ಮೈಸೂರು | ಕುಸಿದ ತಾಲೂಕು ಕಚೇರಿ ಮೇಲ್ಛಾವಣಿ; ವೃದ್ಧೆಯ ಕಾಲಿನ ಬೆರಳು ತುಂಡು

Date:

ಮೈಸೂರು ಹುಣಸೂರು ತಾಲೂಕು ಕಚೇರಿಯ ಮೇಲ್ಛಾವಣಿ ಕುಸಿದು ವೃದ್ಧೆಯೊಬ್ಬರ ಕಾಲಿನ ಬೆರಳು ತುಂಡಾಗಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹುಣಸೂರಿನ ತಾಲೂಕು ಕಚೇರಿಯಲ್ಲಿ ಮಾ.18ರಂದು ಸಂಜೆ 3.30ರ ಆಸುಪಾಸಿನಲ್ಲಿ ಆಸ್ತಿ ನೊಂದಣಿಗಾಗಿ ತಾಲೂಕು ಕಚೇರಿಗೆ ಬಂದಿದ್ದ ವೃದ್ದೆ ಮೇಲೆ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಪರಿಣಾಮ ಕಾಲಿನ ಬೆರಳು ತುಂಡಾಗಿದೆ. ಹುಣಸೂರು ತಾಲೂಕು ಕಳ್ಳಿಕೊಪ್ಪಲು ಗ್ರಾಮದ ನಾಗಮ್ಮ(67) ಗಾಯಗೊಂಡು ವೃದ್ದೆಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಮಧ್ಯಾಹ್ನ ಸಮಯದಲ್ಲಿ ಆಸ್ತಿ ನೊಂದಣಿಗಾಗಿ ತಾಲೂಕು ಕಚೇರಿ ಬಂದಿದ್ದ ನಾಗಮ್ಮ ಕಚೇರಿ ಪ್ರವೇಶಿಸುವ ದ್ವಾರದ ಜಗುಲಿಯ ಮೇಲೆ ಕುಳಿತಿದ್ದರು. ಈ ವೇಳೆ ಶಿಥಿಲಗೊಂಡಿದ್ದ ಮೇಲ್ಛಾವಣಿ ಕುಸಿದು ಬಿದ್ದಿದೆ. ಛಾವಣಿ ಬಿದ್ದ ರಭಸಕ್ಕೆ ವೃದ್ಧೆಯ ಕಾಲ್ಬೇರೆಳು ತುಂಡಾಗಿದೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ತಾಲೂಕು ಕಛೇರಿ ನಡೆಯುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಮತ್ತು ದಸಂಸ ಮುಖಂಡರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಂತರ ಕಟ್ಟಡದ ದುರಸ್ಥಿಗಾಗಿ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಈ ವೇಳೆ ದಸಂಸ ತಾಲೂಕು ಸಂಚಾಲಕ ಆತ್ತಿಕುಪ್ಪೆ ರಾಮಕೃಷ್ಣ, ರಾಜು ಚಿಕ್ಕ ಹುಣಸೂರು, ಶಿವರಾಜ್ ಮುತ್ತುರಾಯನ ಹೊಸಳ್ಳಿ, ಅತ್ತಿಕುಪ್ಪೆ ಸಿದ್ದೇಶ್, ಭುವನ್, ಕೃಷ್ಣ, ಚೆಲುವರಾಜು ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...