ಮೈಸೂರು | ಬರ ನಿರ್ವಹಣೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ; ರೈತ ಸಂಘ ಆಗ್ರಹ

Date:

ರಾಜ್ಯ ಬರಗಾಲಕ್ಕೆ ತುತ್ತಾಗಿದ್ದು, ಈಗಾಗಲೇ ಸರ್ಕಾರ 130 ತಾಲೂಕುಗಳನ್ನು ಬರ ಪ್ರದೇಶವೆಂದು ಘೋಷಿಸಲು ಆಲೋಚನೆ ಮಾಡಿದೆ. ಕೇಂದ್ರ ಸರ್ಕಾರ ರಾಜ್ಯದ ಬರಗಾಲವನ್ನು ಸಮರೋಪಾದಿಯಲ್ಲಿ ಎದುರಿಸಲು ತುರ್ತಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ರಾಜ್ಯದ ರೈತರನ್ನು ರಕ್ಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ್ದು, ಮೈಸೂರು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಎನ್‌ಡಿಆರ್‌ಎಫ್‌ ನೀತಿಯು ಓಬಿರಾಯನ ಕಾಲದ್ದಾಗಿದ್ದು, ಅದನ್ನು ಕೂಡಲೇ ಮಾರ್ಪಾಡು ಮಾಡಿ ವೈಜ್ಞಾನಿಕವಾಗಿ ರೂಪಿಸಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು. ಅಂತರ್ಜಲ ವೃದ್ಧಿಸಲು ನೆರವು ನೀಡಬೇಕು. ರೈತರ ಸಾಲವನ್ನು ಮನ್ನಾ ಮಾಡಲು ಸಹಕರಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾವೇರಿ ಜಲ ವಿವಾದದ ತೀರ್ಪಿನಲ್ಲಿ ನ್ಯಾಯ ಮಂಡಳಿಯಾಗಲಿ ಅಥವಾ ಸರ್ವೋಚ್ಚ ನ್ಯಾಯಾಲಯವಾಗಲಿ ಸಂಕಷ್ಟ ಸೂತ್ರಕ್ಕೆ ಸ್ಪಷ್ಟವಾದ ಮಾನದಂಡವನ್ನು ರೂಪಿಸಿರುವುದಿಲ್ಲ. ಈ ಕಾರಣದಿಂದಾಗಿ ಮಳೆ ಕೊರತೆ ಸಂದರ್ಭದಲ್ಲಿ ವಿವಾದವು ಬಿಗಡಾಯಿಸಿ ಅವಲಂಬಿತರು ಅತ್ಯಂತ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಕೇಂದ್ರ ಸರ್ಕಾರ ಈ ಸಂಬಂಧ ಸೂಕ್ತ ಸಂಕಷ್ಟ ಸೂತ್ರವನ್ನು ರೂಪಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

“ಕಬ್ಬು ಬೆಲೆ ನಿಗದಿ ಮಾಡಲು ಕೇಂದ್ರ ಸರ್ಕಾರ ಶೇ.10.25ರಷ್ಟು ಇಳುವರಿಯನ್ನು ಆಧಾರವಾಗಿ ಇಟ್ಟುಕೊಂಡಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಇದನ್ನು ಮಾರ್ಪಾಡು ಮಾಡಿ ಶೇ.8.5ರಷ್ಟು ಇಳುವರಿ ಮಾನದಂಡವನ್ನು ಅನುಸರಿಸಬೇಕು. ಉತ್ಪನ್ನ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದು, ಬೆಲೆ ನಿಗದಿಯಲ್ಲಿ ರೈತರನ್ನು ರಕ್ಷಿಸುವ ನೀತಿಯನ್ನು ಅನುಸರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಕಲ್ಯಾಣ, ಹುಲಸೂರ ಬರಪೀಡಿತ ತಾಲೂಕು ಘೋಷಣೆಗೆ ರೈತ ಸಂಘ ಆಗ್ರಹ

“ಸ್ಥಳೀಯವಾಗಿ ಕೋಚನಹಳ್ಳಿ ಸಮಸ್ಯೆ ಪರಿಹಾರಕ್ಕಾಗಿ 800ಕ್ಕೂ ಹೆಚ್ಚು ದಿನಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ವಸತಿ ಸೌಕರ್ಯ ಕಲ್ಪಿಸಿ ಕೊಡುವ ಭರವಸೆಯನ್ನು ತಾವು ನೀಡಿದ್ದೀರಿ. ಅವರ ವಸತಿಗಾಗಿ ಜಮೀನನ್ನು ಒದಗಿಸಿಕೊಡಬೇಕು. ಹಾಗೂ ಸೂಕ್ತ ಪರಿಹಾರಗಳು ಅವರಿಗೆ ಇನ್ನೂ ತಲುಪಿಲ್ಲ. ಈ ಸಮಸ್ಯೆಗಳಿಗೆ ಒಂದು ತಾರ್ಕಿಕ ಅಂತ್ಯವನ್ನು ಮುಖ್ಯಮಂತ್ರಿಯವರು ನೀಡಬೇಕು” ಎಂದು ಒತ್ತಾಯಿಸಿದರು.

“ಕಾವೇರಿ ಮತ್ತು ಕಬಿನಿ ನೀರನ್ನು ವ್ಯವಸಾಯಕ್ಕೆ 15 ದಿನ ನೀರು ಬಿಟ್ಟು 10 ದಿನ ನೀರು ನಿಲ್ಲಿಸುವ ವ್ಯವಸ್ಥೆಯ ಮಾದರಿಯಲ್ಲೇ ಸರ್ಕಾರ ಹಾಗೂ ನೀರಾವರಿ ಇಲಾಖೆ ರೈತರ ವ್ಯವಸಾಯಕ್ಕೆ ನೀರು ಹರಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಸೇರಿದಂತೆ ಬಹುತೇಕ ರೈತ ಮುಖಂಡುರು ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...