ಮೈಸೂರು | ಹಾಡಿ ಜನರ ಜಮೀನು ದಾರಿ ಒತ್ತುವರಿ; ಮನವಿಗೆ ಸ್ಪಂದಿಸದ ತಹಶೀಲ್ದಾರ್

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಹೆಮ್ಮಿಗೆ ಹಾಡಿಯಲ್ಲಿ ಜಮೀನು ಹಾಗೂ ಕಾಡಿಗೆ ಹೋಗುವ ರಸ್ತೆಯನ್ನು ಒತ್ತುವರಿ ಮಾಡಿದ್ದು, ಸದರಿ ವಿಚಾರವಾಗಿ ಕಂದಾಯ ಇಲಾಖೆ, ತಹಶೀಲ್ದಾರ್ ಅವರಿಗೆ ಎಷ್ಟೇ ಮನವಿ ಕೊಟ್ಟರು ಸ್ಪಂದಿಸುತಿಲ್ಲ ಎಂದು ಬುಡಕಟ್ಟು ಕೃಷಿಕರ ಸಂಘಟನೆಯ ಅಧ್ಯಕ್ಷ ಕೊಳವಿಗೆ ಜಯಪ್ಪ ಆರೋಪ ಮಾಡಿದ್ದಾರೆ.

ಬುಡಕಟ್ಟು ಕೃಷಿಕರ ಸಂಘದ ಮಾಸಿಕ ಸಭೆಯಲ್ಲಿ ಮಾತನಾಡಿದ ಆದಿವಾಸಿ ಬುಡಕಟ್ಟು ಸಮುದಾಯದ ಮುಖಂಡರು ಇದುವರೆಗೆ ನೀಡಿದ ಮನವಿಗಳಿಗೆ ಯಾವುದೇ ಸ್ಪಂದನೆ ಇಲ್ಲದಿರುವುದರಿಂದ ತಾಲ್ಲೂಕು ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ರಸ್ತೆ ಬಿಡಿಸಿಕೊಡುವಂತೆ ಒತ್ತಾಯಿಸಲಾಗುವುದು ಎಂದಿದ್ದಾರೆ.

ಗೃಹಜ್ಯೋತಿ ಯೋಜನೆಯಡಿಯಲ್ಲಿ ಕಲ್ಪಿಸಲಾದ ವಿದ್ಯುತ್ ಸಂಪರ್ಕಕ್ಕೆ ಸರ್ಕಾರದಿಂದ ಹಣ ಪಾವತಿ ಮಾಡುವುದಿದ್ದರೂ ಸಹ ಸೆಸ್ಕ್ ಸರಿ ಸುಮಾರು 30 ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ಗ್ಯಾರೆಂಟಿ ಯೋಜನೆಯ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸರ್ವಧಿಕಾರ ಧೋರಣೆ ತೋರಿದೆ. ಸರ್ಕಾರದ ಯೋಜನೆಗಳನ್ನು ಸಹ ಅಧಿಕಾರಿಗಳು ಪಾಲನೆ ಮಾಡುತ್ತಿಲ್ಲ. ಬಡವರ ಮೇಲೆ ಗದಪ್ರಹಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಿರಿಜನ ಹಾಡಿಗಳ ಮನೆ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಗಿರಿಜನ ಕಲ್ಯಾಣ ಇಲಾಖೆಗೆ ಸೂಚನೆ ಇದ್ದರು ಕ್ರಮವಹಿಸಿಲ್ಲ, ಅಧಿಕಾರಿಗಳಿಗೆ ಹಾಡಿ ಜೀವನದ ಕಷ್ಟದ ಅರಿವು ಇಲ್ಲ, ಅವರಿಗೇನು ಮನಬಂದಂತೆ ನಡೆದುಕೊಳ್ಳುತ್ತಾರೆ. ಕಷ್ಟ ಪಡುವುದು, ತೊಂದರೆ ಅನುಭವಿಸುವುದು ಹಾಡಿ ಕುಟುಂಬಗಳು. ಇದೆಲ್ಲ ಸರ್ಕಾರದ ಕಣ್ಣಿಗೆ ಕಾಣೋದೆ ಇಲ್ಲ. ಕತ್ತಲೆಯಲ್ಲಿ ಜೀವನ ಮಾಡುತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಚಿಕ್ಕ ಹುಣಸೂರಿನ ಡೀಡ್ ಸಂಸ್ಥೆಯ ನಿರ್ದೇಶಕ ಶ್ರೀಕಾಂತ್ ಮಾತನಾಡಿ ” ಬಿಲ್ಲೆನಹೊಸಹಳ್ಳಿ ಹಾಡಿಯಲ್ಲಿ ಮೈಸೂರಿನ ಎನ್ಐಇ ಕಾಲೇಜು ವತಿಯಿಂದ ಕಳೆದ ವರ್ಷ ಸೋಲಾರ್ ಮೈಕ್ರೋಗಿಡ್ ಸ್ಥಾಪಿಸಿ 70 ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಇದರಂತೆಯೇ ಹಮ್ಮಿಗೆ ಹಾಡಿಯಲ್ಲಿ ಮೈಕ್ರೋಗಿಡ್ ಸ್ಥಾಪಿಸುವ ಮನವಿ ಬಂದಿದ್ದು ಡೀಡ್ ಈ ಬಗ್ಗೆ ಚಿಂತನೆ ನಡೆಸಿದೆ.

ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರದ ಸಹಕಾರದಿಂದ ತಾಲ್ಲೂಕಿನ ಕೊಳವಿಗೆ ಹಾಡಿಯಲ್ಲಿ ಏ. 23 ರಂದು ಸರ್ಕಾರಿ ಯೋಜನೆಗಳ ಪರಿಚಯ ಹಾಗೂ ಸಂಶೋಧಕರೊಂದಿಗೆ ಡಾ. ನಂಜುಂಡ ಅವರ ನೇತೃತ್ವದಲ್ಲಿ ಆದಿವಾಸಿ ಮುಖಂಡರ ಚರ್ಚೆ ನಡೆಯಲಿದೆ ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವನ್ಯಜೀವಿ ಬೇಟೆ; ಮಾಂಸ ಮಾರಾಟ, ಮಾವುತರ ವಿರುದ್ಧ ಕ್ರಮ

ಸಭೆಯಲ್ಲಿ ಆದಿವಾಸಿ ಮುಖಂಡ ವಿಠಲ್ ನಾಣಚ್ಚಿ, ಹರ್ಷ, ಶಿವಣ್ಣ, ಮುನಿ ರಾಮಯ್ಯ, ದೊಡ್ಡ ಮಾರಯ್ಯ, ಗಂಗಮ್ಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...