ಮೈಸೂರು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ: ಸಿಪಿಐಎಂ ಮನವಿ

Date:

ಮೈಸೂರು ಜಿಲ್ಲೆಯ ಹುಣಸೂರು ನಗರದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ, ಕಚೇರಿಗೆ ಬರುವವರಿಗೆ ಬಳಕೆಯಾಗುವ ರೀತಿಯಲ್ಲಿ ನಿತ್ಯ ಶುಚಿತ್ವ ಕಾಪಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷ ಹುಣಸೂರು ತಾಲೂಕು ಸಮಿತಿಯಿಂದ ಉಪ ವಿಭಾಗಧಿಕಾರಿ ವಿಜಯ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳಾದ “ಸ್ವಚ್ಚ ಬಾರತ, ನಿರ್ಮಲ ಕರ್ನಾಟಕ” ನೀತಿಗಳಿಗೆ ವಿರುದ್ಧವಾಗಿ ಸರ್ಕಾರಿ ಅಧಿಕಾರಿಗಳು ನಡೆದುಕೊಳ್ಳುತಿದ್ದು, ಸರ್ಕಾರದ ನಿಯಮಗಳನ್ನು ಕಚೇರಿಗಳಲ್ಲಿ ಪಾಲಿಸದಿರುವುದನ್ನು ಸಿಪಿಐಎಂ ಖಂಡಿಸಿದೆ.

“ಹುಣಸೂರು ಮಿನಿ ವಿಧಾನಸೌದದ ಕಟ್ಟಡದಲ್ಲಿ ತಹಶೀಲ್ದಾರ್ ಕಚೇರಿ ಹಾಗೂ ಉಪ ವಿಭಾಗಾಧಿಕಾರಿಗಳ ಕಚೇರಿ, ಉಪ ನೋಂದಣಾದಿಕಾರಿ ಕಚೇರಿ, ಭೂಮಾಪನ ಕಚೇರಿ ಹಾಗೂ ಇತರೆ ಕಚೇರಿಗಳಿಗೆ ನಿತ್ಯವೂ ನೂರಾರು ಸಂಖ್ಯೆಯ ಜನ ಬರುತ್ತಾರೆ. ಆದರೆ ಇಲ್ಲಿನ ಶೌಚಲಯ ಜನರ ಬಳಕೆಗೆ ಯೋಗ್ಯವಾಗಿಲ್ಲ. ಶುಚಿತ್ವ ಇಲ್ಲವೇ ಇಲ್ಲ, ಸರಿಯಾದ ನಿರ್ವಹಣೆ ಇರದೆ ಗಬ್ಬು ನಾರುತ್ತಿವೆ. ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದರೂ ಯಾವುದೆ ಕ್ರಮ ಕೈಗೊಳ್ಳದಿರುವುದು ವಿಷಾದನೀಯ” ಎಂದು ಹುಣಸೂರು ಸಿಪಿಐಎಂ ತಾಲೂಕು ಕಾರ್ಯದರ್ಶಿ ಬೆಳ್ತೂರು ವೆಂಕಟೇಶ್ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಿಗಳಿಗೆ ಪ್ರತ್ಯೇಕ ಶೌಚಾಲಯಗಳಿರುವುದರಿಂದ, ಜನರಿಗೆ ಆಗುತ್ತಿರುವ ತೊಂದರೆ ಅರ್ಥವಾಗುತ್ತಿಲ್ಲ. ಗಂಡಸರು ಕಚೇರಿಯ ಅವರಣದಲ್ಲಿ ಮೂತ್ರ ವಿಷರ್ಜನೆ ಮಾಡುತ್ತಾರೆ. ಇದನ್ನು ಕಂಡೂ ಕಾಣದಂತೆ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸಿದ್ದಾರೆ. ಮಹಿಳೆಯರಿಗೆ ಆಗುತ್ತಿರುವ ತೊಂದರೆ ಅಧಿಕಾರಿಗಳಿಗೆ ಗೊತ್ತೇ ಆಗುತಿಲ್ಲ. ಸಾವಿರಾರು ಜನ ಬರುವ ತಾಲೂಕು ಕಚೇರಿಯಲ್ಲಿ ಶೌಚಾಲಯ, ಅಗತ್ಯ ವ್ಯವಸ್ಥೆಗಳು ಇಲ್ಲದಿರುವುದು ತಾಲೂಕು ಆಡಳಿತದ ವೈಫಲ್ಯತೆ ಎದ್ದು ಕಾಣುತ್ತಿದೆ” ಎಂದು ಸಿಪಿಐಎಂ ಪಕ್ಷದ ಕಲ್ಕುಣಿಕ ಬಸವರಾಜು ಆಕ್ರೋಶ ವ್ಯಕ್ತಪಡಿಸಿದರು.

“ಮಹಿಳೆಯರು ಶೌಚಾಲಯಕ್ಕೆ ಹೋಗಲು ಆಗುವುದಿಲ್ಲ. ಯಾರೇ ಆಗಲಿ ಶೌಚಾಲಯಕ್ಕೆ ಹೋಗದೆ ಇರಲು ಸಾಧ್ಯವೇ ಇಲ್ಲ. ವಯಸ್ಸಾದವರು, ಅರೋಗ್ಯ ಸರಿ ಇಲ್ಲದಿರುವವರೂ ಕೂಡಾ ಕಚೇರಿಗೆ ಬರುತ್ತಾರೆ. ತಾಲೂಕು ಕಚೇರಿಯಲ್ಲಿ ದಿನಗಟ್ಟಲೆ ಕಾಯಬೇಕು. ಏನಾದರೂ ಕೆಲಸ ಆಗಬೇಕು ಅಂದರೆ ಆಗ ಏನು ಮಾಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಣಸೂರು ಪಟ್ಟಣದ ಇತರೆ ಸರ್ಕಾರಿ ಕಚೇರಿಗಳ ಪರಿಸ್ಥಿತಿಯೂ ಕೂಡ ಇದೇ ರೀತಿ ಇದ್ದು ಅಧಿಕಾರಿಗಳು ಗಮನಹರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಗೆ ಮೈಸೂರಿನಲ್ಲಿ ಚಾಲನೆ

ಮಹದೇವ್ ತಮ್ಮಡಹಳ್ಳಿ, ಶಿವರಾಮು ಹೆಚ್ ಎಸ್ ಬನ್ನಿಕುಪ್ಪೆ, ಮಹದೇವ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...