ಮೈಸೂರು | ಆಗಸ್ಟ್. 2 ರಂದು ಕೆ ಆರ್ ಎಸ್ ಪಕ್ಷದಿಂದ ‘ ಮಾದಕ ದ್ರವ್ಯ ಮುಕ್ತ ನಗರ ‘ ಜಾಥಾ

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಎಸ್. ನಾಗೇಂದ್ರ ಮಾತನಾಡಿ ‘ ಆಗಸ್ಟ್. 2 ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಬಸವೇಶ್ವರ ವೃತ್ತದಿಂದ ನಗರ ಪೊಲೀಸ್ ಆಯುಕ್ತರ ಕಚೇರಿ ಮೂಲಕ, ಜಿಲ್ಲಾಧಿಕಾರಿ ಕಚೇರಿವರೆಗೆ ‘ ಮಾದಕ ದ್ರವ್ಯ ಮುಕ್ತ ಮೈಸೂರು ನಗರ ‘ ಜಾಥಾ ನಡೆಸಿ, ಮನವಿ ನೀಡುವುದಾಗಿ ಮಾಹಿತಿ ನೀಡಿದರು.

” ಮುಂಬೈ ನಗರದ ಸಾಕಾಸಕಿ ಠಾಣಾ ಪೊಲೀಸ್ ಅಧಿಕಾರಿಗಳು ದಿನಾಂಕ-24-04-2025 ರಂದು ಮುಂಬೈ ನಲ್ಲಿ ಮಾದಕ ದ್ರವ್ಯ ಸ್ವತ್ತು ಸಮೇತ ಡ್ರಗ್ಸ್ ಪೆಡ್ಲರ್ ಓರ್ವನನ್ನು ಬಂಧಿಸಿ FIR ದಾಖಲಿಸಿದ್ದರು. ಆರೋಪಿ ನೀಡಿದ ಮಾಹಿತಿ ಅನ್ವಯ ಮೈಸೂರಿನಿಂದ ಮಹರಾಷ್ಟ್ರಕ್ಕೆ ಡ್ರಗ್ಸ್ ರವಾನೆಯಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಿನಾಂಕ-26-07-2025 ರಂದು ಮಹಾರಾಷ್ಟ್ರ ಪೊಲೀಸರು ಮೈಸೂರು ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಘಟಕದ ಮೇಲೆ ದಾಳಿ ನಡೆಸಿ ಆರೋಪಿಗಳ ಸಹಿತ, ಸ್ವತ್ತನ್ನು ವಶಕ್ಕೆ ಪಡೆದಿರುತ್ತಾರೆ.

ಮೈಸೂರಿನ ಸದರಿ ಘಟಕದಿಂದ ದೇಶದ ಅನೇಕಾನೇಕ ರಾಜ್ಯಗಳಿಗೆ ಇಲ್ಲಿಂದಲೇ ಮಾದಕ ದ್ರವ್ಯ ಸಾಗಟವಾಗುತ್ತಿದೆ ಎಂಬುದನ್ನು ಖಚಿತಪಡಿಸಿದ್ದು, ಮಹಾರಾಷ್ಟ್ರದ ಮುಂಬೈ ಪೊಲೀಸರು ನೀಡಿರುವ ಮಾದಕ ದ್ರವ್ಯ ವಸ್ತುಗಳ ತೂಕ ಮತ್ತು ಅಂದಾಜು ವಿವರಗಳು, ಮೈಸೂರು ನಗರ ಪೊಲೀಸ್ ಆಯುಕ್ತರು ಹೇಳುವ ಅಂದಾಜು ವಿವರ, ತೂಕಕ್ಕೂ ವ್ಯತ್ಯಾಸ ಇರುವುದು ಹಾಗೂ ದಿನಾಂಕ-26-7-2025 ರಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರ ಆದೇಶ ಅನ್ವಯ ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅವರನ್ನೇ ದೂರುದಾರನಾಗಿ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ ” ಎಂದು ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ರವಿಕುಮಾರ್ ಮಾತನಾಡಿ ” ರಾಜ್ಯ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ. ಅದಕ್ಕಾಗಿ, ಕೂಡಲೇ ಸದರಿ ಪ್ರಕರಣದಲ್ಲಿ ನರಸಿಂಹರಾಜ ಪೊಲೀಸ್ ಠಾಣಾಧಿಕಾರಿ ಲಕ್ಷ್ಮಿಕಾಂತ್ ತಳವಾರ್ ರವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು. ಮೈಸೂರು ನಗರ ಆಯುಕ್ತರು ಯಾರ ಒತ್ತಡಕ್ಕೆ ಮಣಿದರು ಎಂಬುದನ್ನು ಸಾರ್ವಜನಿಕವಾಗಿ ಮಾಹಿತಿ ಒದಗಿಸಬೇಕು ” ಎಂದು ಆಗ್ರಹಿಸಿದ್ದಾರೆ.

