ಮೈಸೂರು | ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದವರನ್ನು ಬಂಧಿಸಿ – ದೇವನೂರರ ನೇತೃತ್ವದಲ್ಲಿ ಪ್ರತಿಭಟನೆ

Date:

ಹಿರಿಯ ಮುತ್ಸದ್ದಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಒಡ್ಡಿರುವ ರೌಡಿ ಶೀಟರ್‌, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ನನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ.

ಮೈಸೂರಿನ ಟೌನ್‌ಹಾಲ್ ಬಳಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರ ನೇತೃತ್ವದಲ್ಲಿ ದಸಂಸ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ದೇವನೂರ ಮಹಾದೇವ, “ಕಳೆದೆರಡು ದಿನಗಳ ಹಿಂದೆ ನಾನೊಂದು ವಿಡಿಯೋ ನೋಡಿದೆ. ಅದರಲ್ಲಿ ಮಣಿಕಂಠ ರಾಥೋಡ್ ಎಂಬ ಬಿಜೆಪಿ ಅಭ್ಯರ್ಥಿ ರಿವಾಲ್ವಾರ್‌ ತಿರುಗಿಸುತ್ತಾ ಇದ್ದ. ಆತನೇ ಖರ್ಗೆ ಕುಟುಂಬಕ್ಕೆ ಕೊಲ್ಲುವ ಬೆದರಿಕೆಯ ಮಾತುಗಳನ್ನು ಘಂಟಾಘೋಷವಾಗಿ, ಯಾವುದೇ ಭಯವಿರದೆ ಹೇಳ್ತಾ ಇದ್ದಾನೆ. ಇದನ್ನ ನೋಡಿ ಶಾಕ್ ಆಯಿತು” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲ್ಲಿಕಾರ್ಜುನ ಖರ್ಗೆ ರಾಜ್ಯ, ದೇಶದಲ್ಲಿ ಮುತ್ಸದ್ದಿ ರಾಜಕಾರಣಿ. ಮುಂದೆ ಪ್ರಧಾನ ಮಂತ್ರಿ ಆಗಲು ಅರ್ಹತೆ ಇರುವಂತ ಹಿರಿಯ ರಾಜಕಾರಣಿ. ಅಂತಹ ಕುಟುಂಬವನ್ನು ಕೊಲ್ಲುವುದಾಗಿ ಹೇಳ್ತಾನೆ. ನಮ್ಮಲ್ಲಿ ಪೊಲೀಸ್ ವ್ಯವಸ್ಥೆ ಇದಿಯಾ” ಎಂದು ಪ್ರಶ್ನಿಸಿದರು.

“ಪೊಲೀಸ್ ವ್ಯವಸ್ಥೆ ಇರುವುದೇ ಆಗಿದ್ದರೆ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು (ಸುಮೊಟೊ) ಸಾಮಾಜಿಕ ಬಾಹಿರ ಹೇಳಿಕೆ ಕೊಟ್ಟಿರುವ ಆರೋಪಿಯನ್ನು ಬಂಧಿಸಬೇಕಿತ್ತು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡೆ ಅಪಾಯಕಾರಿಯಾಗಿದ್ದು, ಸಮಾಜಕ್ಕೆ ಕಂಟಕವಾಗಿದೆ” ಎಂದು ಆರೋಪಿಸಿದರು.

“ಕೊಲೆ ಬೆದರಿಕೆ ಒಡ್ಡಿರುವ ವ್ಯಕ್ತಿ ಸಾಮಾನ್ಯನೇ, ವಯಸ್ಸಿಗಿಂತ ಕ್ರಿಮಿನಲ್ ಪ್ರಕರಣಗಳ ಪಟ್ಟಿಯೇ ದೊಡ್ಡದಿದೆ. ಆತನ ವಯಸ್ಸಿಗೂ ಮೀರಿದ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಈತನ ಮೇಲೆ ಹಲವು ಕ್ರಿಮಿನಲ್ ಕೇಸ್‌ಗಳಿವೆ. ಅಲ್ಲದೆ ಈತ ಗಡಿಪಾರು ಕೂಡ ಆಗಿರುವ ವ್ಯಕ್ತಿ. ಇಂಥವನ ರಕ್ಷಣೆಗೆ ಈ ಸರ್ಕಾರ ನಿಂತಿದ್ದು, ಚುನಾವಣೆಯಲ್ಲಿ ಟಿಕೆಟ್ ನೀಡಿದೆ. ನಿಜಕ್ಕೂ ನಾಚಿಕೆಗೇಡಿನ ಸಂಗತಿ” ಎಂದು ವಿಷಾದಿಸಿದರು.

