ಮೈಸೂರು | ಕೋಮುವಾದಿ ಶಕ್ತಿ ಸೋಲಿಸಿ, ಸಂವಿಧಾನ ಉಳಿಸಿ: ಸುಹೇಲ್ ಅಹಮದ್

Date:

ಸ್ವಾತಂತ್ರ್ಯ ಭಾರತದಲ್ಲಿ ಇಂದಿನ ಲೋಕಸಭಾ ಚುನಾವಣೆ ಐತಿಹಾಸಿಕವಾದದ್ದು ಯಾಕೆ ಅಂದ್ರೆ ಪ್ರಜಾಪ್ರಭುತ್ವ ದೇಶದಲ್ಲಿ ಸಂವಿಧಾನಕ್ಕೆ ಅಪಾಯ ಬಂದೊದಗಿದೆ ಎಂದು ಸುಹೇಲ್ ಅಹಮದ್ ಹೇಳಿದರು.

ಮೈಸೂರಿನ ಜಮಾ-ಅತೆ-ಇಸ್ಲಾಮೀ ಹಿಂದ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೇ ದಕ್ಕೆಯಾಗಿದೆ. ಅಂಬೇಡ್ಕರ್ ಅವರ ಆಶಯ ಮರೆತ ಸರ್ಕಾರದ ದುರಾಡಳಿತ, ಸರ್ವಾಧಿಕಾರ ಧೋರಣೆ ಜನರನ್ನು ಹೈರಾಣು ಮಾಡಿದೆ. ಜನರ ಬದುಕನ್ನು ಜರ್ಜರಿತವನ್ನಾಗಿಸಿದ ಈ ಸರ್ಕಾರವನ್ನು ಕಿತ್ತೊಗೆಯುವ ಕಾಲ ಬಂದಿದೆ ಎಂದರು.

ಮೈಸೂರು-ಕೊಡಗು ಸಂಯೋಜಕ ಮೋಹನ್ ಮೈಸೂರು ಮಾತನಾಡಿ, ನಮ್ಮೆಲ್ಲರ ಅಸ್ಮಿತೆ, ಸಂವಿಧಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾಡಿನ ಸಾಕ್ಷಿ ಪ್ರಜ್ಞೆ ದೇವನೂರು ಮಹಾದೇವ, ಸಾಹಿತಿಗಳಾದ ಪುರುಷೋತ್ತಮ್ ಬಿಳಿಮಲೆ, ರಹಮತ್ ತರೀಕೆರೆ, ದು. ಸರಸ್ವತಿ, ತಾರ ರಾವ್ ಸೇರಿದಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರೆಕೊಟ್ಟ ಆಂದೋಲನವೇ ʼಎದ್ದೇಳು ಕರ್ನಾಟಕʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎದ್ದೇಳು ಕರ್ನಾಟಕ ಸಂಘಟನೆ ಅಲ್ಲ ಅದೊಂದು ಆಂದೋಲನ. ಇದರ ಭಾಗವಾಗಿ ನಾಡಿನ ಹಲವು ಸಂಘಟನೆಗಳು ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಮುಸ್ಲಿಂ ಸಂಘಟನೆಗಳು ಸೇರಿ 103 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲಸ ಮಾಡಿ 75 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ನೇರ ಕಾರಣವಾಗಿದೆ ಎಂದರು.

ಇಂದಿಗೂ ಸಹ ರೈತ ವಿರೋಧಿ, ಜನ ವಿರೋಧಿ, ಸಂವಿಧಾನ ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ನಮ್ಮೆಲ್ಲರ ಅಸ್ಮಿತೆಗಾಗಿ ರಾಜ್ಯದ ಉದ್ದಗಲಕ್ಕೂ ಕೆಲಸ ಮಾಡುತ್ತಿದ್ದು ಕೋಮುವಾದಿ ಶಕ್ತಿಗಳನ್ನು ಮಣಿಸುವಲ್ಲಿ ಕೆಲಸ ಮಾಡುತ್ತಿದೆ ಎಂದರು.

