ಮೈಸೂರು | ನ್ಯಾಯಬೆಲೆ ಅಂಗಡಿ ಮಾಲೀಕನ ದಬ್ಬಾಳಿಕೆ ; ಪ್ರಶ್ನಿಸಿದ್ದಕ್ಕೆ ಅವಾಚ್ಯ ನಿಂದನೆ

Date:

ಮೈಸೂರು ನಗರದ ಮಂಚೇಗೌಡನ ಕೊಪ್ಪಲಿನಲ್ಲಿರುವ ಪ್ರತಿಮಾ ನ್ಯಾಯಬೆಲೆ ಅಂಗಡಿಯ ಮಾಲೀಕ ರಾಮಚಂದ್ರ ಅವರು ಸರಿಯಾದ ಸಮಯಕ್ಕೆ ಪಡಿತರ ನೀಡದೆ, ಅನಾವಶ್ಯಕ ಕಾಲಾಹರಣ ಮಾಡುತಿದ್ದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ, ದಬ್ಬಾಳಿಕೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಸ್ವರ್ಣರವರು, ಮೈಸೂರು ನಗರದ, ಹೆಬ್ಬಾಳ ವ್ಯಾಪ್ತಿಯ, ಮಂಚೇಗೌಡನ ಕೊಪ್ಪಲಿನಲ್ಲಿರುವ ಪ್ರತಿಮಾ ನ್ಯಾಯಬೆಲೆ ಅಂಗಡಿಯ ಪಡಿತರ ಫಲಾನುಭವಿಯಾಗಿದ್ದು, ಜನವರಿ ತಿಂಗಳ ಪಡಿತರ ತರಲು ಬುಧವಾರ (ದಿನಾಂಕ-21-01-2026)ರಂದು ಬೆಳಗ್ಗೆ ಸರಿಸುಮಾರು 7-30ಕ್ಕೆ ತೆರಳಿರುತ್ತೇನೆ. ನ್ಯಾಯಬೆಲೆ ಅಂಗಡಿ ತೆರೆದಿದ್ದರು ಮಾಲೀಕ ಯಾವುದೇ ಮಾಹಿತಿ ನೀಡದೆ ಅನಾಗತ್ಯ ಕಾಲಾಹರಣ ಮಾಡುತಿದ್ದರು.

ಮೈಸೂರು ನಗರದಲ್ಲಿ ಸರ್ವೇ ಸಾಮಾನ್ಯವಾಗಿ ಬೆಳಗ್ಗೆ ಜೀವನಾಗತ್ಯ ಕೆಲಸ ನಿರ್ವಹಿಸಿ ತಮ್ಮ ತಮ್ಮ ಕೆಲಸಕ್ಕೆ ಹೋರಾಡಬೇಕಾದ ಅನಿವಾರ್ಯ ಸಮಯ. ಅಂತಹದ್ದರಲ್ಲಿ ಗಂಟೆ 8-45 ಆದರೂ ಸಹ ಸರತಿ ಸಾಲಿನಲ್ಲೇ ನಿಂತಿದ್ದರು ಪಡಿತರ ನೀಡುತ್ತಿರಲಿಲ್ಲ.
ಸುಮಾರು 50ಕ್ಕೂ ಹೆಚ್ಚು ಜನರು ಸಹ ಕಾದು ನಿಂತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೆಲ್ಲಾ ಗಮನಿಸಿ ನ್ಯಾಯಬೆಲೆ ಅಂಗಡಿ ಮಾಲೀಕ ರಾಮಚಂದ್ರ ಆರಾಮಾಗಿ ಕುಳಿತ್ತಿದ್ದನ್ನು ಕಂಡು ಪಡಿತರ ನೀಡದಿರುವುದಕ್ಕೆ ಏನು ಸಮಸ್ಯೆ?, ಇಷ್ಟು ಹೊತ್ತು ಕಾದರು ಕೊಡುತಿಲ್ಲವಲ್ಲ? ಎಂದು ಪ್ರಶ್ನಿಸಿದ್ದಕ್ಕೆ, ಸರ್ಕಾರದಲ್ಲೇ ಅಕ್ಕಿ ಇಲ್ಲ ಹೋಗಮ್ಮ(ಅವಾಚ್ಯ ನಿಂದನೆ ಮೂಲಕ), ಕಂಪ್ಯೂಟರ್ ಸಮಸ್ಯೆ ಸರ್ವರ್ ಇಲ್ಲ ಎಂತೆಲ್ಲ ವಾದ ಮುಂದುವರೆಸುತ್ತಾರೆ, ಅದೇನು ಸಮಸ್ಯೆ ತೋರಿಸಿ ಎಂದಾಗ ನಿಮ್ ಅಪ್ಪಂದ ಲ್ಯಾಪ್ಟಾಪ್ ಎಂದು ಏಕವಚನದಲ್ಲಿ ನಿಂದಿಸಿದ್ದಾರೆ. ಅಲ್ಲದೇ ಅಸಭ್ಯವಾಗಿ, ಅವಾಚ್ಯವಾಗಿ ಮಾತನಾಡಿದ್ದಾರೆ. ಇದಕ್ಕೆ ಪೂರಕವಾಗಿ ವಿಡಿಯೋ ರೆಕಾರ್ಡ್ ಇದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುತ್ತದೆ. ಅಲ್ಲದೇ, ಸರ್ಕಾರವನ್ನು ಹೋಗಿ ಪ್ರಶ್ನಿಸು, ಬೇರೆ ಅಂಗಡಿಯಲ್ಲಿ ತೆಗೆದುಕೋ, ಹೇಯ್ ಸೈಡ್‌ಗೆ ಹೋಗು, ಎಂತೆಲ್ಲಾ ದುರಂಹಕಾರದಿಂದ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ. ಜೊತೆಗೆ ಅಕ್ಕಿ ಇಲ್ಲ ಎಂದು ದಬ್ಬಾಳಿಕೆ ಮಾಡಿರುತ್ತಾರೆ ಎಂದು ಆರೋಪ ಮಾಡಿದರು.

