ಮೈಸೂರು | ಕೈಕೊಟ್ಟ ಮುಂಗಾರು; ಆಗಸದತ್ತ ಮುಖ ಮಾಡುತ್ತಿರುವ ರೈತರು

Date:

ಮೈಸೂರು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರಿಂದ ರೈತರು ಕೃಷಿ ಭೂಮಿ ಹದ ಮಾಡಿ, ತಂಬಾಕು, ಹತ್ತಿ, ಜೋಳ, ಸೂರ್ಯಕಾಂತಿ ಹಾಗೂ ದ್ವಿದಳ ದಾನ್ಯಗಳನ್ನು ಬಿತ್ತಿದ್ದರು. ಆದರೆ ಮೇ ಕೊನೆಯಿಂದ ಮಳೆ ಬೀಳದ ಹಿನ್ನೆಲೆಯಲ್ಲಿ ಬೆಳೆ ಒಣಗುತ್ತಿದ್ದು, ರೈತರು ಮಳೆ ಯಾವಾಗ ಬೀಳುತ್ತದೆಯೋ ಎಂದು ಆಗಸದತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಸ್ತುತ ವರ್ಷದಲ್ಲಿ ಮುಂಗಾರು ಆರಂಭ ದುರ್ಬಲವಾಗಿರುವ ಕಾರಣ ಮಳೆ ವಿಳಂಬವಾಗುತ್ತಿದೆ. ಕೇರಳಕ್ಕೆ ಮೊದಲ ವಾರದಲ್ಲಿ ಮಳೆ ಆಗಮಿಸಿದ್ದರೂ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಗಾಳಿಯ ತೀವ್ರತೆ ಇಲ್ಲದೇ ರಾಜ್ಯಕ್ಕೆ ಮುಂಗಾರು ಪ್ರವೇಶ ತಡವಾಗಿದೆ. ಹೀಗಾಗಿ ಜೂ. 10 ರಿಂದ 12ರ ಒಳಗಾಗಿ ಮಳೆ ಆಗಮಿಸುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಹೇಳಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಜಮೀನು ಉಳುಮೆ ಮಾಡಿ ಬಿತ್ತನೆ ಮಾಡಿದ್ದ ರೈತರು ಎರಡು ಬಾರಿ ಉಳುಮೆ ಮಾಡಿ, ರಸಗೊಬ್ಬರ ನೀಡಿದ್ದರು. ಮೇ ಅಂತ್ಯ ಮತ್ತು ಜೂನ್ ಮೊದಲ ವಾರದಲ್ಲಿ ಬೆಳೆ ಮೊಳಕೆಯೊಡೆದು, ಭೂಮಿಯಿಂದ ಮೇಲ್ಬರುವ ವೇಳೆಗೆ ಮುಂಗಾರು ಕೈಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಳೆ ಒಣಗುವಂತಾಗಿದೆ. ಪರಿಣಾಮ ಈ ಬಾರಿ ಹಲಸಂದೆ, ಎಸರು, ಉದ್ದು, ಸೂರ್ಯಕಾಂತಿ, ಹತ್ತಿ, ಜೋಳ ಹಾಗೂ ತಂಬಾಕು ಬೆಳೆಯಲ್ಲಿ ಇಳುವರಿ ಕುಂಠಿತಗೊಳ್ಳುವ ಭೀತಿ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಸಿಲಿನ ತೀವ್ರತೆ ಹೆಚ್ಚು