ಸದರಿ ಪ್ರಕರಣದಲ್ಲಿ ಮೈಸೂರು ನಗರ ಪೊಲೀಸ್ ಅಧಿಕಾರಿಗಳ ದ್ವಂದ್ವ ಹೇಳಿಕೆ ಮತ್ತು ಕರ್ತವ್ಯಲೋಪದ ಬಗ್ಗೆ ತಿಳಿಸುತ್ತೇವೆ. ಸದರಿ ಪ್ರಕರಣದಿಂದ ಮೈಸೂರು ನಗರದ ಘನತೆಗೆ ಧಕ್ಕೆಯಾಗಿದ್ದು, ರಾಷ್ಟ್ರ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ. ಆದ್ದರಿಂದ, ಸದರಿ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತು ಮಾಡಿ, ಸಾರ್ವಜನಿಕವಾಗಿ ಆದೇಶ ನೀಡಿ, ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಬಳಿಕ, ಮರು ದಿನವೇ ತನ್ನ ಪ್ರಭಾವ ಬಳಸಿ ಕರ್ತವ್ಯಕ್ಕೆ ಹಾಜರಾಗಿರುವುದು ಅಧಿಕಾರಿಯ ಹಿನ್ನಲೆ ಬಗ್ಗೆ ಬಹಳಷ್ಟು ಅನುಮಾನ ಕಾಡುತ್ತಿದೆ.

ಮಾದಕ ದ್ರವ್ಯ ತಯಾರಿಕಾ ಘಟಕ ತನ್ನ ಠಾಣಾ ವ್ಯಾಪ್ತಿಯಲ್ಲಿ, ಅದರಲ್ಲೂ ಹೊರ ವರ್ತುಲ ರಸ್ತೆಯ ಬದಿಯಲ್ಲೆ ಇದ್ದರು ಗಮನಕ್ಕೆ ಬಾರದಂತೆ ಇರುವುದರ ಬಗ್ಗೆ ಅನುಮಾನವಿರುವುದರಿಂದ ತನಿಖೆಯಿಂದ ತಿಳಿಯಬೇಕಿದೆ. ಈತನಿಗೆ ಸಹಕಾರ ನೀಡುತ್ತಿರುವವರು ಯಾರು? ಎಲ್ಲವನ್ನೂ ಬಹಿರಂಗ ಪಡಿಸಬೇಕಿದೆ. ಮಾದಕ ವಸ್ತು ಕಳ್ಳಸಾಗಣೆ ಮತ್ತು ದುರುಪಯೋಗದ ವಿರುದ್ಧ ಭಾರತದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿ ಬಿ) ಗೆ ಅಧಿಕೃತವಾಗಿ ದೂರನ್ನು ದಾಖಲಿಸುತ್ತಿದ್ದೇವೆ.

ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ ಸರಬರಾಜನ್ನು ತೊಡೆದು ಹಾಕುವ ಮೂಲಕ ಸಮಾಜದ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಲು ದೂರನ್ನು ದಾಖಲಿಸುತ್ತಿದ್ದೇವೆ. ಈ ಕೃತ್ಯವೂ ದೇಶದ ಅನೇಕ ರಾಜ್ಯಗಳ ನಡುವೆ ಸಂಭಂದ ಏರ್ಪಟ್ಟಿರುವುದರಿಂದ, ದೇಶದ ಭದ್ರತೆಗೆ ಅಪಾಯಕಾರಿ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಡಲು ಕಾರಣವಾಗಿರುವುದರಿಂದ, ಕೂಡಲೇ ಈ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ವಹಿಸಬೇಕು, ಸದರಿ ಕಳ್ಳ ಸಾಗಾಣಿಕೆ ವ್ಯವಹಾರದಲ್ಲಿ ₹380 ಕೋಟಿ ರೂಪಾಯಿ ವಹಿವಾಟು ನಡೆದಿರುವುದರಿಂದ ಜಾರಿ ನಿರ್ದೇಶನಾಲಯ (ಇಡಿ) ತಕ್ಷಣವೇ ಮದ್ಯ ಪ್ರವೇಶಿಸಬೇಕೆಂದು ದೂರಿನಲ್ಲಿ
ವಿವರಿಸಿರುವುದಾಗಿ ಹೇಳಿದರು.

ನಾಳೆ ಮೈಸೂರು ನಗರದಲ್ಲಿ ಮಾದಕ ದ್ರವ್ಯ ಮುಕ್ತ ನಗರಕ್ಕಾಗಿ ಜಾಗೃತಿ ಜಾಥಾವನ್ನು ಮೈಸೂರು ಜಿಲ್ಲಾ ಘಟಕದ ಕೆಆರ್‌ಎಸ್ ಪಕ್ಷದ ನೂರಾರು ಕಾರ್ಯಕರ್ತರು ಜಾಥಾ ಮೂಲಕ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಕರ್ತವ್ಯಲೋಪ; ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅಮಾನತ್ತು

ರಾಜ್ಯ ಎಸ್ಸಿ, ಎಸ್ಟಿ ಘಟಕದ ಉಪಾಧ್ಯಕ್ಷರಾದ ಅಕ್ಕ ಮಹಾದೇವಮ್ಮ, ಕಾರ್ಯದರ್ಶಿ ವೇಣುಗೋಪಾಲ್, ನಾಗರಾಜು, ರವಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...