ಮೈಸೂರು | ದುಷ್ಕರ್ಮಿಗಳಿಂದ ಅಂಬೇಡ್ಕರ್ ಭಾವಚಿತ್ರ ವಿರೂಪ; ಪ್ರತಿಭಟನೆ

Date:

ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯನ್ನು ಖಂಡಿಸಿ ಗ್ರಾಮದ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಸಿಂಧುವಳ್ಳಿ ಗ್ರಾಮದಲ್ಲಿನ ಅಂಬೇಡ್ಕರ್ ಭವನದ ಬಳಿ ‘ಅಂಬೇಡ್ಕರ್ ಯುವಕ ಸಂಘ’ವು ಅಂಬೇಡ್ಕರ್ ಭಾವಚಿತ್ರ ಇರುವ ನಾಮಫಲಕವನ್ನು ಅಳವಡಿಸಿತ್ತು. ಆ ನಾಮಫಲಕವನ್ನು ಕಿಡಿಗೇರಿಗಳು ಸೋಮವಾರ ರಾತ್ರಿ ವಿರೂಪಗೊಳಿಸಿದ್ದಾರೆ.

ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ, ಕ್ರಮಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು, ದಲಿತ ಯುವಕರು ಜಯಪುರ-ಕಡಕೋಳ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ಭಾವಚಿತ್ರವಿದ್ದ ನಾಮಫಲಕವನ್ನ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು, ವಿರೂಪಗೊಳಿಸಿದ್ದಾರೆ. ಅಂಬೇಡ್ಕರ್ ಭಾವಚಿತ್ರದ ಕಿವಿ, ಕನ್ನಡಕ ಇರುವ ಭಾಗ ವಿರೂಪಗೊಂಡಿದೆ. ನಾಮಫಲಕ ಬಿರುಕು ಬಿಟ್ಟಿದೆ. ಕೃತ್ಯ ಎಸಗಿದೆ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಗ್ರಾಮಕ್ಕೆ ಡಿವೈಎಸ್‌ಪಿ ಕರೀ ರಾವತ್ ಮತ್ತು ಮೈಸೂರು ದಕ್ಷಿಣ ಠಾಣಾ ಪಿಎಸ್ಐ ಶಾಂತಲಿಂಗಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ರೀಘ್ರವೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...