“ಆಡಳಿತ ಸರ್ಕಾರದ ಮುಖ್ಯಮಂತ್ರಿ, ‘ಹೆಚ್ಚಿನ ತನಿಖೆ ಆಗ್ತಾ ಇದೆ. ತನಿಖೆ ಮಾಡಿಸ್ತಾ ಇದ್ದೀವಿ’ ಅಂತ ಹೇಳ್ತಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಇದೇ ವ್ಯಕ್ತಿ ಕೊಲೆ ಬೆದರಿಕೆ ಹಾಕಿರುವ ಸಂಜ್ಞಾಪೂರ್ವಕ ಹೇಳಿಕೆ ಇರುವಾಗಲೂ ಅದರಲ್ಲೂ ಮಾರಕಾಸ್ತ್ರ (ರಿವಾಲ್ವರ್) ಹಿಡಿದು ರಾಜಾರೋಷವಾಗಿ ಖರ್ಗೆ ಕುಟುಂಬ ಸಫಾ (ಕೊಲೆ) ಮಾಡುವುದಾಗಿ ಹೇಳಿದ್ದರೂ, ಇನ್ನೂ ತನಿಖೆ ನಡೆಸಬೇಕೆ” ಎಂದು ಪ್ರಶ್ನಿಸಿದರು.

“ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಿ ಅಭ್ಯರ್ಥಿ ಮಾಡಿ ಇಂತಹ ಕ್ರಿಮಿನಲ್‌ಗಳನ್ನು ಪೋಷಣೆ ಮಾಡುತ್ತಿದೆ. ಒಂದು ವೇಳೆ ಮೈ ಮರೆತು ಇದೇ ಕೆಟ್ಟ ಸರ್ಕಾರ ಆಧಿಕಾರಕ್ಕೆ ಬಂದರೆ ಕ್ರಿಮಿನಲ್‌ಗಳು, ಅಪರಾಧ ಹಿನ್ನಲೆಯವರೇ ಸಂಪುಟದಲ್ಲಿ ಇರುತ್ತಾರೆ. ಇಂಥವರಿಂದ ಯಾವ ಆಡಳಿತ ನಿರೀಕ್ಷೆ ಮಾಡಲು ಸಾಧ್ಯ. ಪೊಲೀಸ್ ವ್ಯವಸ್ಥೆಗೆ ಏನಾಗಿದೆ. ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಹಿರಿಯ ಪತ್ರಕರ್ತ ಇಂದೂಧರ್ ಹೊನ್ನಾಪುರ ಮಾತನಾಡಿ, “ಸಮಾಜದಲ್ಲಿ ಬಹಿರಂಗವಾಗಿ ದಲಿತ ಸಮುದಾಯದ ಪ್ರಬಲ ಮುಖಂಡ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರ ಕುಟುಂಬವನ್ನು ಕೊಲೆ ಮಾಡುವ ಧಮ್ಕಿ ಹಾಕಿ, ರಿವಾಲ್ವಾರ್ ತಿರುಗಿಸಿ ಹೇಳಿಕೆ ಕೊಟ್ಟರೂ, ಈವರೆಗೆ ಯಾವ ಕ್ರಮ ಕೈಗೊಂಡಿದ್ದೀರಿ. ಚುನಾವಣೆ ಅಭ್ಯರ್ಥಿ ನೀತಿ ಸಂಹಿತೆ ಜಾರಿ ಇರುವಾಗ ಮಾರಕಾಸ್ತ್ರ ಬಳಸಿ ಹೇಳಿಕೆ ಕೊಟ್ಟಿದ್ದರೂ ಕೂಡ ಪೊಲೀಸ್ ಇಲಾಖೆ, ಸರ್ಕಾರ ಏನು ಮಾಡುತ್ತಿದೆ. ಯಾರಾದರೂ ಸಾಮಾನ್ಯ ನಾಗರಿಕ ಮಾಡಿದ್ದರೆ ಸುಮ್ಮನೆ ಬಿಡುತ್ತಿದ್ದರಾ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಸಂಸ ಹಿರಿಯ ಮುಖಂಡ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳನ್ನು ಬಿಜೆಪಿ ಪೋಷಿಸಿ ಪಾಲನೆ ಮಾಡುತ್ತಿದೆ. ಕ್ರಿಮಿನಲ್ ವ್ಯಕ್ತಿ ಚಿಕ್ಕ ವಯಸ್ಸಿನಲ್ಲಿಯೇ ರೌಡಿ ಶೀಟರ್ ಆಗಿದ್ದು, ವಯಸ್ಸಿಗೂ ಮೀರಿ ಅಪರಾಧ ಎಸಗಿ, ಗಡಿಪಾರು ಆಗಿದ್ದರೂ ಬಿಜೆಪಿ ಚುನಾವಣೆಗೆ ಅಭ್ಯರ್ಥಿ ಮಾಡಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ: ದೇವನೂರ ಮಹಾದೇವ

