ಮೈಸೂರು | ಬೈಕ್, ಟ್ಯಾಕ್ಸಿ ಚಾಲಕರ ಸಭೆ; ಪ್ರತಿಭಟನೆಗೆ ನಿರ್ಧಾರ

Date:

ಮೈಸೂರು ನಗರದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬೈಕ್, ಟ್ಯಾಕ್ಸಿ ಚಾಲಕರ ಅಸೋಸಿಯೇಷನ್ ಸಂಘದ ವತಿಯಿಂದ ಭಾನುವಾರ ಒಂಟಿಕೊಪ್ಪಲ್ ನ ಚೆಲುವಾಂಬ ಪಾರ್ಕ್ ನಲ್ಲಿ ಸಭೆ ನಡೆಯಿತು. ಸಂಘದ ಅಧ್ಯಕ್ಷ ಮಹಾದೇವ ನಾಯಕ ಮಾತನಾಡಿ ತಮ್ಮ ಕೋರಿಕೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದರು.

ಮೈಸೂರು ನಗರದಲ್ಲಿ ಸುಮಾರು 250 ಕ್ಕೂ ಹೆಚ್ಚು ಬೈಕ್, ಟ್ಯಾಕ್ಸಿ ಚಾಲಕರುಗಳಿದ್ದು. ಇವರುಗಳು, ರಾಪಿಡ್ ಆಟೋ, ಉಬರ್ ಆಟೋ, ಓಲಾ ಆಟೋಗಳಂತೆ ತಮ್ಮ ಬೈಕುಗಳಲ್ಲಿ ಆನ್ಲೈನ್ ಮೂಲಕ ಪ್ರಯಾಣಿಕರು ಬುಕ್ ಮಾಡಿದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದುಕೊಂಡು ಹೋಗಿ ಬಿಡುವ ಕಾಯಕದಲ್ಲಿ ತೊಡಗಿಕೊಂಡಿರುತ್ತಾರೆ. ಇವರುಗಳು ಆನ್ಲೈನ್ ಮುಖಾಂತರ ಬುಕ್ ಮಾಡಿದ ಗ್ರಾಹಕರ ಸ್ಥಳಗಳಿಗೆ ತೆರಳಿ ಅವರನ್ನು ತಮ್ಮ ಬೈಕುಗಳಲ್ಲಿ ಕೂರಿಸಿಕೊಂಡು 3 km ಗೆ 30 ರೂಪಾಯಿ ಮಾತ್ರ ಪ್ರಯಾಣ ದರ ತೆಗೆದುಕೊಂಡು ಗ್ರಾಹಕರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಾರೆ. ಇದರಿಂದ, ಚಾಲಕರ ಕುಟುಂಬದ ಜೀವನ ಸಾಗುತ್ತದೆ.

ಈ ಕಾಯಕದಲ್ಲಿ ಸರ್ಕಾರಕ್ಕೂ ಕೂಡ ಜಿಎಸ್‌ಟಿ ತೆರಿಗೆ ರೂಪದಲ್ಲಿ ಹಣ ಪಾವತಿಸುತ್ತಾರೆ. ಹೀಗಿರುವಾಗ, ನ್ಯಾಯಾಲಯಗಳು ಬೈಕ್, ಟ್ಯಾಕ್ಸಿ ವೃತ್ತಿಯನ್ನು ರದ್ದುಗೊಳಿಸಲು ಆದೇಶ ಹೊರಡಿಸಿದೆ. ಇದರಿಂದ, ನಮಗೆ ತುಂಬಾ ತೊಂದರೆ ಆಗಿದೆ. ನಮ್ಮ ಹೆಂಡತಿ, ಮಕ್ಕಳ ಸಾಕಲು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ, ಸರ್ಕಾರ ನಮಗೆ ಬೇರೊಂದು ಪರಿಹಾರ ಮಾರ್ಗ ಒದಗಿಸಿಕೊಡಬೇಕು. ಇಲ್ಲದಿದ್ದರೆ, ನ್ಯಾಯಾಲಯಕ್ಕೆ ಮನದಟ್ಟು ಮಾಡಿ ಬೈಕ್, ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘನ ನ್ಯಾಯಾಲಯವು ನಮ್ಮ ಈ ಮನವಿಯನ್ನು ಪರಿಷ್ಕರಿಸಿ ಬೈಕ್ ಟ್ಯಾಕ್ಸಿ ರದ್ದತಿ ಆದೇಶವನ್ನು ಹಿಂಪಡೆಯಬೇಕೆಂದು ಕೋರಿಕೊಂಡಿದ್ದೇವೆ, ಈ ತಿಂಗಳ 15ನೇ ತಾರೀಖಿನೊಳಗೆ ನಮಗೆ ನಿಖರವಾದ ಮಾಹಿತಿ ಬೇಕು. ನ್ಯಾಯ ಬೇಕು. ಇಲ್ಲದಿದ್ದಲ್ಲಿ, ಎಲ್ಲಾ 250 ಬೈಕ್, ಟ್ಯಾಕ್ಸಿ ಚಾಲಕರುಗಳು ಅವರವರ ಕುಟುಂಬದವರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.

