ಮೈಸೂರು | ಮನುಸ್ಮೃತಿಯಿಂದಲೇ ಇಂದು ದ್ವೇಷ ಸಂಸ್ಕೃತಿ ಬೆಳೆದಿದೆ : ಚಿಂತಕ ರಂಜಾನ್ ದರ್ಗಾ

Date:

ಮೈಸೂರು ವಿಶ್ವವಿದ್ಯಾನಿಲಯ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ, ಸಂಶೋಧನೆ ಅಧ್ಯಯನ ಹಾಗೂ ವಿಸ್ತರಣಾ ಕೇಂದ್ರದಲ್ಲಿ ನಡೆದ ಉಪನ್ಯಾಸ ಹಾಗೂ ಮಹಾಮನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಿಂತಕ ರಂಜಾನ್ ದರ್ಗಾ ‘ ಮನುಸ್ಮೃತಿಯಿಂದಲೇ ಇಂದು ದ್ವೇಷ ಸಂಸ್ಕೃತಿ ಬೆಳೆದಿದೆ ‘ ಎಂದರು.

” ಸಮಾಜದಲ್ಲಿ, ಜನಗಳ ಮನಸ್ಸಿನಲ್ಲಿ ಕ್ರೌರ್ಯ ಬಿತ್ತಿದ ಪುಸ್ತಕ ಅಂತಿದ್ದರೆ ಅದುವೇ ‘ಮನುಸ್ಮೃತಿ ‘. ಇಂತಹ ಪ್ರಾಮಾಣಿಕ ಪುಸ್ತಕ ಮತ್ತೊಂದು ಸಿಗಲು ಸಾಧ್ಯವಿಲ್ಲ. ಬಸವ ಧರ್ಮ ಬಯಲು ತತ್ವದಿಂದ ರೂಪಿತವಾದದ್ದು ಇದಕ್ಕೆ ಗಡಿರೇಖೆಗಳಿಲ್ಲ. ಹೀಗಾಗಿ ಒಂದು ಜಾತಿಗೆ, ಧರ್ಮಕ್ಕೆ ಸೀಮಿತವಾದುದಲ್ಲ, ಇಡೀ ವಿಶ್ವಕ್ಕೆ ಸಂಬಂದಿಸಿದೆ. ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ ಸಂಸ್ಕೃತಿಗಳ ವಿರುದ್ಧ ಸಾಂಸ್ಕೃತಿಕ ಸಂಘರ್ಷ ನಡೆದಿದೆ. ಭಾರತದಲ್ಲಿ ಎಲ್ಲರೂ ಮನುವಾದಿಗಳ ಉತ್ಪನ್ನಗಳೇ, ಎಲ್ಲೆಲ್ಲಿಯೂ ಜಾತಿ ವಾದಿಗಳಿದ್ದಾರೆ, ಯಾರೂ ಶುದ್ಧರಿಲ್ಲ. ಬ್ರಾಹ್ಮಣೀಕರಣಕ್ಕೆ ಒಳಪಟ್ಟಿದ್ದಾರೆ. ಬ್ರಾಹ್ಮಣರಲ್ಲಿ ಎಷ್ಟು ಜನ ಮನುವಾದದ ವಿರುದ್ಧ ನಿಲುವನ್ನು ತಾಳಿದ್ದಾರೆ? ದಲಿತರಲ್ಲಿ ಎಷ್ಟೋ ಜನ ಮನುವಾದಿಗಳಿದ್ದಾರೆ! ಒಳಗೊಂದು, ಹೊರಗೊಂದು ಅನ್ನುವಂತಿದೆ ಎಂದು ಬೇಸರ ವ್ಯಕ್ತಪಡಿಸಿದರು “.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎನ್ ಕೆ ಲೋಕನಾಥ್ ಮಾತನಾಡಿ ” ಮಾನಸ ಗಂಗೋತ್ರಿಯ ಆವರಣದಲ್ಲಿ ಸಮನ್ವಯ ಕಡಿಮೆಯಾಗುತ್ತಿದೆ. ಅನೂನ್ಯತೆ ಇಲ್ಲದಾಗಿದೆ. ಒಂದೊಂದು ಕಾರಣಗಳು ಅಂತರ ಸೃಷ್ಟಿಸುತ್ತಿವೆ.ವಿದ್ಯಾರ್ಥಿಗಳ ಭವಿಷ್ಯ ಕಟ್ಟಬೇಕಿದ್ದ
ವಾತಾವರಣ ಮಸುಕಾಗಿದೆ.ಒಂದೊಂದು ಅಧ್ಯಯನ ವಿಭಾಗದ ನಡುವೆಯೂ ಗೋಡೆಗಳು ನಿರ್ಮಾಣಗೊಂಡಿವೆ. ತಮ್ಮ ತಮ್ಮ ಕೇಂದ್ರಗಳಿಗೆ ಕಾಂಪೌಂಡ್ ನಿರ್ಮಿಸಲು ಪ್ರಾಧ್ಯಾಪಕರು ಗಲಾಟೆ ಮಾಡುತ್ತಿದ್ದಾರೆ. ಪಕ್ಕದ ವಿಭಾಗದವರು ಬಾರದಂತೆ ಬೇಲಿ ಹಾಕಲಾಗುತ್ತಿದೆ. ವಿವಿ ಯಾರ ಆಸ್ತಿ? ಇಂತಹ ಬೆಳವಣಿಗೆಗಳು ದುರದೃಷ್ಟಕರ, ಪ್ರಾಧ್ಯಾಪಕರು ಗಲಾಟೆ ಮಾಡಿದರೆ ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಬೆಳೆಸಲಾಗುತ್ತದೆಯೇ ” ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಬಳ್ಳೆ ವನ್ಯಜೀವಿ ವಲಯದಲ್ಲಿ ಮೃತ ಐಎಫ್ಎಸ್ ಅಧಿಕಾರಿ ಮಣಿಕಂಠನ್ ಪ್ರತಿಮೆ ಅನಾವರಣ

ಬಸವ ಪೀಠದ ಸಂದರ್ಶಕ ಪ್ರಾಧ್ಯಾಪಕ ಪ್ರೊ ಅರವಿಂದ ಮಾಲಗತ್ತಿ,ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕಿ ಪ್ರೊ ಎನ್ ಕೆ ಲೋಲಾಕ್ಷಿ, ಡಾ ಮೈಲಹಳ್ಳಿ ರೇವಣ್ಣ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...