ಸರ್ಕಾರದ ಅನ್ನಭಾಗ್ಯ ಯೋಜನೆ ಉಚಿತವಾಗಿರುವಾಗ ಪ್ರತಿಯೊಬ್ಬರಿಂದಲೂ ₹10 ರೂಪಾಯಿ ವಸೂಲಿ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಇದನ್ನ ಸಂಬಂಧಪಟ್ಟ ಅಧಿಕಾರಿಗಳು, ಆಹಾರ ಇಲಾಖೆ ಕ್ರಮ ವಹಿಸಬೇಕು. ಸಮಸ್ಯೆ ಬಗ್ಗೆ ದೂರು ನೀಡಲು ಸಹಾಯವಾಣಿ 1967 ಕರೆ ಮಾಡಿದರೆ ಯಾವುದೇ ಪ್ರಯೋಜನವಾಗಿರುವುದಿಲ್ಲ. ಸಹಾಯವಾಣಿ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸುತಿಲ್ಲ. ಹಾಗೆಯೇ, ಕರೆ ಮಾಡಲು ಸಾಧ್ಯವೇ ಆಗದ ಪರಿಸ್ಥಿತಿ. ಹೀಗಿರುವಾಗ ಇಂತಹ ಸಹಾಯವಾಣಿ ಏತಕ್ಕೆ
ಇರಿಸಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ‘ಪ್ರಸಾದ್ ಯೋಜನೆ’ಯಿಂದ ಚಾಮುಂಡಿಬೆಟ್ಟ ಪಾರಂಪರಿಕತೆಗೆ ದಕ್ಕೆಯಾಗದಂತೆ ಅಭಿವೃದ್ಧಿ ಮಾಡಲಾಗುವುದು: ಸಚಿವ ಮಹದೇವಪ್ಪ

ಪ್ರಶ್ನೆ ಮಾಡಿದಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕ ಅವಾಚ್ಯವಾಗಿ ನಿಂದಿಸಿ, ದಬ್ಬಾಳಿಕೆ ನಡೆಸಿರುವುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ರೀತ್ಯಾ ಕ್ರಮ ವಹಿಸಬೇಕು, ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದುಗೊಳಿಸಬೇಕು. ಮಹಿಳಾ ಆಯೋಗ ಸೇರಿದಂತೆ, ಮೇಲಾಧಿಕಾರಿಗಳಿಗೆ ಈ ಸಂಬಂಧ ದೂರು ಸಲ್ಲಿಸುವುದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...