ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

Date:

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ.

ಆರೋಪಿ ಅಭಿಷೇಕ್​ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಹುಣಸೂರು ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಿಸ್ಬಾ ಸಾಮಿಲ್‌ನಲ್ಲಿದ್ದ ಇಬ್ಬರು ಕಾವಲುಗಾರರಾದ ವೆಂಕಟೇಶ (75), ಷಣ್ಮುಗ (65) ಎಂಬುವರ ಹತ್ಯೆ ಮೂರು ದಿನಗಳ ಹಿಂದೆ ನಡೆದಿತ್ತು. ಇವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಈಗ ಪೊಲೀಸರು ಬೇಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆ ಆರೋಪಿ ಅಭಿಷೇಕ್ ಸುಲಿಗೆ,​ ದರೋಡೆ, ಕಳ್ಳತನ, ವಸೂಲಿಯನ್ನೇ ಕಾಯಕ ಮಾಡಿಕೊಂಡಿದ್ದ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಅವನಿಗೆ ಶೋಕಿಗಾಗಿ ಹಣ ಬೇಕಿತ್ತು. ನ್ಯಾಯವಾಗಿ ದುಡಿಯುವುದು ಗೊತ್ತಿಲ್ಲದ ಈತ ತನ್ನ ಸಹಚರರೊಂದಿಗೆ ಸೇರಿ ಕಳ್ಳತನದ ಪ್ಲ್ಯಾನ್ ಹಾಕಿದ್ದ.

ಇಬ್ಬರು ವಾಚ್‌ಮ್ಯಾನ್​ಗಳಿದ್ದ ಸಾಮಿಲ್​​ಗೆ ನುಗ್ಗಿ ಅವರಿಬ್ಬರನ್ನೂ ಬೆದರಿಸಿ ಹಣ ಕೊಡುವಂತೆ ಹೇಳಿದ್ದಾರೆ. ಇಬ್ಬರ ಜೇಬನ್ನೂ ಹುಡುಕಿದಾಗ ಸಿಕ್ಕಿದ್ದು 485 ರೂಪಾಯಿ. ಇದರಿಂದ ಕೋಪಗೊಂಡ ಅಭಿಷೇಕ್ ಮತ್ತು ಸಹಚರರು ಕಾವಲುಗಾರರನ್ನು ಕೊಂದು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಈ ಮರದ ಮಿಲ್​ಗೆ ನಿಜವಾದ ಕಾವಲುಗಾರ ವೆಂಕಟೇಶ್​ ಆಗಿದ್ದ. ಷಣ್ಮುಗ ಬುದ್ಧಿಮಾಂದ್ಯನಾಗಿದ್ದು, ಸದಾ ವೆಂಕಟೇಶ್ ಜತೆಗೇ ಇರುತ್ತಿದ್ದ. ಅವನನ್ನೂ ವಾಚ್​ಮ್ಯಾನ್​ ಎಂದೇ ಪರಿಗಣಿಸಲಾಗಿತ್ತು. ಇವರಿಬ್ಬರೂ ಹತ್ಯೆಯಾಗಿದ್ದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಆರೋಪಿ ಅಭಿಷೇಕ್​​ನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನಿಬ್ಬರು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...