ಮೈಸೂರು | ಭಾರತವನ್ನು ತಿಳಿಯಲು ಸಂವಿಧಾನ ಓದಬೇಕು: ನ್ಯಾ. ನಾಗಮೋಹನ್ ದಾಸ್

Date:

ಪ್ರತಿ ಧರ್ಮಕ್ಕೂ ತನ್ನದೇ ಆದ ಧರ್ಮ ಗ್ರಂಥಗಳಿವೆ. ಹಿಂದೂಗಳಿಗೆ ಭಗವದ್ಗೀತೆ,ಮುಸಲ್ಮಾನರಿಗೆ ಕುರಾನ್,ಕ್ರೈಸ್ತರಿಗೆ ಬೈಬಲ್ ಆದರೆ ಭಾರತದ ಈ ಎಲ್ಲ ಧರ್ಮಗಳಿಗೆ ಇರುವುದೊಂದೇ ಗ್ರಂಥ ಅದುವೇ ಸಂವಿಧಾನ. ಭಾರತವನ್ನು ಅರಿತುಕೊಳ್ಳಲು ಸಂವಿಧಾನ ಓದಬೇಕು ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಆಯೋಜಿಸಿದ್ದ ‘ಸಂವಿಧಾನ ಮತ್ತು ಪ್ರಜಾಪ್ರಭುತ್ವ’ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಂವಿಧಾನ ಯಾವುದೇ ಭಾಷೆಯಲ್ಲಿ ಓದಿದರೂ ಸುಲಭವಾಗಿ ಅರ್ಥವಾಗುವಂತದ್ದಲ್ಲ. ಭಾರತವನ್ನು ಅರಿಯಬೇಕಾದರೆ, ಸಂವಿಧಾನ ಓದಲೇಬೇಕು. ಎಲ್ಲರೂ ಸಮುದಾಯ, ಬದುಕು, ಬವಣೆಗಳ ಬಗ್ಗೆ ತಿಳಿಯಬೇಕು. ಸಮಾಜದ ಬದ್ಧತೆ ಮೈಗೂಡಿಸಿಕೊಳ್ಳಬೇಕು. ಇದೆಲ್ಲವೂ ಸಾಧ್ಯವಾಗಬೇಕಾದರೆ, ಸಂವಿಧಾನ ಓದಬೇಕು” ಎಂದರು.

ಶಾಸಕ ದರ್ಶನ್ ಧ್ರುವ ನಾರಾಯಣ್ ಮಾತನಾಡಿ, “ನಾನು ಕಿರಿಯ ವಯಸ್ಸಿನಲ್ಲಿ ಶಾಸಕ ಆಗಿದ್ದೀನಿ ಅಂದ್ರೆ, ಅದಕ್ಕೆ ಸಂವಿಧಾನ ಕಾರಣ. ಸಂವಿಧಾನ ನಮಗೆ ಎಲ್ಲವನ್ನೂ ಕೊಟ್ಟಿದೆ. ಸಂವಿಧಾನದಿಂದ ನಮ್ಮೆಲ್ಲರ ಅಸ್ತಿತ್ವ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ತಂದೆ (ಧ್ರುವ ನಾರಾಯಣ್) ಸಂತೆಮರಳ್ಳಿ ಕ್ಷೇತ್ರದಲ್ಲಿ ಒಂದು ಮತದಿಂದ ಗೆದ್ದು ಸಂಸದರಾದರು. ಅದು ಕೂಡ ಸಂವಿಧಾನ ಕೊಟ್ಟಿದ್ದು. ಸಂವಿಧಾನ ನಮಗೆ ಬದುಕಲು, ಸಮಾಜದಲ್ಲಿ ಉನ್ನತವಾದ ಸ್ಥಾನಗಳಿಸಲು ಅವಕಾಶ ನೀಡಿದೆ” ಎಂದರು.

ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ರಾಜಕೀಯ ಪ್ರೇರಿತವಾಗಿ ಸೃಷ್ಟಿಯಾಗಿರುವುದು. ಸುಮಾರು 90 ದಿನಗಳೇ ಕಳೆಯುತ್ತಾ ಬಂದಿವೆ. ಆದರೆ, ಪ್ರಧಾನಿ ಇಂದಿಗೂ ತುಟಿ ಬಿಚ್ಚಿಲ್ಲ. ಹೆಣ್ಣಿನ ಬೆತ್ತಲೆ ಮೆರವಣಿಗೆ ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇಂತಹ ಕ್ರೌರ್ಯ ನಿಜಕ್ಕೂ ಹೇಯ ಕೃತ್ಯ” ಎಂದರು.

“ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ಜನಾಂಗೀಯ ದಳ್ಳುರಿಯಲ್ಲಿ ಸುಮಾರು 250 ಜನರು ಮಲಿಯಾಗಿದ್ದಾರೆ. ಹಿಂಸಾಚಾರವನ್ನು ಅಲ್ಲಿನ ಬಿಜೆಪಿ ಸರ್ಕಾರ ಸಮರ್ಥಿಸಿಕೊಳ್ಳುತ್ತಿಯೇ ಹೊರತು, ಗಲಭೆಯನ್ನು ತಡೆಯುತ್ತಿಲ್ಲ” ಎಂದು ಆರೋಪಿಸಿದರು.

“2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದರ ಮೂಲಕ ಪಾಠ ಕಲಿಸಬೇಕಿದೆ. ಕರ್ನಾಟಕದಲ್ಲಿ 25 ಮಂದಿ ಬಿಜೆಪಿ ಸಂಸದರನ್ನು ಸೋಲಿಸುವ ಮೂಲಕ ತಕ್ಕ ಉತ್ತರ ನೀಡಬೇಕು” ಎಂದರು.

ಕಾರ್ಯಕ್ರಮದಲ್ಲಿ ದಸಂಸ ನಾಯಕ ಎನ್‌ ವೆಂಕಟೇಶ್, ಬೆಟ್ಟಯ್ಯ ಕೋಟೆ, ಅಲಗೂಡು ಶಿವಕುಮಾರ್, ಬಿ.ಡಿ ಶಿವಬುದ್ದಿ, ಶಂಭುಲಿಂಗಸ್ವಾಮಿ, ಹೆಗ್ಗನುರು ನಿಂಗರಾಜು, ಮಂಜು ಶಂಕನಪುರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...