“ಜಿಲ್ಲೆಯಲ್ಲಿ ಬೇಸಿಗೆ ಕಳೆದು ಮಳೆಗಾಲ ಆರಂಭವಾದರೂ ಬೇಸಿಗೆಯ ವಾತಾವರಣ ಮುಂದುವರೆದಿದೆ. ಸಾಮಾನ್ಯವಾಗಿ 33 ಸೆಲ್ಸಿಯಸ್ ಉಷ್ಣಾಂಶವಿದ್ದರೆ, 36ರಿಂದ 38 ಉಷ್ಣಾಂಶದಷ್ಟು ತಾಪಮಾನದ ಅನುಭವ ಕಂಡುಬರುತ್ತಿದೆ. ಪರಿಣಾಮ ಮಳೆಗಾಲದಲ್ಲೂ ಬೇಸಿಗೆ ವಾತಾವರಣವಿದ್ದು, ಬಿಸಿಲಿನ ತೀವ್ರತೆ ಹೆಚ್ಚಿದೆ. ಪರಿಣಾಮ ನೀರಿಲ್ಲದೆ ಬೆಳೆ ಬಾಡುವಂತಾಗಿದೆ. ಒಂದು ವೇಳೆ ಜೂನ್ ಮಧ್ಯದಲ್ಲಿ ಮಳೆಯಾಗದೇ ಇದ್ದರೆ ಬೆಳೆ ಸಂಪೂರ್ಣವಾಗಿ ಒಣಗುವ ಸಾಧ್ಯಯತೆಗಳಿವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಪರ್‌ಜಾಯ್‌ ಚಂಡಮಾರುತ; ಕೆಲವೆಡೆ ಸೃಷ್ಟಿಯಾದ ಅವಾಂತರ

ವಾಡಿಕೆಯಂತೆ ಈ ಬಾರಿ ಮಳೆ ಕಡಿಮೆಯಾಗಿದ್ದು, ಇದು ಜೂನ್ ತಿಂಗಳಿಗೂ ಮುಂದುವರೆಯುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 2022 ಮಾರ್ಚ್‌ನಲ್ಲಿ 30.1 ಮಿಮೀ ಮಳೆಯಾಗಿದ್ದರೆ ಈ ಬಾರಿಯ ಮಾರ್ಚ್‌ನಲ್ಲಿ 15.7 ರಷ್ಟು ಮಳೆಯಾಗಿದೆ. ಹಾಗೆಯೇ ಕಳೆದ ವರ್ಷದ ಏಪ್ರಿಲ್‌ನಲ್ಲಿ 71.6 ರಷ್ಟು ಮಳೆಯಾಗಿದ್ದರೆ, ಈ ಬಾರಿ 33.7 ರಷ್ಟು ಹಾಗೂ ಕಳೆದ ವರ್ಷದ ಮೇ ತಿಂಗಳಿನಲ್ಲಿ 251.6 ಮಿಮೀ ಮಳೆಯಾಗಿದ್ದು, ಈ ಬಾರಿ 155.7 ಮಿಮೀ ಮಳೆಗೆ ಕುಸಿತ ಕಂಡಿದೆ. ಒಟ್ಟಾರೆ ಕಳೆದ ವರ್ಷ 383.5ರಷ್ಟು ಮಳೆಯಾಗಿದ್ದರೆ, ಈ ಬಾರಿ 220 ಮಿಮೀ ನಷ್ಟು ಕಡಿಮೆ ಮಳೆಯಾಗಿದೆ.

ಹಿಂಗಾರಿನಲ್ಲೂ ಮಳೆ ಕೊರತೆ
2022ರ ಹಿಂಗಾರಿನಲ್ಲೂ ಜಿಲ್ಲೆಯಲ್ಲಿ ರೈತರು ಉತ್ತಮ ಮಳೆ ಬಾರದೆ ನಷ್ಟ ಅನುಭವಿಸಿದ್ದರು. ಸೆಪ್ಟಂಬರ್, ನವೆಂಬರ್‌ನಲ್ಲಿ ಉತ್ತಮ ಮಳೆ ಬೀಳದ ಪರಿಣಾಮ ರಾಗಿ, ಜೋಳ, ಹತ್ತಿ, ಹುರುಳಿ, ಅವರೆ ಸೇರಿದಂತೆ ಇತರೆ ಬೆಳೆಗಳಲ್ಲಿ ವಾಡಿಕೆಗಿಂತ ಕಡಿಮೆ ಇಳುವರಿ ಬಂದಿದ್ದರಿಂದ ರೈತರು ನಷ್ಟಕ್ಕೀಡಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...