ಮೈಸೂರು ದಸರಾ | ಹೆಚ್ಚುವರಿ ಜನದಟ್ಟಣೆ ನಿವಾರಣೆಗಾಗಿ ಮೈಸೂರು, ಧಾರವಾಡ ಹಾಗೂ ಬಿಜಾಪುರ ನಡುವೆ ವಿಶೇಷ ರೈಲುಗಳ ಓಡಾಟ

Date:

ದಸರಾ ಹಬ್ಬದ ಹಿನ್ನೆಲೆ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಧಾರವಾಡ ಹಾಗೂ ಮೈಸೂರು ಮತ್ತು ಬಿಜಾಪುರ ನಡುವೆ ದಸರಾ ವಿಶೇಷ ರೈಲು ಸೇವೆ ಒದಗಿಸಲು ನಿರ್ಧರಿಸಿದೆ.

(ರೈಲು ಸಂಖ್ಯೆ 06205) ಮೈಸೂರಿನಿಂದ ಧಾರವಾಡಕ್ಕೆ ಅಕ್ಟೋಬರ್ 22 ಮತ್ತು 24 ರಂದು ಎರಡು ಸಲ ಪ್ರಯಾಣವನ್ನು ಪ್ರಾರಂಭಿಸಿದೆ. ರೈಲು ಮೈಸೂರಿನಿಂದ ರಾತ್ರಿ 10:35ಕ್ಕೆ ಹೊರಟು, ಮರುದಿನ 8ಕ್ಕೆ ಧಾರವಾಡ ತಲುಪುತ್ತದೆ. ಮಾರ್ಗದಲ್ಲಿ ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಅರಸೀಕೆರೆ, ಕಡೂರು, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಬ್ಯಾಡಗಿ, ಹಾವೇರಿ ಹಾಗೂ ಹುಬ್ಬಳ್ಳಿಯಲ್ಲಿ ನಿಲುಗಡೆ ಹೊಂದಲಿದೆ.

(ರೈಲು ನಂ 06206) ಧಾರವಾಡದಿಂದ ಮೈಸೂರಿಗೆ ಪ್ರಯಾಣವನ್ನು ಎರಡು ಸಲ, ಅಂದರೆ, ಅಕ್ಟೋಬರ್ 23 ಮತ್ತು 25 ರಂದು ಪ್ರಾರಂಭಿಸುತ್ತದೆ. ರೈಲು ಧಾರವಾಡದಿಂದ ಬೆಳಗ್ಗೆ 11:15 ಗಂಟೆಗೆ ಹೊರಟು ಅದೇ ದಿನ 9:30 ಗಂಟೆಗೆ ಮೈಸೂರು ತಲುಪುತ್ತದೆ. ರೈಲು ಮಾರ್ಗದಲ್ಲಿ ಹುಬ್ಬಳ್ಳಿ, ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಕಡೂರು, ಅರಸೀಕೆರೆ, ಹಾಸನ, ಹೊಳೆನರಸೀಪುರ ಮತ್ತು ಕೃಷ್ಣರಾಜನಗರದಲ್ಲಿ ನಿಲುಗಡೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

(ರೈಲು ಸಂಖ್ಯೆ 06205 ಮತ್ತು 06206) ಒಂದು ಎರಡನೆಯ ದರ್ಜೆ ಎಸಿ, ಮೂರು ಮೂರನೆಯ ದರ್ಜೆ ಎಸಿ, ಎಂಟು ಸ್ಲೀಪರ್ ದರ್ಜೆ ಮತ್ತು ನಾಲ್ಕು ದ್ವಿತೀಯ ದರ್ಜೆ ಆಸನದ ಕೋಚ್‌ಗಳ ಸಂಯೋಜನೆಯನ್ನು ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ: ಎಎಪಿ ಆರೋಪ

(ರೈಲು ನಂ 06203) ಅಕ್ಟೋಬರ್ 20ರಂದು ಮೈಸೂರಿನಿಂದ ಬಿಜಾಪುರಕ್ಕೆ ಒಂದು ಬಾರಿಯ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಅದು ಕೆಎಸ್‌ಆರ್ ಬೆಂಗಳೂರು ನಿಲ್ದಾಣದ ಮೂಲಕ ಹಾದು ಹೋಗುತ್ತದೆ. ರೈಲು ಮೈಸೂರಿನಿಂದ 5:30 ಗಂಟೆಗೆ ಹೊರಟು ಮರುದಿನ 10ಗಂಟೆಗೆ ಬಿಜಾಪುರ ತಲುಪಲಿದೆ. ರೈಲಿಗೆ ಮಾರ್ಗ ಮಧ್ಯದಲ್ಲಿ ಮಂಡ್ಯ, ರಾಮನಗರ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಕರಜಗಿ, ಹುಬ್ಬಳ್ಳಿ, ಹೊಳೆ ಆಲೂರು, ಬಾದಾಮಿ ಮತ್ತು ಬಾಗಲಕೋಟೆಯಲ್ಲಿ ನಿಲುಗಡೆ ಹೊಂದಿದೆ.