ʼಕೋಮುವಾದಿ ಶಕ್ತಿಯನ್ನು ಸೋಲಿಸಿ,ಸಂವಿಧಾನ ಉಳಿಸಿ’ ಎದ್ದೇಳು ಕರ್ನಾಟಕದ ಆಶಯ. ಇದರ ನಿಟ್ಟಿನಲ್ಲಿ ಮೈಸೂರು-ಕೊಡಗು ಭಾಗವಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದು. ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಸಾಹಿತಿಗಳು, ಚಿಂತಕರು, ಸಂಘಟನೆಗಳ ನೆರವಿಂದ ಕೆಲಸ ಮಾಡಲಾಗುತ್ತಿದೆ ಎಂದರು.

ಜಮಾ-ಅತೆ-ಇಸ್ಲಾಮೀ ಹಿಂದ್ ಯುವ ಮುಖಂಡ ಅಸಾದುಲ್ಲಾ ಮಾತನಾಡಿ, ರಾಷ್ಟ್ರದಲ್ಲಿ ಹತ್ತು ವರ್ಷಗಳಿಂದ ಆಳ್ವಿಕೆ ಮಾಡುತ್ತಿರುವ ಬಿಜೆಪಿಯ ದುರಾಡಳಿತದಲ್ಲಿ ಜನ ನಲುಗಿದ್ದಾರೆ ಇಂತಹ ಕೋಮುವಾದಿ ಶಕ್ತಿಯನ್ನು ಸೋಲಿಸಲು ಎದ್ದೇಳು ಕರ್ನಾಟಕ ಅವಿರತವಾಗಿ ಸಂಘಟಿತವಾಗಿ ಕೆಲಸ ಮಾಡುತ್ತಿದೆ ಎಂದರು.

ದೇಶದಲ್ಲಿ ಬಿಜೆಪಿ ಯಾಕೆ ಸೋಲಿಸಬೇಕು ಅಂದ್ರೆ, ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕೊಟ್ಟಿದ್ದ ಭರವಸೆಯನ್ನು ಈಡೇರಿಸಲಿಲ್ಲ. ಅಧಿಕಾರಕ್ಕೆ ಬರುವ ಮುಂಚೆ ಪೆಟ್ರೋಲ್ ಬೆಲೆ ತಗ್ಗಿಸುವುದು, ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುವುದು, ಕಪ್ಪು ಹಣ ವಾಪಸ್ ತರುವುದು, ರೈತರ ಸಾಲ ಮನ್ನಾ ಮಾಡುವಂತಹ ಘೋಷಣೆ ಮಾಡಿ ಯಾವುದನ್ನು ಮಾಡದೆ ಜನರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನುಡಿದಂತೆ ನಡೆದ ಸರ್ಕಾರದ ಧೋರಣೆಯನ್ನು ಖಂಡಿಸಿ ಈ ಭಾರಿ ಕೋಮುವಾದಿ ಶಕ್ತಿಯನ್ನು ಮಣಿಸಬೇಕು ಬಿಜೆಪಿ ಸರ್ಕಾರ ಪ್ರೀತಿಯಿಂದ ಆಡಳಿತ ಮಾಡಿಲ್ಲ ದ್ವೇಷದ ರಾಜಕಾರಣ ಮಾಡಿದೆ. ಈ ಚುನಾವಣೆಯಲ್ಲಿ ಜನರು ತಕ್ಕ  ಪಾಠ ಕಲಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಮಾತ್ ಹಿರಿಯಖಂಡರಾದ ಖಲೀಲ್ ಉರ್ ರಹಮಾನ್ ವಸೀಂ, ಸ್ಥಾನಿಕ ಅಧ್ಯಕ್ಷರಾದ ಮೊಹಮ್ಮದ್ ಅಸ್ಲಾಂ, ಎದ್ದೇಳು ಕರ್ನಾಟಕ ತಂಡದ ಅಬ್ದುಲ್ ವಾಹಿದ್ ಹಾಗೂ ಅಬ್ದುಲ್ ರಹೀಮ್ ಅಫ್ತಾಬ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...