ಮೈಸೂರು | ಪ್ರಶಸ್ತಿಗಳು ನಮ್ಮನ್ನು ಅಣಕಿಸಬಾರದು : ಜಯಪ್ಪ ಹೊನ್ನಾಳಿ

Date:

ಮೈಸೂರು ತಾಲ್ಲೂಕಿನ ಇಲವಾಲ ಸರ್ಕಾರಿ ಪ್ರೌಢಶಾಲೆ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ‘ಶಿಕ್ಷಕರ ದಿನಾಚರಣೆ‘ ಪ್ರಯುಕ್ತ ಏರ್ಪಡಿಸಿದ್ದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ ಜಯಪ್ಪ ಹೊನ್ನಾಳಿ ಪ್ರಶಸ್ತಿಗಳು ನಮ್ಮನ್ನು ಅಣಕಿಸಬಾರದು ಎಂದು ಅಭಿಪ್ರಾಯಪಟ್ಟರು.

“ಪ್ರಶಸ್ತಿಗಾಗಿ ದುಂಬಾಲು ಬಿದ್ದು, ಅರ್ಜಿ ಹಾಕಿ, ಶಿಫಾರಸ್ಸು ಮಾಡಿಸಿ, ಹಣ ಕೊಟ್ಟು ಪಡೆದ ಪ್ರಶಸ್ತಿಗಳು ನಮ್ಮನ್ನು ಅಣಕಿಸುತ್ತವೆ. ಆದರೇ, ಸಾಧನೆಯಿಂದ ಪಡೆದ ಪ್ರಶಸ್ತಿಗಳು ಸದಾಕಾಲ ನಮ್ಮನ್ನು ಗೌರವಿಸುತ್ತವೆ” ಎಂದು ಸಾಹಿತಿ ಹೇಳಿದರು.

ಈ ಶಾಲೆಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂಟು ಜನ ಶಿಕ್ಷಕರು ಪ್ರಶಸ್ತಿ ಪಡೆಯಲು ಯಾವುದೇ ಅರ್ಜಿ ಹಾಕಿಲ್ಲ, ಯಾರಿಂದಲೂ ಶಿಫಾರಸ್ಸು ಮಾಡಿಸಿಲ್ಲ, ಕನ್ನಡ ನೆಲ, ಜಲ, ಭಾಷೆಯ ರಕ್ಷಣೆಗಾಗಿ ದುಡಿಯುತ್ತಿರುವ ಕನ್ನಡಾಂಬೆ ರಕ್ಷಣಾ ವೇದಿಕೆಯು ಈ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕರ ಗುಣಮಟ್ಟ ಅಥವಾ ಅವರ ಸಾಧನೆಯನ್ನು ಗುರುತಿಸಲು ಯಾವುದೇ ಪರೀಕ್ಷೆಗಳು ನಡೆಸಬೇಕಿಲ್ಲ. ಕೇವಲ ಅವರ ವಿದ್ಯಾರ್ಥಿಳನ್ನು ನೋಡಿದರೆ ಸಾಕು ಶಿಕ್ಷಕರ ಗುಣಮಟ್ಟ ತಿಳಿಯುತ್ತದೆ. ವಿದ್ಯಾರ್ಥಿಗಳೇ ಶಿಕ್ಷಕರ ಪರೀಕ್ಷೆಯ ಮಾನದಂಡ ಎಂದು ವಿವರಣೆ ನೀಡಿದರು.

ಕನ್ನಡಾಂಬೆ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ. ಬಿ. ರಾಜಶೇಖರ್ ಮಾತನಾಡಿ, “ಕಳೆದ ಐದು ವರ್ಷಗಳಿಂದ ನಮ್ಮ ಸಂಘಟನೆ ವತಿಯಿಂದ ಪ್ರತಿವರ್ಷ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕನ್ನಡ ನೆಲ, ಜಲ, ಭಾಷೆಯ ಉಳಿವು ಮತ್ತು ರಕ್ಷಣೆಗಾಗಿ ನಮ್ಮ ಸಂಘಟನೆ ಪ್ರಾಮಾಣಿಕವಾಗಿ ದುಡಿಯುತ್ತಿದೆ. ಇದರ ಜತೆ ದೇಶಕ್ಕೆ ಉತ್ತಮ ನಾಗರಿಕರನ್ನು ಸೃಷ್ಟಿಸುತ್ತಿರುವ ಶಿಕ್ಷಕರು ದೇಶದ ಅಭಿವೃದ್ಧಿ ಮತ್ತು ಉತ್ತಮ ಸಮಾಜ ನಿರ್ಮಾಣದ ರೂವಾರಿಗಳಾಗಿದ್ದಾರೆ. ಅಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸುವುದು ಸಹ ನಮ್ಮ ಸಂಘಟನೆಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಇಲವಾಲ ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಸರ್ಕಾರಿ ಪ್ರೌಢಶಾಲೆಯ ಎಂಟು ಜನ ಶಿಕ್ಷಕರನ್ನು ಗುರುತಿಸಿ ಅವರನ್ನು ಗೌರವಿಸಡಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹನೂರು | ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಎಂ ಆರ್ ಮಂಜುನಾಥ್ ಚಾಲನೆ

ತಮ್ಮ ಸಾಧನೆಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಜಗದೀಶ್ ಕೆ. ಎ, ಮಮತಾ ಎಸ್. ಎಸ್, ಶಶಿಕಲ ಎಸ್. ಎಸ್, ಮಹದೇವು ಡಿ. ಎನ್, ಲಿಂಗರಾಜಪ್ಪ ಎಲ್. ಜಿ, ಬಿ. ವಾಸುದೇವ, ಪುರುಷೋತ್ತಮ, ಬಸವರಾಜೇಂದ್ರ ಸ್ವಾಮಿ ಅವರನ್ನು ಇಲವಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭೈರೇಗೌಡ, ಕನ್ನಡಾಂಬೆ ರಕ್ಷಣಾ ವೇದಿಕೆಯ ಇತರೆ ಪದಾಧಿಕಾರಿಗಳು ಪ್ರಶಸ್ತಿ ಫಲಕ, ಶಾಲು, ಹಾರ, ಫಲ, ತಾಂಬೂಲ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷರಾದ ಮನುಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಜುಳ ಆರ್, ರಾಜ್ಯ ಖಜಾಂಚಿ ನಂಜುಂಡ, ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಮೈಸೂರು ಜಿಲ್ಲಾ ಅಧ್ಯಕ್ಷರಾದ ಸಂತೋಷ್, ಡಿಪಿಕೆ ಪರಮೇಶ್, ಜಿಲ್ಲಾ ಘಟಕದ ಸದಸ್ಯರಾದ ಕಿರಣ್, ಗೌರವ ಅಧ್ಯಕ್ಷ ನಾಗರಾಜು, ಆಪ್ತ ಕಾರ್ಯದರ್ಶಿ ಶಿವಕುಮಾರ್, ಸಂಘಟನಾ ಕಾರ್ಯದರ್ಶಿ ಲೋಕೇಶ್, ಲೋಕೇಶ್ ಚಿನ್ನಬುದ್ದಿ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಸೌಭಾಗ್ಯ, ಬೊಮ್ಮನಹಳ್ಳಿ ಕುಮಾರ್, ಕೆ.ಎಸ್.ಪೂರ್ಣಿಮಾ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...