(ರೈಲು ನಂ 06204) ಬಿಜಾಪುರದಿಂದ ಮೈಸೂರಿಗೆ ಹಾಸನ ಮಾರ್ಗವಾಗಿ 21 ನೇ ಅಕ್ಟೋಬರ್‌ ರಂದು ದಸರಾ ವಿಶೇಷ ಪ್ರಯಾಣವನ್ನು ನಡೆಸಲಿದೆ. ರೈಲು ಬಿಜಾಪುರದಿಂದ 11:45 ಗಂಟೆಗೆ ಹೊರಟು ಮರುದಿನ 3 ಗಂಟೆಗೆ ಮೈಸೂರು ತಲುಪುತ್ತದೆ. ಮಾರ್ಗದಲ್ಲಿ ರೈಲಿಗೆ ಬಾಗಲಕೋಟೆ, ಬಾದಾಮಿ, ಹೊಳೆ ಆಲೂರು, ಹುಬ್ಬಳ್ಳಿ, ಕಾರಜಗಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ, ಹೊಳೆನರಸೀಪುರ ಮತ್ತು ಕೃಷ್ಣರಾಜನಗರದಲ್ಲಿ ನಿಲುಗಡೆ ಇರುತ್ತದೆ.

(ರೈಲು ಸಂಖ್ಯೆ 06203 ಮತ್ತು 06204) ಒಂದು ಎರಡನೆಯ ದರ್ಜೆ ಎಸಿ, ಮೂರು ಮೂರನೆಯ ದರ್ಜೆ ಎಸಿ, ಎಂಟು ಸ್ಲೀಪರ್ ದರ್ಜೆ ಮತ್ತು ನಾಲ್ಕು ದ್ವಿತೀಯ ದರ್ಜೆ ಆಸನದ ಕೋಚ್‌ಗಳ ಸಂಯೋಜನೆಯನ್ನು ಹೊಂದಿದೆ.

ಮೈಸೂರು-ಚಾಮರಾಜನಗರ ಮತ್ತು ಮೈಸೂರು-ಕೆಎಸ್‌ಆರ್ ಬೆಂಗಳೂರು ನಡುವೆ ಸಂಚರಿಸುವ ದಸರಾ ವಿಶೇಷ ರೈಲುಗಳ ಸಮಯ ಪರಿಷ್ಕರಣೆ.

(ರೈಲು ಸಂಖ್ಯೆ 06597) ಈಗ ಕೆಎಸ್‌ಆರ್ ಬೆಂಗಳೂರಿನಿಂದ 5 ಗಂಟೆಗೆ ಹೊರಟು 8:15 ಗಂಟೆಗೆ ಮೈಸೂರು ತಲುಪಲಿದೆ.

(ರೈಲು ನಂ 06598) ಮೈಸೂರಿನಿಂದ 8:30 ಗಂಟೆಗೆ ಹೊರಟು 11:30 ಗಂಟೆಗೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ. ಈ ವಿಶೇಷ ರೈಲುಗಳು ಹೆಚ್ಚುವರಿ ಜನದಟ್ಟಣೆ ತೆರವುಗೊಳಿಸಲು ಅಕ್ಟೋಬರ್ 20 ರಿಂದ ಅಕ್ಟೋಬರ್ 24 ರವರೆಗೆ ಸೇವೆಗಳನ್ನು ಹೊಂದಿರುತ್ತವೆ.

(ರೈಲು ನಂ 06283) ಮೈಸೂರಿನಿಂದ ಚಾಮರಾಜನಗರಕ್ಕೆ ಅಕ್ಟೋಬರ್ 24 ರಂದು 8:45 ಗಂಟೆಗೆ ಮೈಸೂರಿನಿಂದ ಹೊರಟು 10:40 ಗಂಟೆಗೆ ಚಾಮರಾಜನಗರ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ (ರೈಲು ನಂ 06284) ಅಕ್ಟೋಬರ್ 24 ರಂದು 11 ಗಂಟೆಗೆ ಚಾಮರಾಜನಗರದಿಂದ ಹೊರಟು ಮರುದಿನ 1 ಗಂಟೆಗೆ ಮೈಸೂರಿಗೆ ತಲುಪುತ್ತದೆ.

ಪ್ರಯಾಣಿಸುವ ಸಾರ್ವಜನಿಕರು ಈ ದಸರಾ ಹಬ್ಬದಲ್ಲಿ ತೊಂದರೆ ರಹಿತ ಪ್ರಯಾಣಕ್ಕಾಗಿ ಈ ವಿಶೇಷ ರೈಲು ಸೇವೆಗಳನ್ನು ಬಳಸಿಕೊಳ್ಳಬಹುದು ಮತ್ತು ಪ್ರಯಾಣಿಕರು ಕಾಯ್ದಿರಿಸದ ಟಿಕೆಟ್‌ಗಳನ್ನು ತೊಂದರೆ ಮುಕ್ತವಾಗಿ ಖರೀದಿಸಲು ಯುಟಿಎಸ್‌ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ ಎಂದು ಹೇಳಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...