ಗಡಿಪಾರಾಗಿದ್ದ ವ್ಯಕ್ತಿ ಖರ್ಗೆ ಕುಟುಂಬವನ್ನು ಕೊಲ್ಲುವ ಬೆದರಿಕೆ ಹಾಕ್ತಾನೆ. ಇಂತಹ ವ್ಯಕ್ತಿಯನ್ನು ಬೆಳೆಸುತ್ತಿರುವ ಬಿಜೆಪಿ ಯಾವ ನೈತಿಕತೆ ಹೊಂದಿದೆ. ಮುಖ್ಯಮಂತ್ರಿ ಆಗಲಿ, ಪೊಲೀಸ್ ಆಗಲಿ ಕರ್ತವ್ಯ ಮರೆತು ಆರೋಪಿಯ ರಕ್ಷಣೆಗೆ ನಿಂತಿರುವುದು ಎಷ್ಟು ಸರಿ. ಇದೇನಾ ಸಮಾಜಕ್ಕೆ ಕೊಡುವ ಗೌರವ” ಎಂದು ಕಿಡಿಕಾರಿದ್ದಾರೆ.

“ಒಬ್ಬ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದರೂ ಈವರೆಗೆ ಬಂಧಿಸಿಲ್ಲ. ಕಾನೂನು ಕ್ರಮ ಜರುಗಿಸಿಲ್ಲ. ನೀತಿಸಂಹಿತೆ ಇದಿಯೋ ಇಲ್ಲವೋ ತಿಳಿಯುತ್ತಿಲ್ಲ. ಕೊಲೆ ಬೆದರಿಕೆ ವಿಡಿಯೊ ಇದ್ದರೂ ಕೂಡ ಬೆನ್ನು ಮೂಳೆ ಇರದ ಪೊಲೀಸ್ ವ್ಯವಸ್ಥೆಗೆ ಏನೂ ಮಾಡಲಾಗುತ್ತಿಲ್ಲ” ಎಂದರು.

ಪ್ರತಿಭಟನೆಯಲ್ಲಿ ದಸಂಸ ಹಿರಿಯ ಮುಖಂಡ ವಿ ನಾಗರಾಜ್, ಹಿರಿಯ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಸುಮಿತ್ರ ಬಾಯಿ, ಹೊಸೂರು ಕುಮಾರ್, ಅಲಗೂಡು ಶಿವಕುಮಾರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...