ಶಾಲೆ ಮುಚ್ಚಲು ಮುಂದಾಗಿರುವ ಕಾಂಗ್ರೆಸ್‌ ನಡೆಗೆ ಎಐಡಿಎಸ್‌ಒ ವಿರೋಧ

Date:

ರಾಜ್ಯದ ಸುಮಾರು 4200 ಕನ್ನಡ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಗೆ ಎಐಡಿಎಸ್ಓ ತೀವ್ರ ವಿರೋಧ ವ್ಯಕ್ತಪಡಿಸಿ, ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ.

ಎಐಡಿಎಸ್ಓ ರಾಜ್ಯ ಖಚಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ, “ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ‘ ಹಬ್ ಅಂಡ್ ಸ್ಪೋಕ್’ ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಇದಕ್ಕಾಗಿ ಶಿಕ್ಷಣ ಸುಧಾರಣಾ ಸಮಿತಿಯನ್ನು ಸಹ ರಚಿಸಲಾಗಿದೆ. ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರಾಜ್ಯದಲ್ಲಿ 4 ಸಾವಿರಕ್ಕೂ ಅಧಿಕ ಶಾಲೆಗಳು 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯನ್ನು ಹೊಂದಿವೆ. ಈ ಶಾಲೆಗಳ ಭವಿಷ್ಯದ ಕುರಿತು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ತಲೆದೋರಿದೆ. ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಕೂಡಲೇ ಕ್ರಮವನ್ನು ಹಿಂತೆಗೆದುಕೊಂಡು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಲ್ಯಾಣ್ ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ 6,000ಕ್ಕಿಂತ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 50,000ಕ್ಕಿಂತ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಶಾಲೆಗಳಲ್ಲಿ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಗಳನ್ನು ಕೈಗೊಳ್ಳದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವುದು ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’ ಎಂಬಂತಾಗಿದೆ. ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೂಡಲೇ ಕೈಬಿಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ಯತೆಯ ಮೇರೆಗೆ ಸರ್ಕಾರವು ಬಜೆಟ್‌ನಲ್ಲಿ ಶಿಕ್ಷಣಕ್ಕೆ ಅನುದಾನ ನಿಗದಿಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕೆಂದು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಹೋರಾಟಗಳನ್ನು ಸಂಘಟಿಸುತ್ತೇವೆ. ಶಾಲೆಗಳಲ್ಲಿ ಹೋರಾಟದ ಸಮಿತಿಗಳನ್ನು ರಚಿಸಿ, ಪೋಷಕರ ಸಭೆಗಳನ್ನು ಸಂಘಟಿಸುತ್ತಿದ್ದೇವೆ. ಈ ಹೋರಾಟದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಮೈಸೂರು | ಅಮಿತ್ ಶಾ ಹೇಳಿಕೆ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಬಂಧನಕ್ಕೆ ಆಗ್ರಹ

ಪ್ರತಿಭಟನೆಯಲ್ಲಿ ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಮೈಸೂರು ಜಿಲ್ಲಾ ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ನಿತಿನ್, ಉಪಾಧ್ಯಕ್ಷೆ ಸ್ವಾತಿ ಪದಾಧಿಕಾರಿಗಳಾದ ಹೇಮ, ಚಂದನ, ಅಂಜಲಿ, ಅಭಿಷೇಕ, ದಿಶಾ, ನಂದೀಶ್ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...