ಮೈಸೂರು | ವಿದ್ಯುತ್ ಸಂಪರ್ಕಕ್ಕೆ ವಿಧಿಸಿರುವ ಶುಲ್ಕವನ್ನು ಕೂಡಲೇ ಕೈ ಬಿಡಬೇಕು: ಬಡಗಲಪುರ ನಾಗೇಂದ್ರ

Date:

ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಲು ಮತ್ತು ಹೊಸ ವಿದ್ಯುತ್ ಸಂಪರ್ಕ ಪಡೆಯಲು ರಾಜ್ಯ ಸರ್ಕಾರವು ಖರ್ಚು ವೆಚ್ಚವನ್ನು ರೈತರೇ ಭರಿಸಿಕೊಳ್ಳಬೇಕೆಂದು ಮಾಡಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, “ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆಯಿಲ್ಲ. ಬರಗಾಲದಲ್ಲಿ ರೈತರು ಕೊಳವೆ ಬಾವಿಗಳ ನೀರಾವರಿ ಮೂಲಕ ವ್ಯವಸಾಯ ಮಾಡಿ ಸಮಾಜಕ್ಕೆ ಹಣ್ಣು, ಹಂಪಲು ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಬೆಳೆದುಕೊಡುತ್ತಿದ್ದಾರೆ” ಎಂದರು.

“ಸರ್ಕಾರ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಲು ಮತ್ತು ಹೊಸ ವಿದ್ಯುತ್ ಸಂಪರ್ಕವನ್ನು ಪಡೆಯಲು ದುಬಾರಿ ಶುಲ್ಕವನ್ನು ವಿಧಿಸಿದ್ದು, ಇದು ರೈತರಿಗೆ ಹೊರೆಯಾಗಲಿದೆ. ಹಾಗಾಗಿ ಸರ್ಕಾರ ಈ ನೀತಿಯನ್ನು ಕೂಡಲೇ ಕೈ ಬಿಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಈ ನೀತಿಯನ್ನು ಕೂಡಲೇ ಕೈಬಿಟ್ಟು ಹಿಂದೆ ಇದ್ದ ನೀತಿಯನ್ನು ಮುಂದುವರೆಸಬೇಕು. ಇಲ್ಲದಿದ್ದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಡಗಲಪುರ ನಾಗೇಂದ್ರ ಅವರು ಈ ದಿನ.ಕಾಮ್ ಜತೆಗೆ ಮಾತನಾಡಿ, “ರಾಜ್ಯದ ಬರಪರಿಹಾರ ಹಣ ಬಿಡುಗಡೆಗೆ ಚುನಾವಣೆ ಆಯೋಗ ಅನುಮತಿಸಬೇಕು. ರಾಜ್ಯವು ಹಿಂದೆಂದೂ ಕಂಡರಿಯದಂತಹ ಬರಗಾಲಕ್ಕೆ ತುತ್ತಾಗಿದೆ. 223 ತಾಲೂಕುಗಳಲ್ಲಿ ಬರ ಉದ್ಭವವಾಗಿದ್ದು, 193 ತಾಲೂಕುಗಳು ಗಂಭೀರ ಬರವನ್ನು ಎದುರಿಸುತ್ತಿವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಎನ್‌ಡಿಆರ್‌ಎಫ್ ನೀತಿ ಅನ್ವಯ ₹18,171 ಕೋಟಿ ಬಿಡುಗಡೆ ಮಾಡದೆ ನಿರ್ಲಕ್ಷ್ಯ ಮಾಡಿ ಈಗ ಚುನಾವಣೆ ನೆಪ ಹೇಳುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಭೂಗುತ್ತಿಗೆ ನೀಡುವ ಆದೇಶ ರದ್ದು ಮಾಡಬೇಕು; ಬಡಜನರ ಆಕ್ರೋಶ

“ಚುನಾವಣಾ ಆಯೋಗ ಅನುದಾನ ಬಿಡುಗಡೆಗೆ ಕೂಡಲೇ ಅನುಮತಿಸಬೇಕು ಎಂದು ಒತ್ತಾಯಿಸಿದ್ದು, ಈ ಸಂಬಂಧ ಸುಪ್ರಿಂ ಕೋರ್ಟ್ ಮುಂದೆ ಕೇಂದ್ರದ ವಿರದ್ದ ರಾಜ್ಯ ಸರ್ಕಾರ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಸಂಘವು ಪಾರ್ಟಿಯಾಗಲು ಅರ್ಜಿ ಸಲ್ಲಿಸಿದ್ದು, ಸಂಘದ ಪರವಾಗಿ ಹೆಸರಾಂತ ವಕೀಲ ಪ್ರಶಾಂತ್ ಭೂಷಣ್ ಅವರು ವಕೀಲರಾಗಿ ಪ್ರತಿನಿಧಿಸಿದ್ದಾರೆ. ಈ ತಿಂಗಳ 8ರಂದು ಈ ಪ್ರಕರಣವು ವಿಚಾರಣಗೆ ಬಂದಿದ್ದು, ಕೇಂದ್ರ ಸರ್ಕಾರ 15 ದಿನಗಳ ಕಾಲಾವಕಾಶವನ್ನು ಕೋರಿರುತ್ತದೆ” ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...