ನಮ್ಮ ಬೈಕ್, ಟ್ಯಾಕ್ಸಿ ಸೇವೆಯಿಂದ ಗ್ರಾಹಕರಿಗೆ ಉಪಯೋಗವಾಗುತ್ತದೆ.ಆಸ್ಪತ್ರೆಗಳಿಗೆ, ಕಚೇರಿಗಳಿಗೆ, ಬಸ್, ನಿಲ್ದಾಣ, ರೈಲು ನಿಲ್ದಾಣಗಳಿಂದ ತಮ್ಮ ಮನೆಗಳಿಗೆ ತೆರಳಲು, ಇನ್ನಿತರೇ ಕೆಲಸಗಳಿಗೆ ಕರೆ ಮಾಡಿದ ತಕ್ಷಣ ಅವರು ಇರುವ ಸ್ಥಳಗಳಿಗೆ ಹೋಗಿ ಅಲ್ಲಿಂದ ಅವರು ಹೇಳುವ ಸ್ಥಳಗಳಿಗೆ ಸುರಕ್ಷಿತವಾಗಿ ಕರೆದೊಯ್ದು ಬಿಟ್ಟು ಬರುತ್ತೇವೆ. ನಮ್ಮಿಂದ ಗ್ರಾಹಕರಿಗೆ ತೊಂದರೆ ಆಗುವುದಿಲ್ಲ. ಅವರ ಸುರಕ್ಷತೆಯೇ ನಮ್ಮ ಧ್ಯೇಯವಾಗಿರುತ್ತದೆ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿರುತ್ತೇವೆ. ಹೀಗಿದ್ದರೂ, ಸಹ ಬೈಕ್, ಟ್ಯಾಕ್ಸಿ ವೃತ್ತಿ ಜೀವನಕ್ಕೆ ಕಡಿವಾಣ ಹಾಕಿರುವುದು ನಮ್ಮ ಬದುಕನ್ನು ಹಳ್ಳಕ್ಕೆ ತಳ್ಳಿದಂತಿದೆ ಎಂದು ಬೈಕ್ ಟ್ಯಾಕ್ಸಿ ಚಾಲಕರುಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಭೂ ವಿವಾದ; ದಲಿತ ಮಹಿಳೆ ಪೂವಮ್ಮ ಬಂಗಾರುಗೆ ಭೂಮಿ ಹಸ್ತಾಂತರ

ಸಂಘಟನೆಯ ಸದಸ್ಯ ಎಂ. ಶಂಕರ್ ಮಾತನಾಡಿ ಸರ್ಕಾರ ಯಾವುದೇ ತೀರ್ಮಾನಕ್ಕೆ ಬರದಿದ್ದಲ್ಲಿ ನಾವು ಜನತಾ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ. ಪ್ರತಿಭಟನೆಗೆ ಇಳಿಯಬೇಕಾಗುತ್ತದೆ. ಆದ್ದರಿಂದ, ಸರ್ಕಾರವು ನಮ್ಮ ಬದುಕಿಗೆ ಆಶ್ರಯವಾಗಬೇಕು ಮತ್ತೆ ಬೈಕ್, ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಸಭೆಯಲ್ಲಿ ನೂರಕ್ಕೂ ಹೆಚ್ಚು ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...