ಮೈಸೂರು | ಜಾತಿ, ಧರ್ಮದ ಹೆಸರಿನಲ್ಲಿ ಸಂಘರ್ಷ

Date:

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಂಘರ್ಷಗಳು ನಡೆಯುತ್ತಿವೆ. ಸಮಾಜದಲ್ಲಿ ವ್ಯವಹಾರಿಕತೆ, ಅಸಹನೀಯ ಪ್ರವೃತ್ತಿ ಹೆಚ್ಚುತ್ತಿದೆ. ಇಂತಹ ಹೊತ್ತಿನಲ್ಲಿ ಜೀವನ ಪ್ರೀತಿಯ ಅಗತ್ಯವಿದೆ. ಬುದ್ಧ ಮತ್ತು ಗಾಂಧಿಯ ಜೀವನ ಪ್ರೀತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ. ಜಯಪ್ರಕಾಶ್ ಗೌಡ ಕರೆ ನೀಡಿದರು.

ಶ್ರೀ ನಟರಾಜ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಕಲಾಕೂಟ ಹಾಗೂ ಸ್ಪಂದನ ಸಾಂಸ್ಕೃತಿಕ ಪರಿಷತ್ತಿನಿಂದ ನಟರಾಜ ಸಭಾಭವನದಲ್ಲಿ ನಡೆದ ವಿಚಾರ ಸಂಕಿರಣ ಮತ್ತು ಸಂವಾದ ಸಮಾರಂಭದ ಸಮಾರೋಪದಲ್ಲಿ ಸಾಹಿತಿ ಸಾತನೂರು ದೇವರಾಜ್‌ ಅವರನ್ನು ಅಭಿನಂದಿಸಿ ಮಾತನಾಡಿದರು.

IMG 20241128 WA0052

“ಸಾಹಿತ್ಯ ಕ್ಷೇತ್ರವೂ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸುಳ್ಳುಗಾರರು, ಅವಕಾಶವಾದಿಗಳು, ಭಂಡಗಾರರು ತುಂಬಿದ್ದಾರೆ. ಆದ್ದರಿಂದ, ರಾಜಕೀಯವೂ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಯೋಗ್ಯರನ್ನೂ ಆರಿಸಬೇಕು, ಬೆಂಬಲಿಸಬೇಕು. ಈ ಪ್ರಜ್ಞೆ ಜನರಲ್ಲಿ ಸದಾ ಇರಬೇಕು. ಇಲ್ಲದಿದ್ದರೆ ಪ್ರಜಾಪ್ರಭುತ್ವ, ಸತ್ಯ, ನ್ಯಾಯ, ಸಮತೆ ಉಳಿಯುವುದಿಲ್ಲ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವರು ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಹುಡುಕಿಕೊಂಡು ಹೋಗುತ್ತಾರೆ. ಇಂಥವರ ನಡುವೆ ಕೆಲವು ಸಂಭಾವಿತರು ತಮ್ಮಷ್ಟಕ್ಕೆ ತಾವು ಅಮೂಲ್ಯ ಸೇವೆಯನ್ನು ಸಲ್ಲಿಸುತ್ತ, ಅಗಾಧ ಸಾಧನೆ ಮಾಡಿರುತ್ತಾರೆ. ಯಾವತ್ತಿಗೂ ಪ್ರಶಸ್ತಿಯ ಹಿಂದೆ ಬೀಳುವುದಿಲ್ಲ. ಅಂತಹ ಅಪರೂಪದ ಸಾಹಿತ್ಯ ಸಾಧಕ ಸಾತನೂರು ದೇವರಾಜ್. ಇವರ ಕೊಡುಗೆ ವಿಜ್ಞಾನ ಸಾಹಿತ್ಯಕ್ಕೆ ಅಮೂಲ್ಯವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ರಾಮನಗರ | ಶವಸಂಸ್ಕಾರಕ್ಕೆ ದಲಿತರಿಗೆ ಅಡ್ಡಿ; ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಶವವಿಟ್ಟು ಪ್ರತಿಭಟನೆ

