ಮೈಸೂರು | ಪರಿಸರ ಸಂರಕ್ಷಣೆ ಕುರಿತು ಪ್ರಜ್ಞಾವಂತ ಯುವಜನರು ಧ್ವನಿ ಎತ್ತಬೇಕಿದೆ: ನ್ಯಾ. ದಿನೇಶ್‌ ಬಿ ಜಿ

Date:

ಪ್ರಜ್ಞಾವಂತ ಯುವಜನತೆ ಪರಿಸರ ಸಂರಕ್ಷಣೆ ಬಗ್ಗೆ ಧ್ವನಿ ಎತ್ತಬೇಕಿದೆ. ಪರಿಸರ ಉಳಿಸುವುದು, ಬೆಳೆಸುವುದು ಯುವಜನತೆಯ ಕರ್ತವ್ಯ ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದಿನೇಶ್ ಬಿ ಜಿ ಹೇಳಿದರು.

ಎಐಡಿವೈಒ ಕ್ರಾಂತಿಕಾರಿ ಸಂಘಟನೆಯ 59ನೇ ಸಂಸ್ಥಾಪನಾ ದಿನದ ಅಂಗವಾಗಿ ಮೈಸೂರಿನ ಸಿಪಿಸಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ʼಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆʼ ವಿಷಯದ ಕುರಿತು ಮಾತನಾಡಿದರು.

ಎಐಡಿವೈಒ ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷ ಸುನಿಲ್ ಟಿ ಆರ್ ಮಾತನಾಡಿ, “ಪ್ರಸ್ತುತ ದಿನಗಳ ವಾತಾವರಣವು ಕಲುಷಿತವಾಗುತ್ತಿದೆ. ಹವಾಮಾನದ ವೈಪರೀತ್ಯದಿಂದ ಮಾನವ ಹಾಗೂ ಜೀವ ಸಂಕುಲದ ಮೇಲೆ ಭೀಕರ ದುಷ್ಪರಿಣಾಮಗಳು ಹೆಚ್ಚಾಗಿವೆ. ಹೆಚ್ಚೆಚ್ಚು ಮಾಲಿನ್ಯಕ್ಕೆ ಒಳಗಾಗುತ್ತಿರುವ ಈ ಜಗತ್ತನ್ನು ನೋಡುತ್ತಿದ್ದರೆ ಬೇಸರವಾಗುತ್ತದೆ” ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಅಧಿಕಾರಿ ಡಾ ದೊಡ್ಡಯ್ಯ ಮಾತನಾಡಿ, “ಪರಿಸರ ಹಾಳಾಗಲು ಯಾರು ಕಾರಣ? ನಮ್ಮೆಲ್ಲರ ಆಧುನಿಕ ಜೀವನದ ಶೈಲಿ, ಮರಗಿಡಗಳ ಮೇಲೆ ಗೌರವ, ಪ್ರೀತಿ ಬೆಳೆಸಿಕೊಳ್ಳದೆ ಇರುವುದರಿಂದ ನಮ್ಮ ನೈಸರ್ಗಿಕ ಪರಿಸರ ಅಷ್ಟೇ ಅಲ್ಲದೆ ಪ್ರಸ್ತುತ ರಾಜಕೀಯ, ಆರ್ಥಿಕ, ಸಾಂಸ್ಕೃತಿಕ ಕ್ಷೇತ್ರಗಳೂ ಕೂಡ ಮಲಿನವಾಗಿವೆ. ಇದರ ಬಗ್ಗೆ ಯುವಜನತೆ ಎಚ್ಚೆತ್ತು ಪರಿಸರದ ಧ್ವನಿಯಾಗಬೇಕು. ಸಮಾಜದ ಬದಲಾವಣೆಯ ಜತೆಗೆ ಪರಿಸರ ಉಳಿಸಿಕೊಳ್ಳಬೇಕು” ಎಂದರು.

ಮಧುಸೂದನ್ ಎಸ್ ಎಂ ಮಾತನಾಡಿ‌, “ಪರಿಸರದ ಮೇಲೆ ಚಂಡಮಾರುತ, ಪ್ರವಾಹ, ಬರದಂತಹ ವಿಕೋಪಗಳಿಗೆ ಬಂಡವಾಳ ಶಾಹಿಗಳ ಲಾಭಕೋರತನ ಮೂಲ ಕಾರಣ. ಅಕ್ರಮ ಗಣಿಗಾರಿಕೆ, ಪ್ರವಾಸೋದ್ಯಮ, ಅಭಿವೃದ್ಧಿ ಹೆಸರಿನಲ್ಲಿ ಅರಣ್ಯನಾಶ, ನೈಸರ್ಗಿಕ ವಿಕೋಪಕ್ಕೆ ಕಾರಣವಾಗಿದೆ. ಪರಿಸರ ವಿರೋಧಿ ಕಾರ್ಪೊರೇಟ್ ಕುಳಗಳ ವಿರುದ್ಧ ಯುವಜನತೆ ಸಂಘಟಿತರಾಗಿ ಹೋರಾಟ ಮಾಡಿ ಪರಿಸರ ಉಳಿಸಿಕೊಳ್ಳಬೇಕಿದೆ” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಂಗ್ರಹವಾದ ಹೆಚ್ಚುವರಿ ಹಾಲಿಗೆ ಸಬ್ಸಿಡಿ ಹಾಗೂ ಬಡಜನರಿಗೆ ರಿಯಾಯಿತಿ ದರದಲ್ಲಿ ನೀಡುವಂತೆ ಎಐಡಿಎಸ್‌ಒ ಆಗ್ರಹ

ಕಾರ್ಯಕ್ರಮದಲ್ಲಿ ಎಐಡಿವೈಒ ಸಂಘಟನೆಯ ಜಿಲ್ಲಾ ಜಂಟಿ ಕಾರ್ಯದರ್ಶಿ ನೀತುಶ್ರಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...