ಮೈಸೂರು | ‘ ನಿರಂತರ ಸಹಜ ರಂಗ – 2025 ‘ಉದ್ಘಾಟಿಸಿದ ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯ

Date:

ಮೈಸೂರಿನ ಮಾನಸಗಂಗೋತ್ರಿಯ ಗಾಂಧಿ ಭವನದಲ್ಲಿ ಭಾನುವಾರ ಸಂಜೆ ‘ ನಿರಂತರ ಸಹಜ ರಂಗ – 2025 ‘ ರ ಉದ್ಘಾಟನೆಯನ್ನು ಹಿರಿಯ ರಂಗಕರ್ಮಿ ಸಿ. ಬಸವಲಿಂಗಯ್ಯನವರು ನೆರವೇರಿಸಿ ಮಾತನಾಡಿ “ರಂಗಭೂಮಿ ವರ್ತಮಾನದ ಕನ್ನಡಿಯಾಗಿ, ಸಮಾಜದಲ್ಲಿ ಪ್ರಶ್ನಿಸುವ ಮನೋಭಾವನೆಗಳನ್ನು ಬೆಳೆಸಬೇಕು” ಎಂದು ಅಭಿಪ್ರಾಯಪಟ್ಟರು.

ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎಸ್. ನರೇಂದ್ರ ಕುಮಾರ್ ಮಾತನಾಡಿ ‘ ಸಂವಿಧಾನದ ಮೌಲ್ಯಗಳು ಹಾಗೂ ಆಶಯಗಳನ್ನು ಜನಸಾಮಾನ್ಯರಿಗೂ ತಲುಪಿಸುವ ಕಾರ್ಯ ಹೆಚ್ಚಾಗಿ ನಡೆಯಬೇಕು. ಸಂವಿಧಾನ ಹೇಳಿದ ವೈವಿಧ್ಯತೆಯಲ್ಲಿ ಏಕತೆಯ ಸಂದೇಶವನ್ನು ಮುಂದಿನ ತಲೆಮಾರಿಗೆ ಬಿತ್ತಲಿ ‘ ಎಂದು ಹಾರೈಸಿದರು.

ಡಾ. ಎಂ. ಡಿ. ಸುದರ್ಶನ್ ಮಾತನಾಡಿ, ‘ ನಿರಂತರ ರಂಗಭೂಮಿಯ ನಿಜವಾದ ಉದ್ದೇಶಗಳಿಗೆ ತಕ್ಕಂತೆ ಚಟುವಟಿಕೆಗಳನ್ನು ನಡೆಸುತ್ತಿದೆ. ಸಮಾಜಕ್ಕೆ ಅಗತ್ಯವಾದ ವಿಚಾರಗಳನ್ನು ಧಾಟಿಸುತ್ತಿದೆ ‘ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಶಿಬಿರಾರ್ಥಿಗಳೇ ರೂಪಿಸಿದ ಅಭಿಮುಖ ಮುಖವಾಣಿಯನ್ನು ಅನಾವರಣಗೊಳಿಸಲಾಯಿತು. ನಿರಂತರದ ಪ್ರಸಾದ್ ಕುಂದೂರು ಅವರು ಶಿಬಿರದ ಇತಿಹಾಸ ಮತ್ತು ಆಶಯಗಳ ಕುರಿತು ಪ್ರಾಸ್ತಾವಿಕ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ನಿರಂತರದ ಅಶ್ವಿನಿ, ಯಶಸ್ವಿನಿ, ಪ್ರತಾಪ್ ಹುಣಸೂರು, ವಿವೇಕಾನಂದ ಆಶಯ ಗೀತೆಯನ್ನು ಹಾಡಿದರು.

ಆಗಸ್ಟ್. 15 ರಿಂದ ಆರಂಭವಾದ ಸಹಜ ರಂಗ ತರಬೇತಿ ಶಿಬಿರವು ಸೆಪ್ಟೆಂಬರ್ 18 ರಂದು ನಾಟಕ ಪ್ರದರ್ಶನದೊಂದಿಗೆ ಮುಕ್ತಾಯಗೊಳ್ಳಲಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 24 ರಂದು ಬನವಾಸಿ ತೋಟದಲ್ಲಿ ‘ ಪ್ರೂನಿಂಗ್ – ಗ್ರಾಫ್ಟಿಂಗ್ ‘ ಕುರಿತಾದ ಒಂದು ದಿನದ ಕಾರ್ಯಗಾರ

ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎಸ್. ನರೇಂದ್ರ ಕುಮಾರ್, ನಿವೃತ್ತ ಪ್ರಾಧ್ಯಾಪಕ ಅಪ್ಪಾಜಿ ಗೌಡ, ನಿವೃತ್ತ ಪ್ರಾಧ್ಯಾಪಕಿ ಮಂಗಳಾ, ಎಸ್‌ಬಿಐ ಲೀಡ್ ಬ್ಯಾಂಕ್ ಮ್ಯಾನೇಜರ್ ಶಿವಲಿಂಗಯ್ಯ, ನಿರಂತರದ ಪ್ರಸಾದ್ ಕುಂದೂರು, ಸುಗುಣ ಎಂ.ಎಂ, ಶ್ರೀನಿವಾಸ್ ಪಾಲಹಳ್ಳಿ, ಹರಿಪ್ರಸಾದ್ ಬೇಸಾಯಿ, ಶಿರಾ ಸೋಮಶೇಖರ್, ರಾಜೇಶ್ ಹೆಬ್ಬಾರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...