ಮೈಸೂರು | ‘ ಸರ್ಕಾರಿ ಭೂಮಿ ಒತ್ತುವರಿ ‘ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯ

Date:

ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಕಾಂಗ್ರೇಸ್ ಸಮಿತಿ ‘ ಬಿಡದಿ ಬಳಿಯ ಕೇತಗಾನ ಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿಯನ್ನು ಹೆಚ್ಡಿಕೆ ಕುಟುಂಬದವರು ಒತ್ತುವರಿ ಮಾಡಿರುವ ಆರೋಪದ ಹಿನ್ನಲೆಯಲ್ಲಿ ಸರ್ವೇ ನಡೆಯುತ್ತಿದ್ದು,ಯಾವುದೇ ಒತ್ತಡ ಬೀರದಂತೆ, ಪಾರದರ್ಶಕತೆಯಿಂದ ನಡೆಯಲು ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದೆ.

ಮೈಸೂರು ನಗರ ಕಾಂಗ್ರೆಸ್ ವಕ್ತಾರ ಎಸ್ ರಾಜೇಶ್ ಮಾತನಾಡಿ ” ಹೆಚ್ ಡಿ ಕುಮಾರ ಸ್ವಾಮಿಯವರ 45 ಎಕರೆ ಜಮೀನನ್ನು ಕಾಂಗ್ರೆಸ್ ಸರ್ಕಾರ ಲಪಟಾಯಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ಸರ್ವೆ ನಡೆಸುತ್ತಿರುವುದು ತಮ್ಮದೇ ಕುಟುಂಬದ ಸದಸ್ಯರಾದ ಅನಸೂಯ ಹಾಗೂ ಸಂಭಂದಿ ಡಿ ಸಿ ತಮ್ಮಣ್ಣ ಕೇತಗಾನ ಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಹಾಗೂ ಗೋಮಾಳವನ್ನು ಕಬಳಿಸಿದ್ದಾರೆ ಎಂದು ಉಚ್ಚ ನ್ಯಾಯಾಲಯದಲ್ಲಿ ಸಮಾಜ ಪರಿವರ್ತನಾ ಸಂಘಟನೆಯಿಂದ ದಾವೆ ಹೂಡಲಾಗಿದೆ.ಅದರ ಅನ್ವಯ ಘನ ನ್ಯಾಯಾಲಯ ಆದೇಶದಂತೆ ಕೇತಗಾನ ಹಳ್ಳಿಯಲ್ಲಿ ಬರುವ 150 ಕ್ಕೂ ಹೆಚ್ಚು ಕುಟುಂಬಗಳ ಜಮೀನನ್ನು ಸರ್ವೆ ನಡೆಸಲು ಅಧಿಕಾರಿಗಳನ್ನು ನೇಮಕ ಮಾಡಿದೆ ಹೊರತು ಕಾಂಗ್ರೆಸ್ ಸರ್ಕಾರ ನಿಮ್ಮ ಜಮೀನನ್ನು ಕಬಳಿಸಲು ಪ್ರಯತ್ನಿಸಿಲ್ಲ, ಇಂತಹ ಆರೋಪ ಸತ್ಯಕ್ಕೆ ದೂರವಾದದ್ದು “ಎಂದರು.

ಅರ್ಜಿಯ ಅನ್ವಯ ಘನ ನ್ಯಾಯಾಲಯ ಕಂದಾಯ ಅಧಿಕಾರಿಗಳಿಗೆ ಛೀಮಾರಿ ಹಾಕಿ, ಪಾರದರ್ಶಕವಾಗಿ,ಪ್ರಾಮಾಣಿಕವಾಗಿ ತನಿಖೆ ನಡೆಸಿ,ವರದಿ ನೀಡುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ವೆ ಕಾರ್ಯಕ್ಕೆ ಕುಮಾರ ಸ್ವಾಮಿಯವರು ಅಧಿಕಾರಿಗಳಿಗೆ ಧಮ್ಕಿ ಹಾಕಿ, ಬೆದರಿಕೆ ಒಡ್ಡಿ, ತನಿಖೆಗೆ ಅಡ್ಡಿ ಪಡಿಸುತ್ತಿರುವುದು ಘನ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವಂತಿದೆ. ಭೂ ಕಂದಾಯಾಧಿಕಾರಿಗಳು ಸುಮಾರು 150 ಕ್ಕೂ ಹೆಚ್ಚು ಕುಟುಂಬಗಳ ಜಮೀನುಗಳ ಸರ್ವೆ ಕಾರ್ಯ ನಡೆಸುತ್ತಿದ್ದಾರೆ. ಕೇವಲ ಕುಮಾರ ಸ್ವಾಮಿಯವರ ಜಮೀನು ಮಾತ್ರ ಸರ್ವೆ ನಡೆಸುತ್ತಿಲ್ಲ ಎಂಬುದು ಮನಗಾಣಬೇಕಾಗಿದೆ.

ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ‘ ಸಂಡೂರಿನ ಎನ್ ಈ ಬಿ ರೇಂಜ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ನ್ಯಾಯಾಲಯದಿಂದ ತಡೆಯಾಜ್ಞೆ ಇದ್ದರು, ಗಣಿ ಅಧಿಕಾರಿಗಳು ಅನುಮತಿಗೆ ವಿರೋಧ ವ್ಯಕ್ತಪಡಿಸಿದ್ದರೂ ಕೂಡಾ 450 ಎಕರೆ ಜಮೀನನ್ನು ಗಣಿಗಾರಿಕೆ ನಡೆಸಲು ತರಾತುರಿಯಲ್ಲಿ ಸಹಿ ಮಾಡಿದ್ದೀರಿ ವಿನಯ್ ಘೋಯಲ್ ಎಂಬ ವ್ಯಕ್ತಿಗೆ. ಈ ಸಂಭಂದ ತಮ್ಮ ವಿರುದ್ಧ ಘನ ನ್ಯಾಯಾಲಯದಲ್ಲಿ ದೂರು ದಾಖಲಾಗಿರುವುದು ಮರೆತಂತಿದೆ ‘ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಹಲಗೆ ಒಡೇರಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹಲವಾರು ಭೂ ಹಗರಣದಲ್ಲಿ ನೀವು ಭಾಗಿಯಾಗಿರುವುದು ಕರ್ನಾಟಕದ ಜನತೆಗೆ ತಿಳಿದಿದೆ. ಹೀಗಾಗಿ ಕೇತಗಾನ ಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಸರ್ವೆ ಕಾರ್ಯ ನಿಷ್ಪಕ್ಷಪಾತ ತನಿಖೆ ನಡೆಯಲು ತಾವು ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮೈಸೂರು ನಗರ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬೆಟ್ಟಿಂಗ್‌ ದಂಧೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಶ್ರೀನಿವಾಸ್, ಕೇಶವ, ಓಂಕಾರ್ ರವಿ, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಎಸ್ ಎ ರಹೀಮ್, ಶ್ರೀನಿವಾಸ್, ಸೈಯ್ಯದ್ ಫಾರೂಕ್ ಇನ್ನಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...