ಮೈಸೂರು | ಸ್ವಚ್ಛತಾ ರಾಯಭಾರಿಗಳಾದ ವಸಿಷ್ಠ ಸಿಂಹ, ಹರಿಪ್ರಿಯ, ಅರುಣ್ ಯೋಗಿರಾಜ್

Date:

ಚಲನಚಿತ್ರ ಕಲಾವಿದೆಯರಾದ ವಸಿಷ್ಠ ಸಿಂಹ, ನಟಿ ಹರಿಪ್ರಿಯ, ಶಿಲ್ಪಿ ಅರುಣ್ ಯೋಗಿರಾಜ್, ಬಿಗ್ ಬಾಸ್ ಸ್ಪರ್ಧಿ ಸೂರಜ್ ಸಿಂಗ್, ಗಾಯಕಿ ಅನನ್ಯ ಭಟ್ ಹಾಗೂ ಆಲೋಕ್ ಇವರುಗಳು ಮೈಸೂರು ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಆರು ಮಂದಿ ಸಾಧಕರನ್ನು ‘ಸ್ವಚ್ಛತಾ ಬ್ರಾಂಡ್ ಅಂಬಾಸಿಡರ್’ಗಳನ್ನಾಗಿ ನೇಮಕ ಮಾಡಿದೆ.

ಸ್ವಚ್ಛ ಭಾರತ ಅಭಿಯಾನದಡಿ ಮೈಸೂರು ನಗರವನ್ನು ಕೇವಲ ಬಾಹ್ಯವಾಗಿ ಅಷ್ಟೇ ಅಲ್ಲದೆ, ನಾಗರಿಕರ ಮನೋಭಾವದಲ್ಲಿಯೂ ಸ್ವಚ್ಛತೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮ ಕೈಗೊಂಡಿದೆ. ಚಲನಚಿತ್ರ, ಸಂಗೀತ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆ ಸಲ್ಲಿಸಿರುವ ಗಣ್ಯರ ಜನಪ್ರಿಯತೆ ಮತ್ತು ಬದ್ಧತೆಯನ್ನು ಗಮನಿಸಿ ಈ ಜವಾಬ್ದಾರಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಮಕಗೊಂಡಿರುವ ಈ ಗಣ್ಯರು ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಪಾಲಿಕೆಯು ಹಮ್ಮಿಕೊಳ್ಳುವ ಸ್ವಚ್ಛ ಭಾರತ ಅಭಿಯಾನದ ವಿವಿಧ ಕಾರ್ಯಕ್ರಮಗಳು ಹಾಗೂ ಜಾಗೃತಿ ಜಾಥಾಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸ್ವಚ್ಛತೆಯ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ

ಸಂಪೂರ್ಣವಾಗಿ ಸೇವಾ ಮನೋಭಾವದಿಂದ, ಯಾವುದೇ ಗೌರವಧನ ಅಥವಾ ಆರ್ಥಿಕ ಲಾಭದ ಅಪೇಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಾಧಕರು ರಾಯಭಾರಿಗಳಾಗಿ ನೇಮಕಗೊಂಡಿದ್ದಾರೆ. ಮೈಸೂರನ್ನು ಶಿಸ್ತುಬದ್ಧ ಹಾಗೂ ಮಾದರಿ ನಗರವಾಗಿ ರೂಪಿಸುವ ಪಾಲಿಕೆಯ ಆಶಯಕ್ಕೆ ಇವರ ಸಹಕಾರ ಜೊತೆಯಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೈಖ್ ತನ್ವಿರ್ ಆಸೀಫ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...