ಸಾಂಸ್ಕೃತಿಕ ನಗರಿ ಮೈಸೂರು ಸ್ವಚ್ಛತೆಯಲ್ಲಿ ದೇಶಕ್ಕೇ ಅಗ್ರಸ್ಥಾನಕ್ಕೇರಿಸುವ ಸಂಕಲ್ಪದೊಂದಿಗೆ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ‘ಫ್ಲಾಗಿಂಗ್ ಅಭಿಯಾನ’ದ ಭಾಗವಾಗಿ ಮೈಸೂರು ನಗರದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಸ್ವಚ್ಛ ಸರ್ವೇಕ್ಷಣ್ 2.0 ಅಭಿಯಾನದ ಭಾಗವಾಗಿ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಇದಾಗಿದ್ದು ಒಂದೇ ಗಂಟೆಯಲ್ಲಿ 600ಕೆಜಿ ಒಣ ಕಸ ಸಂಗ್ರಹವಾಗಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಶ್ರಮದಾನದಲ್ಲಿ ಫೀನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿಯ ವಿದ್ಯಾರ್ಥಿಗಳು, ಜೆಎಸ್ಎಸ್ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಈ ಬೃಹತ್ ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 600 ಕೆಜಿಯಷ್ಟು ಒಣ ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು.

ಅಭಿಯಾನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸ್ವಯಂಸೇವಕರು ಪ್ರಥಮ ಬಹುಮಾನವನ್ನು ಮುಡಿಗೇರಿಸಿಕೊಂಡರೆ, ಫೀನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿತು. ಜೆ ಎಸ್ ಎಸ್ ತೃತೀಯ ಬಹುಮಾನ ನೀಡಲಾಯಿತು. ಸಮುದಾಯ ಸಂಘಟಕರು ಮತ್ತು ನಾಗರಿಕರು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮತ್ತು ಸ್ವಚ್ಛ ನಗರವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ‘ದಿ. ಬಿ ಎಸ್ ಗೋಪಾಲಕೃಷ್ಣ ದತ್ತಿ’ ಪ್ರಶಸ್ತಿಗೆ ಭಾಜನರಾದ ವೈದ್ಯ ಡಾ. ಕೆ ಬಿ ಸೂರ್ಯಕುಮಾರ್

ಅಭಿಯಾನದಲ್ಲಿ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಸಮೀರ್ ಪ್ರಕಾಶ್ ಕೋಡೆ, ವಲಯ ಆಯುಕ್ತ ಎ. ರಮೇಶ್ , ಸ್ವಚ್ಛ ಭಾರತ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಎಸ್. ಮೃತ್ಯುಂಜಯ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೀನಾಕ್ಷಿ ಸೇರಿದಂತೆ ಪರಿಸರ ಇಂಜಿನಿಯರ್ಗಳು, ಆರೋಗ್ಯ ನಿರೀಕ್ಷಕರು ಇದ್ದರು.