“ಸಾಹಿತ್ಯಕ್ಕೂ ವಿಜ್ಞಾನಕ್ಕೂ ಅಪಾರ ನಂಟಿದೆ. ವಿಜ್ಞಾನ ಪ್ರಕೃತಿ ರಹಸ್ಯ ಭೇದಿಸಿದರೆ, ಸಾಹಿತ್ಯ ಮನುಷ್ಯನ ಅಂತಃರಂಗವ ಭೇದಿಸುತ್ತದೆ. ಈ ಪ್ರಕ್ರಿಯೆ ಎಂದಿಗೂ ನಿಲ್ಲವುದಿಲ್ಲ. ವಿಜ್ಞಾನ ಕ್ಷೇತ್ರ ತುಂಬಾ ಮುಂದುವರಿದಿದೆ. ವಿಜ್ಞಾನ ನಿರಂತರ ತಿಳಿವಳಿಕೆ ಕೊಡುತ್ತದೆ. ಜೀವನದ ಹೊಸ ಹೊಸ ಸವಾಲುಗಳನ್ನು ಎದುರಿಸುವಂತೆ ಮಾಡುತ್ತದೆ. ಕೊರತೆಗಳನ್ನು ನೀಗಿಸುತ್ತದೆ. ಇದನ್ನು ಜನರು ಅರ್ಥ ಮಾಡಿಕೊಂಡಿಲ್ಲ” ಎಂದು ವಿಷಾದಿಸಿದರು.

“ಕನ್ನಡದಲ್ಲಿ ವಿಜ್ಞಾನದ ವಿಚಾರಗಳನ್ನು ಸರಳವಾಗಿ ಬರೆಯುವ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಜಿ ಟಿ ನಾರಾಯಣರಾವ್ ಅವರ ಕೊಡುಗೆ ಅಪಾರ. ಅವರ ಹಾದಿಯಲ್ಲಿ ಸಾಗುತ್ತಿರುವ ಸಾತನೂರು ದೇವರಾಜ್ ಸರಳವಾದ ಭಾವ ಮತ್ತು ಭಾಷೆಯಲ್ಲಿ ಆಕರ್ಷಕವಾಗಿ ವಿಜ್ಞಾನ ಸಾಹಿತ್ಯ ಬರೆಯುತ್ತಿರುವುದು ಅಭಿನಂದನಾರ್ಹ ಕಾರ್ಯ” ಎಂದರು.

ಲೇಖಕ ಸಾತನೂರು ದೇವರಾಜ್ ಅಭಿನಂದನೆ ಸ್ವೀಕರಿಸಿ ಮಾತನಾಡಿ, “ಸಾಹಿತ್ಯ ರಚನೆಗೆ ಹೊರಗಿನ ಒತ್ತಡಗಳು ಮತ್ತು ಒಳಗಿನ ಪ್ರೇರಣೆ ಎರಡೂ ಬೇಕು. ಹಾಗೆಯೇ ನನ್ನ ಬದುಕಿನಲ್ಲೂ ಒತ್ತಡ ಮತ್ತು ಪ್ರೇರಣೆ ಈ ಎರಡೂ ಸಿಕ್ಕ ಕಾರಣ ನಾನು ಲೇಖಕನಾಗಲು ಸಾಧ್ಯವಾಯಿತು” ಎಂದು ಸ್ಮರಿಸಿದರು.

IMG 20241128 WA0053 1

“ಕನ್ನಡದಲ್ಲಿ ಸಾಮಾನ್ಯ ವಿಜ್ಞಾನ ಸಾಹಿತ್ಯದ ಕೃತಿಗಳ ಲಭ್ಯತೆ ಕಡಿಮೆ ಇದೆ. ಇರುವವೂ ಕೂಡ ಸ್ವಲ್ಪ ಸಂಕೀರ್ಣವಾಗಿವೆ. ಇದನ್ನು ಮನಗಂಡು ವಿದ್ಯಾರ್ಥಿಗಳಲ್ಲಿ ಮತ್ತು ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವನ್ನು ಮೂಡಿಸಲು ‘ವಿಜ್ಞಾನ ಸಾಹಿತ್ಯ’ ಕೃಷಿ ಮಾಡುತ್ತಿರುವೆ. ಇಂದಿನ ಸಮಾಜಕ್ಕೆ ಜೈವಿಕ ವಿಜ್ಞಾನ ಕುರಿತಾದ ಪುಸ್ತಕಗಳು ಹೆಚ್ಚು ಬರುವ ಅಗತ್ಯವಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ‌ ವತಿಯಿಂದ ವಾರ್ಷಿಕ ಕ್ರೀಡಾಕೂಟ

ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಡಾ.ಎಸ್. ಶಿವರಾಜಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ ಸತೀಶ್ ಜವರೇಗೌಡ ಸಮಾರೋಪ ನುಡಿಗಳನ್ನಾಡಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಪ್ರೊ. ಕೆ ಟಿ ವೀರಪ್ಪ ಅಭಿನಂದನಾ ಭಾಷಣ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ ಚಂದ್ರಶೇಖರ್, ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ ಡಿ ಕೆ ಉಷಾ, ವಾತ್ಸಲ್ಯ, ಬಿಇಡಿ ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ದಳಪತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...