ಮೈಸೂರು | ಬಿಸಿಯೂಟ ಕಾರ್ಯಕರ್ತೆಯರ ಕನಿಷ್ಠ ವೇತನ ಜಾರಿಗೆ ಎಐಯುಟಿಯುಸಿ ಆಗ್ರಹ

Date:

ಬಿಸಿಯೂಟ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಜಾರಿಗೊಳಿಸಿ, ಸಮವಸ್ತ್ರ, ಗುರುತಿನ ಚೀಟಿಗಳನ್ನು ನೀಡಿ, ಕಾರ್ಮಿಕರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ರಾಜ್ಯ ನಾಯಕಿ ಎಂ ಉಮಾದೇವಿಯವರು ಆಗ್ರಹಿಸಿದರು.

ಮೈಸೂರು ತಾಲೂಕಿನ ಎಐಯುಟಿಯುಸಿ ಕಚೇರಿಯಲ್ಲಿ ಬಿಸಿಯೂಟ ಕಾರ್ಯಕರ್ತೆಯರನ್ನು ಸಂಘಟಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಮೈಸೂರು ಗ್ರಾಮಾಂತರ ಸಮಾವೇಶಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

“ರಾಜ್ಯ ಸರ್ಕಾರದ ಶಾಲೆಗಳಲ್ಲಿ ಹಲವಾರು ವರ್ಷಗಳಿಂದ ಮಧ್ಯಾಹ್ನದ ಬಿಸಿ ಊಟದ ಅಡುಗೆ ತಯಾರು ಮಾಡುವ ಮುಖ್ಯ ಅಡುಗೆಯವರು, ಅಡುಗೆ ಸಹಾಯಕರ ಕೆಲಸವನ್ನು ಖಾಯಂಗೊಳಿಸಬೇಕು. ಇಲ್ಲವೇ ಇವರನ್ನು ಈ ಹುದ್ದೆಗಳಲ್ಲಿ ಖಾಯಂ ಗೊಳಿಸುವವರೆಗೆ ಮುಖ್ಯ ಅಡುಗೆಯವರು, ಅಡುಗೆಯವರು, ಅಡುಗೆ ಸಹಾಯಕರ ಹುದ್ದೆಗಳಿಗೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯ ಅನ್ವಯದಂತೆ ಈ ಶೆಡ್ಯೂಲ್ ಹುದ್ದೆಗಳಿಗೆ ನಿಗದಿಪಡಿಸಿರುವಷ್ಟು ಮಾಸಿಕ ವೇತನ, ಇಪಿಎಫ್,ಇಎಸ್‌ಐ ಸೌಲಭ್ಯಗಳನ್ನು ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸನಬದ್ಧ ಸೌಕರ್ಯಗಳಾದ ವಾರದ ರಜೆ, ರಾಷ್ಟ್ರೀಯ ಹಬ್ಬದ ರಜೆ, ಹೆರಿಗೆ ರಜೆಗಳನ್ನು ನೀಡಬೇಕು. ಈ ರಜಾ ದಿನಗಳಲ್ಲಿ ಕೆಲಸ ಮಾಡಿದವರಿಗೆ ದುಪ್ಪಟ್ಟು ವೇತನ ನೀಡಬೇಕು. ಮಾಸಿಕ ವೇತನವನ್ನು ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಕಾರ್ಮಿಕರ ಬ್ಯಾಂಕ್ ಖಾತೆಗೆ ಪಾವತಿ ಮಾಡಬೇಕು. ಪ್ರತಿ ತಿಂಗಳು ವೇತನ ಚೀಟಿ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ನೀರಿನ ಅಸಮರ್ಪಕ ಬಳಕೆ; ಕ್ರಮಕ್ಕೆ ಆಗ್ರಹ

“ಸುರಕ್ಷಿತ ನಿವೃತ್ತಿ ಬದುಕು ಖಾತರಿಪಡಿಸುವುದಕ್ಕಾಗಿ, ನಿವೃತ್ತಿ ವೇತನಕ್ಕೆ ಒಳಪಡಿಸಿ, ಅಲ್ಲಿಯವರೆಗೆ ರೂ.5 ಲಕ್ಷ ಇಡಿಗಂಟು ನೀಡಬೇಕು. ಜೀವವಿಮೆಗೆ ಒಳಪಡಿಸಿ ಇಲಾಖೆಯಿಂದ ಪ್ರೀಮಿಯಂ ಪಾವತಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಹೊಸದಾದ ಸಮಿತಿ ರಚಿಸಿ ಅಧ್ಯಕ್ಷರಾಗಿ ಕುಮಾರಿ, ಕಾರ್ಯದರ್ಶಿಯಾಗಿ ಮಹದೇವಮ್ಮ ಹಾಗೂ ಉಪಾಧ್ಯಕ್ಷರಾಗಿ ದೇವಮಣಿ, ಇಂದ್ರಮ್ಮ, ಪಾರ್ವತಮ್ಮ ಅವರನ್ನು ಆಯ್ಕೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...