ಮೈಸೂರು | ‘ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ – ಆರೋಗ್ಯ ಕರ್ನಾಟಕ ‘ ಅಂತಾರಾಷ್ಟ್ರೀಯ ಕಾರ್ಯಾಗಾರ

Date:

ಮೈಸೂರಿನಲ್ಲಿ ಭಾರತ ಜೆಎಸ್‌ಎಸ್ ಎಹೆಚ್‌ಇಆರ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ವೊಲ್ವರ್‌ಹ್ಯಾಂಪ್ಸನ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಡಿಜಿಟಲ್ ಆರೋಗ್ಯ ತಂತ್ರಗಳ ಕುರಿತಾಗಿ ‘ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ‘ ಎಂಬ ಅಂತಾರಾಷ್ಟ್ರೀಯ ಕಾರ್ಯಾಗಾರವನ್ನು ಜೆಎಸ್‌ಎಸ್‌ ವೈದ್ಯಕೀಯ ಕಾಲೇಜಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಜೆಎಸ್‌ಎಸ್ ಎಹೆಚ್‌ಇಆರ್ – ವೊಲ್ವರ್‌ಹ್ಯಾಂಪ್ಸನ್ ಪ್ಯೂಚರ್ ಹೆಲ್ತ್ಕೇರ್, ಪಾಲಿಸಿ ಇನ್ನೋವೇಶನ್ ಕೇಂದ್ರದಿಂದ ಡಾ. ವಿಕ್ರಮ್ ಪಾಟೀಲ್ (ಜೆಎಸ್‌ಎಸ್ ಎಹೆಚ್‌ಇಆರ್), ಪ್ರೊ. ಸುರೇಶ್ ರೇಣುಕಪ್ಪ (ವೊಲ್ವರ್‌ ಹ್ಯಾಂಪ್ಟನ್ ವಿಶ್ವವಿದ್ಯಾಲಯ ಮತ್ತು ರಾಯಲ್ ವೊಲ್ವರ್‌ಹ್ಯಾಂಪ್ಪನ್‌ ಎನ್‌ಹೆಚ್‌ಎಸ್‌ ಟ್ರಸ್ಟ್) ಅವರು ಸಂಘಟಿಸಿದ್ದರು.

ಕಾರ್ಯಾಗಾರದ ಮುಖ್ಯ ಉದ್ದೇಶವು ” ನಾಗರಿಕರು, ಆರೋಗ್ಯ ಸೇವೆ ಒದಗಿಸುವವರು ಮತ್ತು ಸರ್ಕಾರಗಳು ಎಬಿಡಿಎಂ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕವನ್ನು ಅಳವಡಿಸಿಕೊಳ್ಳುವಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಗುರುತಿಸುವುದು ಮತ್ತು ಡಿಜಿಟಲ್ ಆರೋಗ್ಯ ವ್ಯವಸ್ಥೆಯನ್ನು ಪರಿಶೀಲಿಸುವುದಾಗಿತ್ತು. ಈ ಅಂತಾರಾಷ್ಟ್ರೀಯ ಕಾರ್ಯಾಗಾರವು ಜ್ಞಾನ ವಿನಿಮಯ, ಸಂವಾದ ಮತ್ತು ಸಹಯೋಗಕ್ಕಾಗಿ ಒಂದು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಇದು ಹೆಚ್ಚು ಅಂತರ್ಗತ, ಸುಸ್ಥಿರ ಮತ್ತು ತಂತ್ರಜ್ಞಾನ – ಚಾಲಿತ ಆರೋಗ್ಯ ಪರಿಹಾರಗಳಿಗೆ ದಾರಿ ಮಾಡಿಕೊಟ್ಟಿತು. “

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮವನ್ನು ಜೆಎಸ್‌ಎಸ್ ಎಹೆಚ್‌ಇಆರ್‌ನ ಕುಲಪತಿಗಳಾದ ಡಾ. ಎಚ್. ಬಸವನಗೌಡಪ್ಪ ಉದ್ಘಾಟಿಸಿದರು. ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ರಿಸರ್ಚ್ ಅಂಡ್ ನಾಲೆಡ್ ಎಕ್ಸ್‌ಚೇಂಜ್‌ನ ಪ್ರೊ. ವಿಸಿ ಪ್ರೊ. ಪ್ರಶಾಂತ್ ಪಿಳ್ಳೆ ಮುಖ್ಯ ಭಾಷಣ ಮಾಡಿದರು. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ ನ ಪ್ರೊ. ಉತ್ಸಲ್ ಟಾಟು ಅವರು ‘ ಒನ್ ಹೆಲ್ತ್ ‘ ಪರಿಕಲ್ಪನೆಯ ಕುರಿತು ವಿಶೇಷ ಭಾಷಣ ಮಾಡಿದರು. ಚಾಮರಾಜನಗರ ಜಿಲ್ಲೆಯ ಆರೋಗ್ಯ ಸೇವೆಗಳಿಂದ ಡಾ. ಪಿ. ಚಂದ್ರಶೇಖರ್ ಮತ್ತು ಡಾ. ಪ್ರಕಾಶ್ ಎಬಿಡಿಎಂ ಕುರಿತು ಸರ್ಕಾರದ ದೃಷ್ಟಿಕೋನವನ್ನು ಹಂಚಿಕೊಂಡರು. ರಾಯಲ್ ವೊಲ್ವರ್‌ಹ್ಯಾಂಪ್ಟನ್ ಹಾಸ್ಪಿಟಲ್ಸ್ ಎನ್‌ಹೆಚ್‌ಎಸ್‌ ಟ್ರಸ್ಟ್‌ನ ಕ್ಲಿನಿಕಲ್ ರಿಸರ್ಚ್ ಡೈರೆಕ್ಟರ್ ಆದ ಪ್ರೊ. ಟೋನಿ ವಿನಿತ್ ಯುಕೆಯ ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಹೆಚ್‌ಎಸ್) ಕುರಿತು ಮಾಹಿತಿ ನೀಡಿದರು. ರಾಮಯ್ಯ ವೈದ್ಯಕೀಯ ಕಾಲೇಜಿನ ಪ್ರೊ. ನಂದ ಕುಮಾರ್ ಉದಯೋನ್ಮುಖ ಆರೋಗ್ಯ ತಂತ್ರಜ್ಞಾನಗಳ ಪಾತ್ರದ ಬಗ್ಗೆ ಚರ್ಚಿಸಿದರು. ದಿ ಎನರ್ಜಿ ಅಂಡ್ ರಿಸೋರ್ಸಸ್ ಇನ್‌ಸ್ಟಿಟ್ಯೂಟ್‌ನ (ಟಿಇಆರ್‌ಐ) ನಾಗರಾಜು ಯಬ್ಬಟ್ಟಿ ಆರೋಗ್ಯ ಸೇವೆಗಳಿಗಾಗಿ ಸುಸ್ಥಿರ ಇಂಧನ ಪರಿಹಾರಗಳ ಬಗ್ಗೆ ವಿವರಿಸಿದರು. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗದ ಸಿಇಒ ಡಾ. ಡಿ. ಬಿ. ನಟೇಶ್ ನೀತಿ ಅನುಷ್ಠಾನದ ಸವಾಲುಗಳನ್ನು ಕುರಿತು ಮಾತನಾಡಿದರು.

