ಮೈಸೂರು | ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ತಾಲೀಮು; ಅಂಜದ ಅಭಿಮನ್ಯು ಪಡೆ

Date:

ಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಪೂರ್ವಭಾವಿಯಾಗಿ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಆನೆಗಳಿಗೆ ಕುಶಾಲುತೋಪು ತಾಲೀಮು ನಡೆಯಿತು.

ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ಕುಶಾಲತೋಪು ಸಿಡಿಸುವ ಮೊದಲ ತಾಲೀಮು ನಡೆಯಿತು. ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆ ವೇಳೆ ಕುಶಾಲತೋಪು ಸಿಡಿಸುವಾಗ ಆನೆಗಳು ಮತ್ತು ಅಶ್ವಗಳು ಬೆದರದಂತೆ ತಾಲೀಮು ನಡೆಯುತ್ತದೆ.

ಏಳು ಫಿರಂಗಿಗಳಿಂದ ಹೊರಹೊಮ್ಮಿದ ಸಿಡಿ ಮದ್ದಿನ ಶಬ್ದಕ್ಕೆ ಅಭಿಮನ್ಯು ನೇತೃತ್ವದ ಗಜಪಡೆ ಅಂಜದೆ ಅನುಭವಿ ವರ್ತನೆ ತೋರಿದವು. ಹಿರಣ್ಯ ಆನೆ ಮೊದಲ ಬಾರಿ, ಸುಗ್ರೀವ ಆನೆ ಎರಡನೇ ಬಾರಿಗೆ ದಸರಾ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದು, ಹೊಸ ಆನೆಗಳಾದ ಸುಗ್ರೀವ ಮತ್ತು ಹಿರಣ್ಯ ಕೆಲ ಹೊತ್ತು ಹಿಂದಡಿ ಇಟ್ಟಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಫಿರಂಗಿ ಗಾಡಿಗಳನ್ನು ಬಳಸಿಕೊಂಡು ಒಟ್ಟು 21 ಬಾರಿ ಕುಶಾಲತೋಪು ಸಿಡಿಸಿ ಅಭ್ಯಾಸ ನಡೆಸಿದರು. ತಾಲೀಮಿನಲ್ಲಿ 43 ಕುದುರೆಗಳು, ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ 14 ಆನೆಗಳು, ಪೊಲೀಸ್‌ ಅಶ್ವಾರೋಹಿ ದಳ ಭಾಗಿಯಾಗಿದ್ದವು.

ಮುಂಜಾಗ್ರತಾ ಕ್ರಮವಾಗಿ ಅರ್ಜುನ, ಅಭಿಮನ್ಯು, ಮಹೇಂದ್ರ, ಭೀಮ ಹೊರತುಪಡಿಸಿ ಉಳಿದ ಎಲ್ಲ ಆನೆಗಳ ಕಾಲಿಗೆ ಸರಪಳಿ ಕಟ್ಟಲಾಗಿತ್ತು. ಎರಡನೇ ಸಾಲಿನಲ್ಲಿ ಸುಗ್ರೀವ, ರೋಹಿತ, ಪ್ರಶಾಂತ ಮತ್ತು ಹಿರಣ್ಯ ಆನೆಗಳಿದ್ದು, ಅವು ಬೆಚ್ಚಿಬಿದ್ದವು. ಮೊದಲ ಸುತ್ತಿನ ಸಿಡಿಮದ್ದು ಸ್ಫೋಟವಾಗುತ್ತಿದ್ದಂತೆ ಈ ಅನೆಗಳು ಚಡಪಡಿಸಲಾರಂಭಿಸಿದವು. ಸುಡುಮದ್ದು ಶಬ್ದಕ್ಕೆ ಬೆದರಿ ಘೀಳಿಟ್ಟವು. ಈ ಸಂದರ್ಭದಲ್ಲಿ ಮಾವುತರು ಆನೆಗಳನ್ನು ನಿಯಂತ್ರಿಸಿದ್ದು, ಬೆಚ್ಚಿದ ಕುದುರೆಗಳನ್ನು ಸವಾರರು ಹತೋಟಿಗೆ ತಂದರು.

ಫಿರಂಗಿ ನಳಿಕೆಯಿಂದ ಹೊರಹೊಮ್ಮುತ್ತಿದ್ದ ಬೃಹತ್ ಬೆಂಕಿಯುಂಡೆಗಳು, ಅವುಗಳ ಜೊತೆಗೆ ಆವರಿಸುತ್ತಿದ್ದ ದಟ್ಟ ಹೊಗೆಯನ್ನು ನೋಡುತ್ತ ಅಭಿಮನ್ಯು, ಅರ್ಜುನ, ಮಹೇಂದ್ರ ಹೆಸರಿನ ಅನುಭವಿ ಆನೆಗಳು ಧ್ಯಾನಸ್ಥ ಸ್ಥಿತಿಯಲ್ಲಿ ನಿಂತಿದ್ದವು.

ಈ ಸುದ್ದಿ ಓದಿದ್ದೀರಾ? ಮೈಸೂರು | ʼಮಹಿಷ ದಸರಾʼ ಮಾಡೇ ಮಾಡ್ತೇವೆ: ಪುರುಷೋತ್ತಮ್

“ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ, ಕುದುರೆಗಳಿಗೆ ಬುಧವಾರದಂದು ಮೊದಲ ಹಂತದ ಸಿಡಿಮದ್ದು ತಾಲೀಮು ನೀಡಿದರು. ಒಂದೆರಡು ಆನೆಗಳನ್ನು ಬಿಟ್ಟರೆ ಉಳಿದ ಆನೆಗಳು ಸಿಡಿಮದ್ದು ತಾಲೀಮಿನ ವೇಳೆ ಅಂಜದೆ ನಿಂತಿದ್ದವು. ಆನೆಗಳು, ಕುದುರೆಗಳು ಬೆದರಬಾರದೆಂಬ ಉದ್ದೇಶದಿಂದಲೇ ಈ ತಾಲೀಮು. ಹಳೇ ಆನೆಗಳನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸಿದ್ದೆವು. ಹೊಸ ಆನೆಗಳನ್ನು ಎರಡನೇ ಸಾಲಿನಲ್ಲಿ ನಿಲ್ಲಿಸಿದ್ದೆವು. ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಎಲ್ಲ ಹಂತದ ತಾಲೀಮನ್ನು ಯಶಸ್ವಿಯಾಗಿ ಮುಗಿಸುತ್ತಿವೆ. ಎರಡನೇ ಹಂತದ ಸಿಡಿಮದ್ದು ತಾಲೀಮು ಅಕ್ಟೋಬರ್ 13ರಂದು ನಡೆಯಲಿದೆ” ಎಂದು ಅರಣ್ಯಧಿಕಾರಿ ಸೌರಭ್ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...