ಮೈಸೂರು | ಇ.ಡಿ ದುರ್ಬಳಕೆ ಖಂಡಿಸಿ ಕಾಂಗ್ರೆಸ್ ಪಂಜಿಡಿದು ಪ್ರತಿಭಟನೆ

Date:

ಇ.ಡಿ ದುರ್ಬಳಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ಟೌನ್ ಹಾಲ್ ಬಳಿಯ ಡಾ ಅಂಬೇಡ್ಕರ್ ಪುತ್ಥಳಿ ಮುಂಭಾಗ ಪಂಜಿಡಿದು ಪ್ರತಿಭಟನೆ ನಡೆಸಿದರು.

ದಲಿತ ಮಹಾಸಭಾ ಅಧ್ಯಕ್ಷ ರಾಜೇಶ್ ಮಾತನಾಡಿ, “ಕೇಂದ್ರ ಸರ್ಕಾರ ಸಿದ್ದರಾಮಯ್ಯ ಅವರನ್ನು ಹಣಿಯಲು ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರ ದುರ್ಬಳಕೆ ಮಾಡಿದೆ. ಇ.ಡಿ ಕೂಡಾ ಕೇಂದ್ರ ಸರ್ಕಾರದ ಕಗೊಂಬೆಯಾಗಿ ವರ್ತಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇ.ಡಿ ಅಧಿಕಾರಿಗಳು ಸಿದ್ದರಾಮಯ್ಯನವರ ವಿರುದ್ಧ ಇಸಿಐಆರ್ ದೂರು ದಾಖಲು ಮಾಡಿರುವುದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಷಡ್ಯಂತ್ರ ಹಾಗೂ ಸಿದ್ದರಾಮಯ್ಯನವರನ್ನು ವಾಮಮಾರ್ಗದಿಂದ ಸಿಎಂ ಸ್ಥಾನದಿಂದ ಕೆಳಗಿಳಿಸಲು ಮಾಡಿರುವ ಸಂಚು. ಈ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸಲು ಬಿಜೆಪಿ ಪಕ್ಷದಿಂದ ಕುತಂತ್ರ ನಡೆಯುತ್ತಿದೆ. ದೇಶದಲ್ಲಿ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸಲು, ಜಾರ್ಖಾಂಡ್, ದೆಹಲಿ, ಮಹಾರಾಷ್ಟ್ರಗಳಲ್ಲಿ ಜನತಂತ್ರ ಸರ್ಕಾರವನ್ನು ಅತಂತ್ರಗೊಳಿಸುವಲ್ಲಿ ನಿರಂತರ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಿಂದ ಕೆ ಶಿವರಾಮು ಮಾತನಾಡಿ, “ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಅತ್ಯಂತ ಜನಪ್ರಿಯ, ಅಂತಃಕರಣ ಉಳ್ಳಂತಹ, ಸಮಾಜವಾದಿ ಹಿನ್ನೆಲೆಯ ನಾಯಕರಾಗಿ, ಅಹಿಂದ ವರ್ಗಗಳ ಹೋರಾಟದ ನೇತೃತ್ವ ವಹಿಸಿದವರು. ಆದರೆ, ಕೇಂದ್ರ ಸರ್ಕಾರ ತನ್ನ ದುಷ್ಟ ನಡೆಯಿಂದ ಇ.ಡಿ, ಸಿಬಿಐ ತನಿಖೆಗೆ ಒಳಪಡಿಸಿ, ಹೇಗಾದರೂ ಸರಿ ಮಾನಸಿಕವಾಗಿ ಕುಗ್ಗಿಸಲು ಹುನ್ನಾರ ನಡೆಸಿದೆ” ಎಂದು ಕಿಡಿಕಾರಿದರು.

ಪ್ರಿವೆನ್ಷನ್‌ ಆಫ್ ಮನಿ ಲಾಂಡರಿಂಗ್‌ ಅಡಿಯಲ್ಲಿ ಈ ಪ್ರಕರಣ ಬರುವುದಿಲ್ಲ. ಸಿದ್ದರಾಮಯ್ಯರವರ ಪಾತ್ರ ಅಥವಾ ಯಾವುದೇ ಸಹಿಯುಳ್ಳ ಆದೇಶ ಇರುವುದಿಲ್ಲ. ಮುಡಾ ಪ್ರಕರಣದಲ್ಲಿ ಇವೆಲ್ಲವೂ ದುರುದ್ದೇಶಪೂರಿತ, ಶೋಷಿತ ಸಮುದಾಯದ ವ್ಯಕ್ತಿ ಸಿಎಂ ಸ್ಥಾನದಲ್ಲಿ ಮುಂದುವರೆಯಬಾರದೆಂದು ಪಿತೂರಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ಕಾಗಿಣಾ ನದಿಗೆ ಬಿದ್ದ ಕಾರು : ಚಾಲಕ ಸಾವು; ಇಬ್ಬರಿಗೆ ಗಾಯ

“ಇ.ಡಿ ಇಲಾಖೆ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದರೆ, ಇಡಿ ತನಿಖೆ ನಡೆಸಲು ಅವಕಾಶವಿರುತ್ತದೆ. ಆದರೆ ಭೂ ವಿಷಯಕ್ಕೆ ಸಂಬಂಧಿಸಿರುವುದು” ಎಂದರು.

ಲೋಕೇಶ್, ಯೋಗೇಶ್, ರವಿನಂದನ್, ಪ್ರಕಾಶ್, ರವಿ, ಸಿದ್ದರಾಜು, ಎಸ್ ಎ ರಹೀಂ, ಶಿವರುದ್ರ, ನಂಜಪ್ಪ, ರಾಮಣ್ಣ, ಮಹೇಶ್, ಭಾಸ್ಕರ್, ರಾಜಣ್ಣ, ಕೇಶವ, ಸುನಿಲ್, ನಾರಾಯಣ, ರವಿನಾಯಕ, ರಂಗಸ್ವಾಮಿ, ರಾಜಶೇಖರ್, ನರಸಿಂಹ ಮೂರ್ತಿ, ನಂಜುಂಡಸ್ವಾಮಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...