ಜೆಎಸ್‌ಎಸ್ ಎಹೆಚ್‌ಇಆರ್‌ನ ಅಧ್ಯಾಪಕರು ಮತ್ತು ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ತಜ್ಞರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಎಬಿಡಿಎಂ ಅಳವಡಿಕೆಯ ಚಾಲಕಗಳು, ಸವಾಲುಗಳು ಮತ್ತು ಉತ್ತಮ ಅಭ್ಯಾಸಗಳ ಕುರಿತು ಗುಂಪು ಚರ್ಚೆಗಳನ್ನು ಆಯೋಜಿಸಲಾಯಿತು. ಜೆಎಸ್‌ಎಸ್ ಎಹೆಚ್‌ಇಆರ್‌ನ ಡಾ. ಪಿ. ಸುಷ್ಮಾ ಮತ್ತು ಡಾ. ಎಸ್. ಚಂದನ್ ಸಂವಾದಾತ್ಮಕ ಅಧಿವೇಶನಗಳು ಮತ್ತು ಚರ್ಚೆಗಳೊಂದಿಗೆ ಕಾರ್ಯಾಗಾರವನ್ನು ಸುಗಮಗೊಳಿಸಿದರು. ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಪ್ರೊ. ಸುಭಾಷಿಣಿ ಸುರೇಶ್ ಅವರ ಮಾತುಗಳೊಂದಿಗೆ ಕಾರ್ಯಾಗಾರವು ಮುಕ್ತಾಯಗೊಂಡಿತು. ಈ ಕಾರ್ಯಕ್ರಮವು ಡಿಜಿಟಲ್ ಮತ್ತು ಸ್ಮಾರ್ಟ್ ನೀತಿಗಳ ಮೂಲಕ ಪರಿಣಾಮಕಾರಿ, ದಕ್ಷ ಮತ್ತು ಅಂತರ್ಗತ ಆರೋಗ್ಯ ಸೇವೆಗಳನ್ನು ಒದಗಿಸುವ ಕುರಿತು ಸಂವಾದಕ್ಕಾಗಿ ಒಂದು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸಿತು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಶಿಕಾರಿಪುರ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯ ಜನರ ಬದುಕು ಅತಂತ್ರ

ಪ್ರೊ. ಸುಬಾಶಿನಿ ಸುರೇಶ್, ವುಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯ,ಡಾ. ಪ್ರಕಾಶ್, ತಾಲೂಕು ಆರೋಗ್ಯಾಧಿಕಾರಿ ಪ್ರೊ. ಸುರೇಶ್ ರೇಣುಕಪ್ಪ, ವುಲ್ವರ್‌ಹ್ಯಾಂಪ್ಸನ್ ವಿಶ್ವವಿದ್ಯಾಲಯ ಮತ್ತು ರಾಯಲ್ ವುಲ್ವರ್‌ಹ್ಯಾಂಪ್ಟನ್ ಎನ್‌ಎಚ್‌ಎಸ್‌ ಟ್ರಸ್ಟ್ ಪ್ರೊ. ಉತ್ಪಲ್ ಟಾಟು, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಪ್ರೊ. ಡಾ. ಎಚ್. ಬಸವನಗೌಡಪ್ಪ, ಕುಲಪತಿ, ಜೆಎಸ್‌ಎಸ್ ಎಹೆಚ್ ಇಆರ್ ಪ್ರೊಫೆಸರ್ ಡಾ. ವಿಕ್ರಮ್ ಪಾಟೀಲ್, ಉಪ ಡೀನ್ ಪ್ರೊ. ಡಾ. ಪ್ರಶಾಂತ್ ವಿಶ್ವನಾಥ್, ಪ್ರೊ. ಡಾ. ಡಿ.ನಾರಾಯಣಪ್ಪ, ಜೆಎಸ್‌ಎಸ್‌ ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ಡಾ. ಎಸ್. ಚಂದನ್, ಉಪ ಡೀನ್ ನಾಗರಾಜು, ಟೆರಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...