ಮೈಸೂರು | ಬಿಜೆಪಿಗರಿಂದ ಅವಹೇಳನಕಾರಿ ಹೇಳಿಕೆ; ನಗರ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು

Date:

ಕಾಂಗ್ರೆಸ್ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಲಘುವಾಗಿ ಮಾತನಾಡಿದ್ದರ ಬಗ್ಗೆ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದರು. ಇದನ್ನೇ ಗುರಿಯಾಗಿಸಿ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಬ್ಲಾಕ್ ಅಧ್ಯಕ್ಷ ದಿನೇಶ್ ಗೌಡ, ಲಕ್ಷ್ಮಣ್ ಅವರನ್ನು ಹಂದಿಗೆ ಹೋಲಿಸಿದಲ್ಲದೆ, ಅವಹೇಳನಕಾರಿಯಾಗಿ ನಿಂದಿಸಿ, ಪ್ರಾಣ ಬೆದರಿಕೆಯೊಡ್ಡಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರಾಜೇಶ್ ನೇತೃತ್ವದಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಮೈಸೂರು ನಗರದ ದಿನೇಶ್ ಗೌಡ ಎಂಬ ವ್ಯಕ್ತಿ ತಾನು ಬಿಜೆಪಿ ಪಕ್ಷದ ಮುಖಂಡ ಎಂದು ಹೇಳಿಕೊಳ್ಳುತ್ತಾ, ಕಾಂಗ್ರೆಸ್ ಪಕ್ಷದ ವಕ್ತಾರರಾದ ಲಕ್ಷ್ಮಣ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕ ಮಾಧ್ಯಮಗಳಲ್ಲಿ ಅತ್ಯಂತ ಅವಹೇಳನಕಾರಿ, ಮಾನ ಹಾನಿಕರ ಮತ್ತು ಶಾಂತಿಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ.

ಹೇಳಿಕೆಯಲ್ಲಿ ಹಂದಿ ಎಂಬ ಅತ್ಯಂತ ಕೀಳು ಮಟ್ಟದ ಶಬ್ದ ಬಳಸಿ ನಿಂದಿಸಿದ್ದಾರೆ. ಇಂತಹ ಅವಮಾನಕಾರಿ ಹೇಳಿಕೆಗಳು ಲಕ್ಷ್ಮಣ್ ರವರ ವೈಯಕ್ತಿಕ ಗೌರವ ಮತ್ತು ಮಾನ ಮರ್ಯಾದೆಗೆ ತೀವ್ರ ಧಕ್ಕೆ ತಂದಿವೆ. ಈ ರೀತಿಯ ಕೃತ್ಯವು ವ್ಯಕ್ತಿಯ ಘನತೆಯ ಮೇಲೆ ದಾಳಿಯಾಗಿರುವುದಷ್ಟೇ ಅಲ್ಲ, ನಾಗರಿಕ ಸಮಾಜದ ತಲೆತಗ್ಗಿಸುವಂತಹದ್ದು. ಈ ಹೇಳಿಕೆಗಳಿಂದ ಸಮಾಜದಲ್ಲಿ ಭಾವನಾತ್ಮಕ ಆಘಾತ, ಗೊಂದಲ, ಅಸಹಿಷ್ಣುತೆ ಮತ್ತು ಶಾಂತಿ ಭಂಗವಾಗುವ ಆತಂಕವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ಸಮುದಾಯಗಳ ನಡುವೆ ದ್ವೇಷ, ವಿಭಾಗೀಯತೆ ಮತ್ತು ಒಡಕುಗಳನ್ನು ಉಂಟು ಮಾಡುವ ಸಾಧ್ಯತೆಯನ್ನು ಹೊಂದಿದೆ. ಇಂತಹ ಕೃತ್ಯಗಳು ಜನಾಂಗೀಯ ಸೌಹಾರ್ದತೆಯನ್ನು ಕದಡುವ ಜೊತೆಗೆ ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ. ಇಂತ ವ್ಯಕ್ತಿಗಳಿಂದ ಸಮಾಜದಲ್ಲಿ ಅದರಲ್ಲೂ, ರಾಜಕಾರಣದಲ್ಲಿರುವ ವ್ಯಕ್ತಿಗಳಿಗೆ ಸೂಕ್ತ ಭದ್ರತೆ ಇಲ್ಲಾದಂತಾಗಿದೆ. ಮುಂದಿನ ದಿನಗಳಲ್ಲಿ ಎಂ.ಲಕ್ಷಣ್ ರವರಿಗೆ ಜೀವಕ್ಕೆ ತೊಂದರೆ ಆದರೆ ದಿನೇಶ್ ಗೌಡ ಮತ್ತು ಪ್ರತಾಪ್ ಸಿಂಹ ರವರೆ ಕಾರಣರಾಗಿರುತ್ತಾರೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ರಾಜೇಶ್ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಕಾನೂನು ರೀತ್ಯಾ ದಿನೇಶ್ ಗೌಡ ವಿರುದ್ಧ ತಕ್ಷಣವೇ ದೂರು ದಾಖಲಿಸಿಕೊಂಡು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು. ಆಯುಕ್ತರಾದ ಸೀಮಾ ಲಾಟ್ಕರ್ ಅವರ ಅನುಪಸ್ಥಿತಿಯಲ್ಲಿ ಡಿಸಿಪಿ ಮುತ್ತುರಾಜ್ ಅವರು ದೂರು ಪ್ರತಿ ಸ್ವೀಕರಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಲಿಖಿತ ಸಂವಿಧಾನವಾದಿಗಳಿಂದ ಲಿಖಿತ ಸಂವಿಧಾನ ದುರ್ಬಲಗೊಳಿಸಲು ಹುನ್ನಾರ : ಸಚಿವ ಮಹದೇವಪ್ಪ

ಬಿ. ಜಿ. ಕೇಶವ,ಸುನಿಲ್ ಕುಮಾರ್, ಧನಪಾಲ್, ರಾಜಶೇಖರ್, ಜಯಲಕ್ಷ್ಮಿ, ಸಯ್ಯದ್ ಫಾರೂಕ್, ಶ್ರೀನಿವಾಸ್, ರವಿ ನಾಯಕ್, ಕುಮಾರ, ಸಿದ್ದರಾಜು ಸೇರಿದಂತೆ ಇನ್ನಿತರರು ದೂರು ನೀಡುವಾಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...